AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಕರ್ನಾಟಕಕ್ಕೆ 5 ಕೋಟಿ ರೂ. ವ್ಯಾಜ್ಯ ಶುಲ್ಕ ಪಾವತಿಸಲು ತಮಿಳುನಾಡು ಸರ್ಕಾರಕ್ಕೆ ಆದೇಶ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಅಕ್ರಮ ಆಸ್ತಿ ಜಪ್ತಿ ಮಾಡಲಾಗಿದೆ. ಇದರ ವಿವರಗಳನ್ನು ಎಸ್​ಪಿಪಿ ಕಿರಣ್ ಎಸ್ ಜವಳಿ ಅವರು ಬೆಂಗಳೂರು ವಿಶೇಷ ಕೋರ್ಟ್​ಗೆ ಸಲ್ಲಿಸಿದ್ದಾರೆ. ಅದರಂತೆ, ವ್ಯಾಜ್ಯ ಶುಲ್ಕವಾಗಿ ಕರ್ನಾಟಕಕ್ಕೆ ಐದು ಕೋಟಿ ರೂಪಾಯಿ ಪಾವತಿಸುವಂತೆ ತಮಿಳುನಾಡು ಸರ್ಕಾರಕ್ಕೆ ವಿಶೇಷ ಕೋರ್ಟ್ ಆದೇಶಿಸಿದೆ.

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಕರ್ನಾಟಕಕ್ಕೆ 5 ಕೋಟಿ ರೂ. ವ್ಯಾಜ್ಯ ಶುಲ್ಕ ಪಾವತಿಸಲು ತಮಿಳುನಾಡು ಸರ್ಕಾರಕ್ಕೆ ಆದೇಶ
ಜೆ.ಜಯಲಲಿತಾImage Credit source: PTI
Ramesha M
| Edited By: |

Updated on:Jan 22, 2024 | 9:37 PM

Share

ಬೆಂಗಳೂರು, ಜ.22: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ (J.Jayalalithaa) ಅವರ ಅಕ್ರಮ ಆಸ್ತಿ ಜಪ್ತಿ ಮಾಡಲಾಗಿದೆ. ಇದರ ವಿವರಗಳನ್ನು ಎಸ್​ಪಿಪಿ ಕಿರಣ್ ಎಸ್ ಜವಳಿ ಅವರು ಬೆಂಗಳೂರು (Bengaluru) ವಿಶೇಷ ಕೋರ್ಟ್​ಗೆ ಸಲ್ಲಿಸಿದ್ದಾರೆ. ಅದರಂತೆ, ವ್ಯಾಜ್ಯ ಶುಲ್ಕವಾಗಿ ಕರ್ನಾಟಕಕ್ಕೆ ಐದು ಕೋಟಿ ರೂಪಾಯಿ ಪಾವತಿಸುವಂತೆ ತಮಿಳುನಾಡು (Tamil Nadu) ಸರ್ಕಾರಕ್ಕೆ ವಿಶೇಷ ಕೋರ್ಟ್ ಆದೇಶಿಸಿದೆ.

ಡಿಡಿ ರೂಪದಲ್ಲಿ ಐದು ಕೋಟಿ ರೂಪಾಯಿಯನ್ನು ಕರ್ನಾಟಕ ಸರ್ಕಾರಕ್ಕೆ ನೀಡಲು ಸೂಚನೆ ನೀಡಲಾಗಿದೆ. ಜಯಲಲಿತಾ ಅವರಿಗೆ ಸೇರಿದ ಒಡವೆ ತನ್ನ ವಶದಲ್ಲಿರುವ ಹಿನ್ನೆಲೆ ಒಡವೆ ಹರಾಜು ಬದಲು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡಲು ವಿಶೇಷ ಕೋರ್ಟ್ ನಿರ್ಧಾರ ಮಾಡಿದೆ.

ಇದನ್ನೂ ಓದಿ: ಶಿವರಾಮ ಕಾರಂತ ಬಡಾವಣೆಯಲ್ಲಿ ಸದ್ಯಕ್ಕಿಲ್ಲ ನಿವೇಶನ ಹಂಚಿಕೆ: ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಆದೇಶ

ಅಲ್ಲದೆ, ತಮಿಳುನಾಡಿನ ಗೃಹ ಕಾರ್ಯದರ್ಶಿ ಪೊಲೀಸರೊಂದಿಗೆ ಕೋರ್ಟ್​​ಗೆ ಹಾಜರಾಗಬೇಕು. ಒಡವೆಗಳನ್ನು ಗುರುತಿಸಿ ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳುವಂತೆ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಮೋಹನ್‌ ಅವರು ಸೂಚಿಸಿದ್ದಾರೆ.

1996ರಲ್ಲಿ ಜಯಲಲಿತಾ ಅವರು ಅಕ್ರಮ ಆಸ್ತಿಗಳಿಸಿದ್ದಾರೆಂಬ ಆರೋಪದಲ್ಲಿ ಸಿಬಿಐ ದಾಳಿ ನಡೆಸಿದ್ದರು. 1997ರಲ್ಲಿ ಪ್ರಕರಣದ ಚಾರ್ಜ್‌ಶೀಟ್‌ ಕೂಡ ಸಲ್ಲಿಕೆಯಾಗಿತ್ತು. ಇದರ ವಿಚಾರಣೆ ನಡೆದು ಶಿಕ್ಷೆ ಪ್ರಕಟವಾಗುವ ಮುನ್ನವೇ ಜಯಲಲಿತಾ ಅವರು 2016 ರಲ್ಲಿ‌ ಮೃತಪಟ್ಟಿದ್ದರು.

ಜಯಲಲಿತಾ ಅವರು 1991ರಿಂದ 96 ನಡುವೆ ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿತ್ತು. ಚೆನ್ನೈನಲ್ಲಿ ಐಷಾರಾಮಿ ಬಂಗಲೆಗಳನ್ನು ಹೊಂದಿದ್ದರು, ಹೈದರಾಬಾದ್‌ ಬಳಿ ಫಾರ್ಮ್‌ ಹೌಸ್‌, ತಮಿಳುನಾಡಿನ ನೀಲಗಿರಿ ಪ್ರದೇಶದಲ್ಲಿ ಭಾರಿ ಚಹಾ ತೋಟ, ಬೆಲೆಬಾಳುವ ಆಭರಣ, ಕಾರ್ಖಾನೆಗಳು, ಬ್ಯಾಂಕ್‌ ಖಾತೆಗಳಲ್ಲಿ ಸಂಪತ್ತು ಕ್ರೋಡೀಕರಣ, ಐಷಾರಾಮಿ ಕಾರುಗಳನ್ನು ಹೊಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:22 pm, Mon, 22 January 24

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್