Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಆಸ್ತಿಗಳಿಕೆ ಪ್ರಕರಣ: ಡಿಕೆಶಿ ವಿರುದ್ಧ ಎಫ್​ಐಆರ್​, ಲೋಕಾಯುಕ್ತದಿಂದ ಮರು ತನಿಖೆ

ಲೋಕಸಭಾ ಚುನಾವಣೆ ಹೊತ್ತಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಮರು ತನಿಖೆ ಮಾಡಲು ಲೋಕಾಯುಕ್ತ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಇದೀಗ ಹೊಸ ಎಫ್​ಐರ್​​ ದಾಖಲಾಗಿದೆ.

ಅಕ್ರಮ ಆಸ್ತಿಗಳಿಕೆ ಪ್ರಕರಣ: ಡಿಕೆಶಿ ವಿರುದ್ಧ ಎಫ್​ಐಆರ್​, ಲೋಕಾಯುಕ್ತದಿಂದ ಮರು ತನಿಖೆ
ಡಿಕೆ ಶಿವಕುಮಾರ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Feb 13, 2024 | 3:07 PM

ಬೆಂಗಳೂರು, (ಫೆಬ್ರವರಿ 13): ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧಿಸಿದಂತೆ ಲೋಕಾಯುಕ್ತ (karnataka lokayukta)ಎಫ್‌ಐಆರ್ ದಾಖಲಿಸಿಕೊಂಡಿದೆ. ಸಿಬಿಐಯಲ್ಲಿದ್ದ ಪ್ರಕರಣವನ್ನು ಮರು ತನಿಖೆಗೆ ಲೋಕಾಯುಕ್ತ ಎಫ್​ಐಆರ್ ದಾಖಲಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಪತ್ರ ಬರೆದಿದೆ. ಆದ್ರೆ, ಸಿಬಿಐ ಈವರೆಗೂ ಲೋಕಾಯುಕ್ತಕ್ಕೆ ಸಂಬಂಧಿಸಿದ ದಾಖಲೆ ಒದಗಿಸಿಲ್ಲ.

ಏನಿದು ಪ್ರಕರಣ?

ಗುಜರಾತ್‌ನಲ್ಲಿ ರಾಜಕೀಯ ಬಿಕ್ಕಟ್ಟು ಹಿನ್ನೆಲೆಯಲ್ಲಿ ಅಲ್ಲಿನ 42 ಕಾಂಗ್ರೆಸ್‌ ಶಾಸಕರಿಗೆ ಬೆಂಗಳೂರು ಸಮೀಪದ ಈಗಲ್‌ಟನ್ ರೆಸಾರ್ಟ್‌ನಲ್ಲಿ ಉಳಿಯಲು ಡಿಕೆ ಶಿವಕುಮಾರ್ ವ್ಯವಸ್ಥೆ ಮಾಡಿದ್ದರು. ಈ ಶಾಸಕರ ಜವಾಬ್ದಾರಿಯನ್ನು ಇವರೇ ವಹಿಸಿದ್ದರು. ಅದೇ ಸಂದರ್ಭದಲ್ಲಿ ಅಂದರೆ 2017ರ ಆಗಸ್ಟ್‌ನಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಡಿಕೆಶಿ ಅವರ ಕನಕಪುರ ಮನೆ, ಬೆಂಗಳೂರಿನ ನಿವಾಸ, ಕಚೇರಿ ಹಾಗೂ ಆಪ್ತರ ಮನೆಗಳು ಸೇರಿದಂತೆ 39 ಕಡೆ ದಾಳಿ ನಡೆಸಿದ್ದರು. ಕಾಂಗ್ರೆಸ್ ಎಂಎಲ್‌ಸಿ ಗೋವಿಂದರಾಜು ಅವರ ಡೈರಿಯಲ್ಲಿ ಹೆಸರು ಪತ್ತೆಯಾದ ನಂತರ ಶಿವಕುಮಾರ್ ಅವರನ್ನು ವಿಚಾರಣೆ ನಡೆಸಿದ್ದರು. ಆದರೆ ಅವರ ಉತ್ತರ ಮನವರಿಯಾಗದ ಹಿನ್ನೆಲೆಯಲ್ಲಿ ಈ ದಾಳಿ ಮಾಡಲಾಗಿತ್ತು.

ಐಟಿ ಅಧಿಕಾರಿಗಳ ದಾಳಿ ವೇಳೆ ಸುಮಾರು 7.5 ಕೋಟಿ ರೂಪಾಯಿ ವಶಪಡಿಸಿಕೊಂಡಿದ್ದರು. ಮತ್ತೊಂದೆಡೆ ಐಟಿ ಅಧಿಕಾರಿಗಳು ಮಾಹಿತಿ ಆಧಾರದ ಮೇಲೆ ಜಾರಿನಿರ್ದೇಶನಾಯ-ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸಿದ್ದರು. ವಿಚಾರಣೆಯ ಸಲುವಾಗಿ ಡಿಕೆಶಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಇಡಿ ತನಿಖೆಯನ್ನು ಆಧಾರಿಸಿ ಸಿಬಿಐ ಕೂಡ ಫೀಲ್ಡ್‌ಗೆ ಇಳಿದಿತ್ತು. ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಹಿಂದಿನ ಬಿಜೆಪಿ ಸರ್ಕಾರದ ಅನುಮತಿಯನ್ನು ಕೋರಲಾಗಿತ್ತು. 2019ರ ಸೆಪ್ಟೆಂಬರ್ 15 ರಂದು ಸಿಬಿಐ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿತ್ತು. ಸಿಬಿಐ ಅಧಿಕಾರಿಗಳು 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದೆ.

ಸಿಬಿಐ ತನಿಖೆ ಆದೇಶ ವಾಪಸ್ ಪಡೆದಿರುವ ಸರ್ಕಾರ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಸಿಬಿಐ ತನಿಖೆಗೆ ವಹಿಸಿರುವ ಆದೇಶವನ್ನು ವಾಪಸ್ ಪಡೆದುಕೊಂಡಿತ್ತು. ಡಿಕೆಶಿ ಪ್ರಕರಣವನ್ನು ಸಿಬಿಐಗೆ ವಹಿಸಿರುವುದು ಕಾನೂನಾತ್ಮಕವಾಗಿ ಇಲ್ಲ. ಸ್ಪೀಕರ್ ಅನುಮತಿ, ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯ ಪಡೆಯದೇ ತನಿಖೆಗೆ ನೀಡಲಾಗಿದೆ ಸರ್ಕಾರ ಸ್ಪಷ್ಟನೆ ನೀಡಿತ್ತು. ಈ ವಿಚಾರವಾಗಿ ಕಾಂಗ್ರೆಸ್, ಬಿಜೆಪಿ ಜೊತೆ ಜೆಡಿಎಸ್ ನಾಯಕ ನಡುವೆ ಪರಸ್ಪರ ಆರೋಪ ಪ್ರತ್ಯಾರೋಪಗಳಜು ನಡೆದಿದ್ದವು.

ಕೋರ್ಟ್​ ಮೆಟ್ಟಿಲೇರಿದ ಯತ್ನಾಳ್

ಇನ್ನು ಡಿಕೆ ಶಿವಕುಮಾರ್​​​ ವಿರುದ್ಧದ ಸಿಬಿಐ ತನಿಖೆಯ ಆದೇಶವನ್ನು ಸರ್ಕಾರ ವಾಪಸ್ ಪಡೆದುಕೊಂಡಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಕೋರ್ಟ್​ ಮೊರೆ ಹೋಗಿದ್ದಾರೆ. ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಫೆಬ್ರವರಿ 29ಕ್ಕೆ ಮುಂದೂಡಿದೆ.

Published On - 2:49 pm, Tue, 13 February 24

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ