AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಪುತ್ರನ ಸಾವಿಗೆ ಯಾರು ಕಾರಣ?

ಸಿದ್ದರಾಮಯ್ಯ ಮಗ ರಾಕೇಶ್ ಇನ್ನೂ 50 ವರ್ಷ ಬದುಕಿರ್ತಿದ್ದ, ಪಾಪ ಅವನನ್ನ ಹೋಟೆಲ್​ನಲ್ಲಿ ಕೂರಿಸಿಕೊಂಡು ಸಾಯೋ ಹಾಗೆ ಮಾಡಿದ್ದಾರೆ. ರಾಕೇಶ್ ಸಿದ್ದರಾಮಯ್ಯ ಸಾವಿಗೆ ಕಾರಣ ಯಾರು? ಅವನೇ ಕಾರಣ.. ಈಗ ನಮಗೆ ಪಾಠ ಹೇಳೋಕೆ ಅವನಿಗೆ ನೈತಿಕತೆ ಏನಿದೆ? ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್​ ಸಿದ್ದರಾಮಯ್ಯ ಪುತ್ರನ ಸಾವಿನ ಬಗ್ಗೆ ಪ್ರಶ್ನಿಸಿದ್ದಾರೆ. ಹೊಸಕೋಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದಿಂದ ಬೈರತಿ ಸುರೇಶ್ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಹೀಗಾಗಿ ಪರೋಕ್ಷವಾಗಿ ಬೈರತಿ ಸುರೇಶ್​ ವಿರುದ್ಧ ಎಂಟಿಬಿ ನಾಗರಾಜ್ ಆಕ್ರೋಶ […]

ಸಿದ್ದರಾಮಯ್ಯ ಪುತ್ರನ ಸಾವಿಗೆ ಯಾರು ಕಾರಣ?
ಸಾಧು ಶ್ರೀನಾಥ್​
|

Updated on:Sep 22, 2019 | 3:55 PM

Share

ಸಿದ್ದರಾಮಯ್ಯ ಮಗ ರಾಕೇಶ್ ಇನ್ನೂ 50 ವರ್ಷ ಬದುಕಿರ್ತಿದ್ದ, ಪಾಪ ಅವನನ್ನ ಹೋಟೆಲ್​ನಲ್ಲಿ ಕೂರಿಸಿಕೊಂಡು ಸಾಯೋ ಹಾಗೆ ಮಾಡಿದ್ದಾರೆ. ರಾಕೇಶ್ ಸಿದ್ದರಾಮಯ್ಯ ಸಾವಿಗೆ ಕಾರಣ ಯಾರು? ಅವನೇ ಕಾರಣ.. ಈಗ ನಮಗೆ ಪಾಠ ಹೇಳೋಕೆ ಅವನಿಗೆ ನೈತಿಕತೆ ಏನಿದೆ? ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್​ ಸಿದ್ದರಾಮಯ್ಯ ಪುತ್ರನ ಸಾವಿನ ಬಗ್ಗೆ ಪ್ರಶ್ನಿಸಿದ್ದಾರೆ.

ಹೊಸಕೋಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದಿಂದ ಬೈರತಿ ಸುರೇಶ್ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಹೀಗಾಗಿ ಪರೋಕ್ಷವಾಗಿ ಬೈರತಿ ಸುರೇಶ್​ ವಿರುದ್ಧ ಎಂಟಿಬಿ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನಗೆ ಕಾಂಗ್ರೆಸ್​ನಿಂದ ಟಿಕೆಟ್ ಕೊಡಿಸಿದ್ದು ಎಸ್.​ಎಂ.ಕೃಷ್ಣ: ಇನ್ನು ಇದೇ ವೇಳೆ ಮಾತನಾಡಿದ ಎಂಟಿಬಿ ನಾಗರಾಜ್​, ಸಿದ್ದರಾಮಯ್ಯ ವಿರುದ್ಧವೂ ಕಿಡಿಕಾರಿದ್ದಾರೆ. ನನಗೆ ಟಿಕೆಟ್ ಕೊಡಿಸಿ ಮಂತ್ರಿ ಮಾಡಿದ್ದೇ ನಾನು ಅಂತ ಪದೇ ಪದೆ ಹೇಳಿಕೊಳ್ಳುತ್ತಿದ್ದಾರೆ. ಆದ್ರೆ ನನಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡಿಸಿದ್ದು ಸಿದ್ದರಾಮಯ್ಯ ಅಲ್ಲ, ಎಸ್.ಎಂ.ಕೃಷ್ಣ. ಸಿದ್ದರಾಮಯ್ಯ ಕಾಂಗ್ರೆಸ್​ಗೆ ಸೇರಿದ್ದು 2006ರಲ್ಲಿ, ಆದ್ರೆ ಅದಕ್ಕೂ ಮೊದಲೇ ನಾನು ಕಾಂಗ್ರೆಸ್ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದೆ. ಆದರೆ ಈಗ ನಾನೇ ಟಿಕೆಟ್ ಕೊಡಿಸಿದ್ದು ಎಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಎಂಟಿಬಿ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಕುರುಬರಿಗಾಗಿ ಏನು ಮಾಡಿದ್ದಾರೆ?: ಸಿದ್ದರಾಮಯ್ಯ ಸ್ವಜಾತಿ ಪ್ರೇಮ ಅಂತಿರ್ತಾರೆ, ಆದರೆ ಇವರು ಕುರುಬರಿಗಾಗಿ ಏನು ಮಾಡಿದ್ರು? 5 ವರ್ಷ ಸಿಎಂ ಆಗಿ, ಸಚಿವ ಸಂಪುಟ ವಿಸ್ತರಣೆ ಮಾಡಿದ್ರು. ಆದ್ರೆ ಅವರು ಒಬ್ಬ ಕುರುಬ ಶಾಸಕರನ್ನೂ ಮಂತ್ರಿ ಮಾಡಲಿಲ್ಲ. ಮೇಟಿಗೆ 6 ತಿಂಗಳು ಸಚಿವ ಸ್ಥಾನ ಕೊಟ್ಟು ವಾಪಸ್ ತಗೊಂಡ್ರು. ಆದೇ ಎಸ್.ಎಂ.ಕೃಷ್ಣ ಸಿಎಂ ಆಗಿದ್ದಾಗ 6 ಜನ ಒಕ್ಕಲಿಗರನ್ನ ಸಚಿವರನ್ನಾಗಿ ಮಾಡಿದ್ರು. ಹೆಚ್.ಡಿ.ದೇವೇಗೌಡರು 7 ಜನರನ್ನ ಮಂತ್ರಿ ಮಾಡಿದ್ರು, ವೀರೇಂದ್ರ ಪಾಟೀಲ್ 5 ಲಿಂಗಾಯತರಿಗೆ ಮಂತ್ರಿ ಸ್ಥಾನ ನೀಡಿದ್ರು ಆದ್ರೆ ಮಾಜಿ ಸಿಎಂ ಸಿದ್ದರಾಮಯ್ಯ ಎಷ್ಟು ಕುರುಬರಿಗೆ ಮಂತ್ರಿ ಭಾಗ್ಯ ನೀಡಿದ್ದಾರೆ? ಎಂದು ಸಿದ್ದರಾಮಯ್ಯ ವಿರುದ್ಧ ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಾಕ್ ಪ್ರಹಾರ ನಡೆಸಿದ್ದಾರೆ.

Published On - 3:53 pm, Sun, 22 September 19

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ