AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಪುತ್ರನ ಸಾವಿಗೆ ಯಾರು ಕಾರಣ?

ಸಿದ್ದರಾಮಯ್ಯ ಮಗ ರಾಕೇಶ್ ಇನ್ನೂ 50 ವರ್ಷ ಬದುಕಿರ್ತಿದ್ದ, ಪಾಪ ಅವನನ್ನ ಹೋಟೆಲ್​ನಲ್ಲಿ ಕೂರಿಸಿಕೊಂಡು ಸಾಯೋ ಹಾಗೆ ಮಾಡಿದ್ದಾರೆ. ರಾಕೇಶ್ ಸಿದ್ದರಾಮಯ್ಯ ಸಾವಿಗೆ ಕಾರಣ ಯಾರು? ಅವನೇ ಕಾರಣ.. ಈಗ ನಮಗೆ ಪಾಠ ಹೇಳೋಕೆ ಅವನಿಗೆ ನೈತಿಕತೆ ಏನಿದೆ? ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್​ ಸಿದ್ದರಾಮಯ್ಯ ಪುತ್ರನ ಸಾವಿನ ಬಗ್ಗೆ ಪ್ರಶ್ನಿಸಿದ್ದಾರೆ. ಹೊಸಕೋಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದಿಂದ ಬೈರತಿ ಸುರೇಶ್ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಹೀಗಾಗಿ ಪರೋಕ್ಷವಾಗಿ ಬೈರತಿ ಸುರೇಶ್​ ವಿರುದ್ಧ ಎಂಟಿಬಿ ನಾಗರಾಜ್ ಆಕ್ರೋಶ […]

ಸಿದ್ದರಾಮಯ್ಯ ಪುತ್ರನ ಸಾವಿಗೆ ಯಾರು ಕಾರಣ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 22, 2019 | 3:55 PM

Share

ಸಿದ್ದರಾಮಯ್ಯ ಮಗ ರಾಕೇಶ್ ಇನ್ನೂ 50 ವರ್ಷ ಬದುಕಿರ್ತಿದ್ದ, ಪಾಪ ಅವನನ್ನ ಹೋಟೆಲ್​ನಲ್ಲಿ ಕೂರಿಸಿಕೊಂಡು ಸಾಯೋ ಹಾಗೆ ಮಾಡಿದ್ದಾರೆ. ರಾಕೇಶ್ ಸಿದ್ದರಾಮಯ್ಯ ಸಾವಿಗೆ ಕಾರಣ ಯಾರು? ಅವನೇ ಕಾರಣ.. ಈಗ ನಮಗೆ ಪಾಠ ಹೇಳೋಕೆ ಅವನಿಗೆ ನೈತಿಕತೆ ಏನಿದೆ? ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್​ ಸಿದ್ದರಾಮಯ್ಯ ಪುತ್ರನ ಸಾವಿನ ಬಗ್ಗೆ ಪ್ರಶ್ನಿಸಿದ್ದಾರೆ.

ಹೊಸಕೋಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದಿಂದ ಬೈರತಿ ಸುರೇಶ್ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಹೀಗಾಗಿ ಪರೋಕ್ಷವಾಗಿ ಬೈರತಿ ಸುರೇಶ್​ ವಿರುದ್ಧ ಎಂಟಿಬಿ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನಗೆ ಕಾಂಗ್ರೆಸ್​ನಿಂದ ಟಿಕೆಟ್ ಕೊಡಿಸಿದ್ದು ಎಸ್.​ಎಂ.ಕೃಷ್ಣ: ಇನ್ನು ಇದೇ ವೇಳೆ ಮಾತನಾಡಿದ ಎಂಟಿಬಿ ನಾಗರಾಜ್​, ಸಿದ್ದರಾಮಯ್ಯ ವಿರುದ್ಧವೂ ಕಿಡಿಕಾರಿದ್ದಾರೆ. ನನಗೆ ಟಿಕೆಟ್ ಕೊಡಿಸಿ ಮಂತ್ರಿ ಮಾಡಿದ್ದೇ ನಾನು ಅಂತ ಪದೇ ಪದೆ ಹೇಳಿಕೊಳ್ಳುತ್ತಿದ್ದಾರೆ. ಆದ್ರೆ ನನಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡಿಸಿದ್ದು ಸಿದ್ದರಾಮಯ್ಯ ಅಲ್ಲ, ಎಸ್.ಎಂ.ಕೃಷ್ಣ. ಸಿದ್ದರಾಮಯ್ಯ ಕಾಂಗ್ರೆಸ್​ಗೆ ಸೇರಿದ್ದು 2006ರಲ್ಲಿ, ಆದ್ರೆ ಅದಕ್ಕೂ ಮೊದಲೇ ನಾನು ಕಾಂಗ್ರೆಸ್ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದೆ. ಆದರೆ ಈಗ ನಾನೇ ಟಿಕೆಟ್ ಕೊಡಿಸಿದ್ದು ಎಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಎಂಟಿಬಿ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಕುರುಬರಿಗಾಗಿ ಏನು ಮಾಡಿದ್ದಾರೆ?: ಸಿದ್ದರಾಮಯ್ಯ ಸ್ವಜಾತಿ ಪ್ರೇಮ ಅಂತಿರ್ತಾರೆ, ಆದರೆ ಇವರು ಕುರುಬರಿಗಾಗಿ ಏನು ಮಾಡಿದ್ರು? 5 ವರ್ಷ ಸಿಎಂ ಆಗಿ, ಸಚಿವ ಸಂಪುಟ ವಿಸ್ತರಣೆ ಮಾಡಿದ್ರು. ಆದ್ರೆ ಅವರು ಒಬ್ಬ ಕುರುಬ ಶಾಸಕರನ್ನೂ ಮಂತ್ರಿ ಮಾಡಲಿಲ್ಲ. ಮೇಟಿಗೆ 6 ತಿಂಗಳು ಸಚಿವ ಸ್ಥಾನ ಕೊಟ್ಟು ವಾಪಸ್ ತಗೊಂಡ್ರು. ಆದೇ ಎಸ್.ಎಂ.ಕೃಷ್ಣ ಸಿಎಂ ಆಗಿದ್ದಾಗ 6 ಜನ ಒಕ್ಕಲಿಗರನ್ನ ಸಚಿವರನ್ನಾಗಿ ಮಾಡಿದ್ರು. ಹೆಚ್.ಡಿ.ದೇವೇಗೌಡರು 7 ಜನರನ್ನ ಮಂತ್ರಿ ಮಾಡಿದ್ರು, ವೀರೇಂದ್ರ ಪಾಟೀಲ್ 5 ಲಿಂಗಾಯತರಿಗೆ ಮಂತ್ರಿ ಸ್ಥಾನ ನೀಡಿದ್ರು ಆದ್ರೆ ಮಾಜಿ ಸಿಎಂ ಸಿದ್ದರಾಮಯ್ಯ ಎಷ್ಟು ಕುರುಬರಿಗೆ ಮಂತ್ರಿ ಭಾಗ್ಯ ನೀಡಿದ್ದಾರೆ? ಎಂದು ಸಿದ್ದರಾಮಯ್ಯ ವಿರುದ್ಧ ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಾಕ್ ಪ್ರಹಾರ ನಡೆಸಿದ್ದಾರೆ.

Published On - 3:53 pm, Sun, 22 September 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ