AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಪುತ್ರನ ಸಾವಿಗೆ ಯಾರು ಕಾರಣ?

ಸಿದ್ದರಾಮಯ್ಯ ಮಗ ರಾಕೇಶ್ ಇನ್ನೂ 50 ವರ್ಷ ಬದುಕಿರ್ತಿದ್ದ, ಪಾಪ ಅವನನ್ನ ಹೋಟೆಲ್​ನಲ್ಲಿ ಕೂರಿಸಿಕೊಂಡು ಸಾಯೋ ಹಾಗೆ ಮಾಡಿದ್ದಾರೆ. ರಾಕೇಶ್ ಸಿದ್ದರಾಮಯ್ಯ ಸಾವಿಗೆ ಕಾರಣ ಯಾರು? ಅವನೇ ಕಾರಣ.. ಈಗ ನಮಗೆ ಪಾಠ ಹೇಳೋಕೆ ಅವನಿಗೆ ನೈತಿಕತೆ ಏನಿದೆ? ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್​ ಸಿದ್ದರಾಮಯ್ಯ ಪುತ್ರನ ಸಾವಿನ ಬಗ್ಗೆ ಪ್ರಶ್ನಿಸಿದ್ದಾರೆ. ಹೊಸಕೋಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದಿಂದ ಬೈರತಿ ಸುರೇಶ್ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಹೀಗಾಗಿ ಪರೋಕ್ಷವಾಗಿ ಬೈರತಿ ಸುರೇಶ್​ ವಿರುದ್ಧ ಎಂಟಿಬಿ ನಾಗರಾಜ್ ಆಕ್ರೋಶ […]

ಸಿದ್ದರಾಮಯ್ಯ ಪುತ್ರನ ಸಾವಿಗೆ ಯಾರು ಕಾರಣ?
ಸಾಧು ಶ್ರೀನಾಥ್​
|

Updated on:Sep 22, 2019 | 3:55 PM

Share

ಸಿದ್ದರಾಮಯ್ಯ ಮಗ ರಾಕೇಶ್ ಇನ್ನೂ 50 ವರ್ಷ ಬದುಕಿರ್ತಿದ್ದ, ಪಾಪ ಅವನನ್ನ ಹೋಟೆಲ್​ನಲ್ಲಿ ಕೂರಿಸಿಕೊಂಡು ಸಾಯೋ ಹಾಗೆ ಮಾಡಿದ್ದಾರೆ. ರಾಕೇಶ್ ಸಿದ್ದರಾಮಯ್ಯ ಸಾವಿಗೆ ಕಾರಣ ಯಾರು? ಅವನೇ ಕಾರಣ.. ಈಗ ನಮಗೆ ಪಾಠ ಹೇಳೋಕೆ ಅವನಿಗೆ ನೈತಿಕತೆ ಏನಿದೆ? ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್​ ಸಿದ್ದರಾಮಯ್ಯ ಪುತ್ರನ ಸಾವಿನ ಬಗ್ಗೆ ಪ್ರಶ್ನಿಸಿದ್ದಾರೆ.

ಹೊಸಕೋಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದಿಂದ ಬೈರತಿ ಸುರೇಶ್ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಹೀಗಾಗಿ ಪರೋಕ್ಷವಾಗಿ ಬೈರತಿ ಸುರೇಶ್​ ವಿರುದ್ಧ ಎಂಟಿಬಿ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನಗೆ ಕಾಂಗ್ರೆಸ್​ನಿಂದ ಟಿಕೆಟ್ ಕೊಡಿಸಿದ್ದು ಎಸ್.​ಎಂ.ಕೃಷ್ಣ: ಇನ್ನು ಇದೇ ವೇಳೆ ಮಾತನಾಡಿದ ಎಂಟಿಬಿ ನಾಗರಾಜ್​, ಸಿದ್ದರಾಮಯ್ಯ ವಿರುದ್ಧವೂ ಕಿಡಿಕಾರಿದ್ದಾರೆ. ನನಗೆ ಟಿಕೆಟ್ ಕೊಡಿಸಿ ಮಂತ್ರಿ ಮಾಡಿದ್ದೇ ನಾನು ಅಂತ ಪದೇ ಪದೆ ಹೇಳಿಕೊಳ್ಳುತ್ತಿದ್ದಾರೆ. ಆದ್ರೆ ನನಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಕೊಡಿಸಿದ್ದು ಸಿದ್ದರಾಮಯ್ಯ ಅಲ್ಲ, ಎಸ್.ಎಂ.ಕೃಷ್ಣ. ಸಿದ್ದರಾಮಯ್ಯ ಕಾಂಗ್ರೆಸ್​ಗೆ ಸೇರಿದ್ದು 2006ರಲ್ಲಿ, ಆದ್ರೆ ಅದಕ್ಕೂ ಮೊದಲೇ ನಾನು ಕಾಂಗ್ರೆಸ್ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದೆ. ಆದರೆ ಈಗ ನಾನೇ ಟಿಕೆಟ್ ಕೊಡಿಸಿದ್ದು ಎಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಎಂಟಿಬಿ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಕುರುಬರಿಗಾಗಿ ಏನು ಮಾಡಿದ್ದಾರೆ?: ಸಿದ್ದರಾಮಯ್ಯ ಸ್ವಜಾತಿ ಪ್ರೇಮ ಅಂತಿರ್ತಾರೆ, ಆದರೆ ಇವರು ಕುರುಬರಿಗಾಗಿ ಏನು ಮಾಡಿದ್ರು? 5 ವರ್ಷ ಸಿಎಂ ಆಗಿ, ಸಚಿವ ಸಂಪುಟ ವಿಸ್ತರಣೆ ಮಾಡಿದ್ರು. ಆದ್ರೆ ಅವರು ಒಬ್ಬ ಕುರುಬ ಶಾಸಕರನ್ನೂ ಮಂತ್ರಿ ಮಾಡಲಿಲ್ಲ. ಮೇಟಿಗೆ 6 ತಿಂಗಳು ಸಚಿವ ಸ್ಥಾನ ಕೊಟ್ಟು ವಾಪಸ್ ತಗೊಂಡ್ರು. ಆದೇ ಎಸ್.ಎಂ.ಕೃಷ್ಣ ಸಿಎಂ ಆಗಿದ್ದಾಗ 6 ಜನ ಒಕ್ಕಲಿಗರನ್ನ ಸಚಿವರನ್ನಾಗಿ ಮಾಡಿದ್ರು. ಹೆಚ್.ಡಿ.ದೇವೇಗೌಡರು 7 ಜನರನ್ನ ಮಂತ್ರಿ ಮಾಡಿದ್ರು, ವೀರೇಂದ್ರ ಪಾಟೀಲ್ 5 ಲಿಂಗಾಯತರಿಗೆ ಮಂತ್ರಿ ಸ್ಥಾನ ನೀಡಿದ್ರು ಆದ್ರೆ ಮಾಜಿ ಸಿಎಂ ಸಿದ್ದರಾಮಯ್ಯ ಎಷ್ಟು ಕುರುಬರಿಗೆ ಮಂತ್ರಿ ಭಾಗ್ಯ ನೀಡಿದ್ದಾರೆ? ಎಂದು ಸಿದ್ದರಾಮಯ್ಯ ವಿರುದ್ಧ ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಾಕ್ ಪ್ರಹಾರ ನಡೆಸಿದ್ದಾರೆ.

Published On - 3:53 pm, Sun, 22 September 19

ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!