ಅನರ್ಹ ಶಾಸಕರು ಆಪರೇಷನ್ ಕಮಲ ಸಂತ್ರಸ್ತರು ಎಂದ ಹೆಚ್​ಡಿ ಕುಮಾರಸ್ವಾಮಿ

ರಾಜ್ಯಕ್ಕೆ ಬರಬೇಕಿರುವ ನೆರೆ ಪರಿಹಾರ ಹೇಳಲು ಸಿಎಂಗೆ ಪುರುಸೊತ್ತಿಲ್ಲ. ಆದ್ರೆ ಅನರ್ಹ ಶಾಸಕರ ಭವಿಷ್ಯ ಉಳಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಭಾವ ಬಳಸಿಕೊಂಡು ಆಪರೇಷನ್ ಕಮಲ ಮಾಡಿದ್ದಾರೆ. ಈಗ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್​ ಕಮಲದ ಸಂತ್ರಸ್ತರನ್ನು ರಕ್ಷಿಸಲು ಸಿಎಂ ಬಿಎಸ್​ವೈ ಯತ್ನಿಸುತ್ತಿದ್ದಾರೆ. ಇನ್ನು ದೆಹಲಿಗೆ ತೆರಳಲು ಸಿಎಂಗೆ ಸಾಕಷ್ಟು ಸಮಯಾವಕಾಶವಿದೆ. ಆದ್ರೆ ನೆರೆ ಪರಿಹಾರ ಕೇಳಲು ಸಮಯ ಸಿಗಲಿಲ್ಲ ಎಂದು ಟ್ಟಿಟ್ಟರ್​ನಲ್ಲಿ […]

ಅನರ್ಹ ಶಾಸಕರು ಆಪರೇಷನ್ ಕಮಲ ಸಂತ್ರಸ್ತರು ಎಂದ ಹೆಚ್​ಡಿ ಕುಮಾರಸ್ವಾಮಿ
ಸಾಧು ಶ್ರೀನಾಥ್​

Updated on: Sep 22, 2019 | 4:10 PM

ರಾಜ್ಯಕ್ಕೆ ಬರಬೇಕಿರುವ ನೆರೆ ಪರಿಹಾರ ಹೇಳಲು ಸಿಎಂಗೆ ಪುರುಸೊತ್ತಿಲ್ಲ. ಆದ್ರೆ ಅನರ್ಹ ಶಾಸಕರ ಭವಿಷ್ಯ ಉಳಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಭಾವ ಬಳಸಿಕೊಂಡು ಆಪರೇಷನ್ ಕಮಲ ಮಾಡಿದ್ದಾರೆ. ಈಗ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್​ ಕಮಲದ ಸಂತ್ರಸ್ತರನ್ನು ರಕ್ಷಿಸಲು ಸಿಎಂ ಬಿಎಸ್​ವೈ ಯತ್ನಿಸುತ್ತಿದ್ದಾರೆ. ಇನ್ನು ದೆಹಲಿಗೆ ತೆರಳಲು ಸಿಎಂಗೆ ಸಾಕಷ್ಟು ಸಮಯಾವಕಾಶವಿದೆ. ಆದ್ರೆ ನೆರೆ ಪರಿಹಾರ ಕೇಳಲು ಸಮಯ ಸಿಗಲಿಲ್ಲ ಎಂದು ಟ್ಟಿಟ್ಟರ್​ನಲ್ಲಿ ಕುಮಾರಸ್ವಾಮಿ ಟೀಕಿಸಿದ್ದಾರೆ.

Published On - 1:15 pm, Sun, 22 September 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us