AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ: ಈ ದಿನಗಳಂದು ಸಂಪೂರ್ಣ ಸ್ಥಗಿತ

ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಕೆಲಸಗಳು ಮುಂದುವರೆಸುವ ನಿಟ್ಟಿನಲ್ಲಿ ಆಗಸ್ಟ್ 20, 23 ಮತ್ತು 30 ಹಾಗೂ ಸೆಪ್ಟೆಂಬರ್ 6 ಮತ್ತು 11 ರಂದು ಅಂದರೆ 5 ದಿನಗಳು ಸಂಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಬಿಎಂಆರ್​ಸಿಎಲ್​ ತಿಳಿಸಿದೆ.

ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ: ಈ ದಿನಗಳಂದು ಸಂಪೂರ್ಣ ಸ್ಥಗಿತ
ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ: ಈ ದಿನಗಳಂದು ಸಂಪೂರ್ಣ ಸ್ಥಗಿತ
ಗಂಗಾಧರ​ ಬ. ಸಾಬೋಜಿ
|

Updated on:Aug 19, 2024 | 5:38 PM

Share

ಬೆಂಗಳೂರು, ಆಗಸ್ಟ್ 19: ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡೆವೆ ಮೆಟ್ರೋ (namma Metro) ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ. ಆಗಸ್ಟ್​ 20, 23, 30 ಮತ್ತು ಸೆಪ್ಟೆಂಬರ್​​ 6, 11 ರಂದು ಸಂಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಳ್ಳಲಾಗಿದೆ.

ಈ ಬಗ್ಗೆ ಮಾಧ್ಯಮ ಪ್ರಕಟನೆ ಹೊರಡಿಸಿರುವ ಬಿಎಂಆರ್​ಸಿಎಲ್​, ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಕೆಲಸಗಳು ಮುಂದುವರೆಸುವ ನಿಟ್ಟಿನಲ್ಲಿ ಕೆಲವು ದಿನಗಳಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು.

5 ದಿನ ಪೂರ್ಣ ದಿನ ರೈಲು ಸೇವೆಗಳು ಸ್ಥಗಿತ

  • ಆಗಸ್ಟ್ 20, 23 ಮತ್ತು 30 ಹಾಗೂ ಸೆಪ್ಟೆಂಬರ್ 6 ಮತ್ತು 11 ರಂದು ಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ.

ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ:

  • ಆಗಸ್ಟ್ 24 ರಂದು ಕೊನೆಯ ರೈಲು ಸೇವೆಯು ರಾತ್ರಿ 11.05ಕ್ಕೆ ಬದಲಾಗಿ 10.00 ಗಂಟೆಗೆ ಪ್ರಾರಂಭವಾಗಲಿದೆ.
  • ಆಗಸ್ಟ್ 25ರಂದು ಮೊದಲ ರೈಲು ಸೇವೆಯು ಬೆಳಿಗೆ, 5.00 ಗಂಟೆ ಬದಲಾಗಿ 06. ಗಂಟೆಗೆ ಪ್ರಾರಂಭವಾಗಲಿದೆ.

ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಕಡೆಗೆ

  • ಆಗಸ್ಟ್ 24ರಂದು ಕೊನೆಯ ರೈಲು ಸೇವೆಯು ರಾತ್ರಿ 11.12 ಗಂಟೆ ಪ್ರಾರಂಭವಾಗಲಿದೆ.
  • ಆಗಸ್ಟ್ 25ರಂದು ಮೊದಲ ರೈಲು ಸೇವೆಯು ಬೆಳಿಗ್ಗೆ 05.00 ಗಂಟೆಗೆ ಪ್ರಾರಂಭವಾಗಲಿದೆ.

ಮೆಟ್ರೋ ಟ್ವೀಟ್​

ಇನ್ನು ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹೀಗಾಗಿ ಸಾರ್ವಜನಿಕರು ಬದಲಾವಣೆಯನ್ನು ಗಮನಿಸಿ ಸಂಚರಿಸುವಂತೆ ಬಿಎಂಆರ್​ಸಿಎಲ್ ಮನವಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:20 pm, Mon, 19 August 24

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು