AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲೇ ಅಸಮಾಧಾನದ ಹೊಗೆ: ಸತೀಶ್ ಜಾರಕಿಹೊಳಿ ವಿರುದ್ಧ ರವಿ ಗಣಿಗ ಆಕ್ಷೇಪ

ಬಜೆಟ್ ಮಂಡನೆ ಬಳಿಕ ಭಾರೀ ಜೋಶ್​ನಲ್ಲಿರುವ ಕಾಂಗ್ರೆಸ್, ಸದನದ ಒಳಗೂ ಸದನದ ಹೊರಗೂ ಬಿಜೆಪಿಯನ್ನು ತಡೆಯಲು ಭರ್ಜರಿ ಸಿದ್ದತೆ ಆರಂಭಿಸಿದೆ. ಬಜೆಟ್ ಮಂಡನೆ ಬಳಿಕ ನಡೆದ ‘ಕೈ’ ಶಾಸಕಾಂಗ ಸಭೆಯಲ್ಲೂ ಸಿಎಂ ಸಿದ್ದರಾಮಯ್ಯ ಶಾಸಕರಿಗೆ ಕಿವಿ ಮಾತು ಹೇಳಿದ್ದಾರೆ. ಮತ್ತೊಂದೆಡೆ, ಸಿಎಲ್​ಪಿ ಸಭೆಯಲ್ಲೇ ಶಾಸಕರು, ಸಚಿವರ ನಡುವಣ ಅಸಮಾಧಾನ ಹೊಗೆಯಾಡಿದೆ.

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲೇ ಅಸಮಾಧಾನದ ಹೊಗೆ: ಸತೀಶ್ ಜಾರಕಿಹೊಳಿ ವಿರುದ್ಧ ರವಿ ಗಣಿಗ ಆಕ್ಷೇಪ
ಕಾಂಗ್ರೆಸ್ ಶಾಸಕಾಂಗ ಸಭೆ
ಪ್ರಸನ್ನ ಗಾಂವ್ಕರ್​
| Edited By: |

Updated on: Mar 11, 2025 | 7:06 AM

Share

ಬೆಂಗಳೂರು, ಮಾರ್ಚ್ 11: ಸಿಎಂ ಸಿದ್ದರಾಮಯ್ಯ (Siddaramaiah) ಮಂಡಿಸಿದ 16ನೇ ಬಜೆಟ್ ವಿರುದ್ಧ ಬಿಜೆಪಿ ಸಮರ ಸಾರಿದೆ. ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಿದ್ದಕ್ಕೆ ಆಕ್ರೋಶ ಹೊರಹಾಕುತ್ತಿದೆ. ಸರ್ಕಾರ ಎಸ್ಸಿ, ಎಸ್ಟಿ ಹಣವನ್ನು ನುಂಗಿಹಾಕಿದೆ ಎಂದು ಬೀದಿ ಹೋರಾಟ ಮಾಡುತ್ತಿದೆ. ಆದರೆ, ಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್ (Congress) ಮುಂದಾಗಿದೆ. ಸೋಮವಾರ ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಬಿಜೆಪಿಗೆ ತಕ್ಕ ಎದುರೇಟು ನೀಡಲು ನಿರ್ಧರಿಸಲಾಗಿದೆ. ‘ಕೈ’ ಶಾಸಕರಿಗೆ ಸಿದ್ದರಾಮಯ್ಯ ಖಡಕ್ ಸಲಹೆಗಳನ್ನು ಕೊಟ್ಟಿದ್ದಾರೆ.

ಶಾಸಕರಿಗೆ ಖಡಕ್ ಸೂಚನೆ

ಎಸ್​ಸಿ-ಎಸ್​​ಪಿ-ಟಿಎಸ್​​ಪಿ ಕಾಯ್ದೆ ಮಾಡಿರುವ ರಾಜ್ಯ ನಮ್ಮದು . ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಈ ಕಾಯ್ದೆ ಜಾರಿಯಾಗಿಲ್ಲ. ಶಾಸಕರಾದ ನೀವು ವಿವರಿಸಿ ಜನರಿಗೆ ತಿಳಿಯುವಂತೆ ಮಾಡಬೇಕು. ಹಿಂದಿನ ಸರ್ಕಾರದ ಎಡವಟ್ಟಿನಿಂದ ಬಿಲ್ ಬಾಕಿ ಉಳಿದಿದೆ. ಇದೀಗ ನಮ್ಮ ಸರ್ಕಾರ ಹಂತ ಹಂತವಾಗಿ ಬಿಲ್ ಪಾವತಿಸುತ್ತಿದೆ. ಅಷ್ಟೇ ಅಲ್ಲ ಗ್ಯಾರಂಟಿಯಿಂದ ಅಭಿವೃದ್ಧಿಯಾಗಿಲ್ಲ ಎಂಬ ಬಿಜೆಪಿ ಆರೋಪ ಶುದ್ಧ ಸುಳ್ಳಾಗಿದೆ. ಯಾಕಂದರೆ, ಒಟ್ಟು ರಾಜ್ಯ ದೇಶೀಯ ಉತ್ಪನ್ನ ಶೇ 7.4 ಬೆಳವಣಿಗೆಯಾಗಿದೆ. ದೇಶದ GSDP 6.4 ಗಿಂತ ನಾವು ಪ್ರಗತಿ ಸಾಧಿಸಿದ್ದೇವೆ. ಇನ್ನು GST ಸಂಗ್ರಹದಲ್ಲಿ ದೇಶದಲ್ಲೇ ಕಾಂಗ್ರೆಸ್ 2ನೇ ಸ್ಥಾನದಲ್ಲಿದೆ. FDI ನಲ್ಲಿ ನಮ್ಮ ರಾಜ್ಯ ದೇಶದಲ್ಲೇ ನಂಬರ್ ಒನ್ ಇದೆ. ಹಾಗಾಗಿ ಬಜೆಟ್ ಪುಸ್ತಕ ಓದಿಕೊಂಡು ಅಧಿವೇಶನದಲ್ಲಿ ಪರಿಣಾಮಕಾರಿಯಾಗಿ ಬಿಜೆಪಿ ವಿರುದ್ಧ ಮಾತನಾಡಿ ಎಂದು ಸಿಎಂ ಶಾಸಕರಿಗೆ ಸಲಹೆ ನೀಡಿದ್ದಾರೆ.

ಮತ್ತೆ ಸದ್ದು ಮಾಡಿದೆ ಶಾಸಕರು-ಸಚಿವರ ನಡುವಿನ ಕಿತ್ತಾಟ

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಚಿವರು ಕೈಗೆ ಸಿಗುತ್ತಿಲ್ಲವೆಂದು, ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.‌ ಸರ್ಕಾರ ರಚನೆಯಾಗಿ ಎರಡು ವರ್ಷಗಳಾಗಿವೆ, ಇನ್ನೂ ಶಾಸಕರಿಗೆ ಸಚಿವರು ಸಿಗುತ್ತಲೇ ಇಲ್ಲ, ಭೇಟಿಗೆ ಯತ್ನಿಸಿದರೂ ಏನಾದರೊಂದು ಸಬೂಬು ಹೇಳಿ ತಪ್ಪಿಸಿಕೊಳ್ತಿದಾರೆ ಅಂತಾ ಎಂಎಲ್ಎಗಳು ಗರಂ ಆಗಿದ್ದಾರೆ.

ಇದನ್ನೂ ಓದಿ
Image
ಜಟಾಪಟಿ ನಡುವೆ ವಿಧಾನಸಭೆಯಲ್ಲಿ ಗ್ರೇಟರ್‌ ಬೆಂಗಳೂರು ವಿಧೇಯಕ ಅಂಗೀಕಾರ
Image
ಗ್ರೇಟರ್ ಬೆಂಗಳೂರು ವಿಧೇಯಕ: ಇದು ಬೆಂಗಳೂರಿನ ಪಾಲಿಗೆ ಮರಣ ಶಾಸನ ಎಂದ ಅಶೋಕ್​
Image
ಕ್ಷೇತ್ರ ವಿಂಗಡಣೆ: ದಕ್ಷಿಣ ಭಾರತಕ್ಕೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ
Image
ನಟಿ ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಪ್ರಭಾವಿ ರಾಜಕಾರಣಿ

ಸಚಿವ ಭೋಸರಾಜು, ಶರಣ ಪ್ರಕಾಶ್ ಪಾಟೀಲ್ ನಡುವೆ ಜಟಾಪಟಿ

ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಸಚಿವ ಎನ್.ಎಸ್ ಭೋಸರಾಜು ನಡುವೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಹಿರಂಗವಾಗಿಯೇ ಕಿತ್ತಾಟ ನಡೆದಿದೆ.

ಸತೀಶ್ ಜಾರಕಿಹೊಳಿ‌ ವಿರುದ್ಧ ಗಣಿಗ ರವಿ ಅಸಮಾಧಾನ

ಶಾಸಕಾಂಗ ಸಭೆಯಲ್ಲಿ ಶಾಸಕ ಗಣಿಗ ರವಿ, PWD ಇಲಾಖೆಯ ಹಳೇ ಬಿಲ್ ಕ್ಲಿಯರ್ ಬಗ್ಗೆ ಪ್ರಸ್ತಾಪ ಮಾಡಿದರು. ಜೆಡಿಎಸ್ ಹಾಗೂ ಬಿಜೆಪಿಯವರ ಬಿಲ್ ಕ್ಲಿಯರ್ ಆಗುತ್ತಿವೆ. ಆದರೆ, ನಮ್ಮ ಹಳೆಯ ಬಿಲ್ ಕ್ಲಿಯರ್ ಮಾಡುತ್ತಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು.

ವಿಶ್ವವಿದ್ಯಾಲಯಗಳ ಬಂದ್‌ಗೆ ‘ಕೈ’ ಶಾಸಕರಿಂದಲೇ ವಿರೋಧ

ರಾಜ್ಯದಲ್ಲಿನ ಕೆಲ ವಿವಿಗಳನ್ನು ಬಂದ್ ಮಾಡುವ ಸರ್ಕಾರದ ನಿರ್ಧಾರಕ್ಕೆ ಕೈ ಶಾಸಕರಿಂದಲೇ ವಿರೋಧ ವ್ಯಕ್ತವಾಗಿದೆ. ಶಾಸಕಾಂಗ ಸಭೆಯಲ್ಲಿ ಕೊಪ್ಪಳ, ಕೊಡಗು ವಿವಿ ಬಂದ್ ಮಾಡದಂತೆ ಕಾಂಗ್ರೆಸ್ ಶಾಸಕರೇ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಗ್ರೇಟರ್ ಬೆಂಗಳೂರು ವಿಧೇಯಕ: ಇದು ಬೆಂಗಳೂರಿನ ಪಾಲಿಗೆ ಮರಣ ಶಾಸನ ಎಂದ ಆರ್​​ ಅಶೋಕ್​

ಒಟ್ಟಿನಲ್ಲಿ, ದಾಖಲೆಯ ಮಟ್ಟದಲ್ಲಿ ಹದಿನಾರನೇ ಬಾರಿಗೆ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ, ಬಜೆಟ್​ನ ಹೈಲೈಟ್ಸ್ ಅನ್ನು ಶಾಸಕರಿಗೇನೋ ಮನವರಿಕೆ ಮಾಡಿಕೊಟ್ಟಿದ್ದಾರೆ. ಆದರೆ, ಸಭೆಯಲ್ಲಿ ಶಾಸಕರ ಅಸಮಾಧಾನ ಮಾತ್ರ ಬಹಿರಂಗವಾಗಿಯೇ ಸ್ಫೋಟವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು