Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayushman Card: ರಾಜ್ಯದಲ್ಲಿ ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್‌ ವಿತರಣೆ: ಸಚಿವ ಸುಧಾಕರ್

ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯ ಸರ್ಕಾರವು 50 ಪ್ರತಿಶತದಷ್ಟು ಅರ್ಹ ಜನಸಂಖ್ಯೆಯನ್ನು ಒಳಗೊಂಡಿರುವ ಒಂದು ಕೋಟಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ವಿತರಿಸಲಿದೆ.

Ayushman Card: ರಾಜ್ಯದಲ್ಲಿ ಡಿಸೆಂಬರ್ ಅಂತ್ಯದೊಳಗೆ 1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್‌ ವಿತರಣೆ: ಸಚಿವ ಸುಧಾಕರ್
Ayushman Bharat cards
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 15, 2022 | 10:55 AM

ಬೆಂಗಳೂರು: ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯ ಸರ್ಕಾರವು 50 ಪ್ರತಿಶತದಷ್ಟು ಅರ್ಹ ಜನಸಂಖ್ಯೆಯನ್ನು ಒಳಗೊಂಡಿರುವ ಒಂದು ಕೋಟಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ವಿತರಿಸಲಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಕಡಿಮೆ ಸಮಯದಲ್ಲಿ ಕಾರ್ಡ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಸುಧಾಕರ್ ಹೇಳಿದರು. ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆಯಲ್ಲಿ ಕರ್ನಾಟಕ ಇಡೀ ದೇಶದಲ್ಲಿಯೇ ಮಾದರಿ ರಾಜ್ಯವಾಗಿ ಹೊರಹೊಮ್ಮಿದೆ.

ಡಿಸೆಂಬರ್ ಅಂತ್ಯದೊಳಗೆ ಎಲ್ಲಾ ಅರ್ಹ ಜನರಿಗೆ ಒಂದು ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್‌ಗಳನ್ನು ಶೀಘ್ರದಲ್ಲೇ ವಿತರಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಸಾರ್ವತ್ರಿಕ ಆರೋಗ್ಯ ರಕ್ಷಣೆಯ ಗುರಿಯೊಂದಿಗೆ, ಬಡತನ ರೇಖೆಗಿಂತ ಕೆಳಗಿರುವ ಎಲ್ಲಾ ರೋಗಿಗಳಿಗೆ ಉಚಿತ ಮತ್ತು ನಗದು ರಹಿತ ಪ್ರಾಥಮಿಕ, ಮಾಧ್ಯಮಿಕ ಮತ್ತು ತೃತೀಯ ಆರೋಗ್ಯ ಸೇವೆಯನ್ನು ಒದಗಿಸಲು ಕರ್ನಾಟಕವು ಆರೋಗ್ಯ ಕರ್ನಾಟಕ ಯೋಜನೆಯನ್ನು ಮಾರ್ಚ್ 2, 2018 ರಂದು ಪ್ರಾರಂಭಿಸಿತು ಮತ್ತು ಕುಟುಂಬಕ್ಕೆ ವರ್ಷಕ್ಕೆ ಎರಡು ಲಕ್ಷ ರೂ. ಈ ಯೋಜನೆ ಮೂಲಕ ನೀಡಲಾಗುವುದು.

ಈ ಯೋಜನೆಯು ಉನ್ನತ ಸರ್ಕಾರಿ ಮತ್ತು ಎಂಪನೆಲ್ಡ್ ಖಾಸಗಿ ಆಸ್ಪತ್ರೆಗಳಲ್ಲಿನ ಬಡತನದಲ್ಲಿರುವ ರೋಗಿಗಳಿಗೆ ಶೇಕಡಾ 30 ರಷ್ಟು ಸಬ್ಸಿಡಿ ಸಹ-ಪಾವತಿ ಪ್ಯಾಕೇಜ್ ಅನ್ನು ನೀಡುತ್ತದೆ ಎಂದು ಹೇಳಿದರು.

Published On - 10:55 am, Tue, 15 November 22