AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ; ಕಾರ್ಯಕ್ರಮಕ್ಕೆ ನಾಳೆ ಸಿದ್ದರಾಮಯ್ಯ ಚಾಲನೆ

ಶಾಲಾ ಮಕ್ಕಳನ್ನು ಶಾಲೆಯತ್ತ ಸೆಳೆಯಲು ಹಾಗೂ ಮಕ್ಕಳ ಆರೋಗ್ಯದ ಮೇಲೆ ಗಮನವಿಟ್ಟು ರಾಜ್ಯ ಸರ್ಕಾರ ಶಾಲಾ ಮಕ್ಕಳಿಗಾಗಿಯೇ ಹೊಸ ಯೋಜನೆಯೊಂದನ್ನು ಜಾರಿ ಮಾಡುತ್ತಿದೆ. 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುವ ಯೋಜನೆಗೆ ನಾಳೆ ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ; ಕಾರ್ಯಕ್ರಮಕ್ಕೆ ನಾಳೆ ಸಿದ್ದರಾಮಯ್ಯ ಚಾಲನೆ
ಮಧು ಬಂಗಾರಪ್ಪ
TV9 Web
| Edited By: |

Updated on: Feb 21, 2024 | 10:32 AM

Share

ಶಿವಮೊಗ್ಗ, ಫೆ.21: ನಾಳೆಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ. ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಇದೇ ತಿಂಗಳು 22 ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ‌ ಹೇಳಿದರು.

ಈ ಸರ್ಕಾರವನ್ನು ರಾಜ್ಯದ ಹೆಣ್ಣು ಮಕ್ಕಳು ಎತ್ತಿದ್ದಾರೆ. ಅದನ್ನು ಮುಂದೆ ತೆಗೆದುಕೊಂಡು ಹೋಗುವ ಕೆಲಸವನ್ನು ನೀವು ಮಾಡಬೇಕು. ಶಿವಮೊಗ್ಗ ಜಿಲ್ಲೆಗೆ 100 ಹೊಸ KSRTC ಬಸ್ ಕೇಳಿದ್ದೆ. ಸದ್ಯಕ್ಕೆ 10 ಬಸ್ ಬಂದಿದೆ. ಫೆ.24 ರಂದು ನಡೆಯುವ ಗ್ಯಾರಂಟಿ ಸಮಾವೇಶದಲ್ಲಿ ಬಸ್ ಉದ್ಘಾಟಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ‌ ತಿಳಿಸಿದರು.

ಇದನ್ನೂ ಓದಿ:  ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಭಾಗ್ಯ ಘೋಷಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಕೆಎಫ್​ಡಿ ಕಾಯಿಲೆಯಿಂದ ಮೃತಪಟ್ಟವರಿಗೆ ಪರಿಹಾರ ಕೊಡುವ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಸಚಿವ ಮಧು ಬಂಗಾರಪ್ಪ‌, ಕೆಎಫ್​ಡಿಯಿಂದ ಮೃತಪಟ್ಟವರಿಗೆ ಪರಿಹಾರ ಕೊಡಬೇಕು ಎಂದು ಸರ್ಕಾರದ ಗಮನಕ್ಕೆ ತಂದಿದ್ದೇನೆ. ಕೆಎಫ್​ಡಿಯಿಂದ ಮೃತಪಟ್ಟವರ ಮಾಹಿತಿ ಕೊಡಲು ಸೂಚಿಸಿದ್ದೇನೆ. ಪರಿಹಾರ ಕೊಡುವ ಬಗ್ಗೆ ಗಮನ ಹರಿಸಲಾಗುವುದು ಎಂದರು. ಇದೇ ವೇಳೆ ಕೇರಳದಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರಕಾರ ಪರಿಹಾರ ನೀಡುತ್ತಿರುವ ಸಂಬಂಧ ಪ್ರತಿಕ್ರಿಯೆ ನೀಡಿದರು. ಬಂಗಾರಪ್ಪ ಅವರು ಸಿಎಂ ಆಗಿದ್ದಾಗ ಸತ್ಯಸಾಯಿ ಬಾಬಾ ಆಸ್ಪತ್ರೆಗೆ 2 ಕೋಟಿ ಕೊಟ್ಟಿದ್ದರು. ಅದಕ್ಕೂ ವಿರೋಧ ಮಾಡಿದ್ರು. ನಮ್ಮ ರಾಜ್ಯದ ರೋಗಿಗಳು ಆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಅಂದಿದ್ದರು. ಅದೇ ರೀತಿ ಆನೆ ತುಳಿದು ಮೃತಪಟ್ಟಿದ್ದಕ್ಕೆ ಪರಿಹಾರ ಕೊಟ್ಟಿದ್ದಾರೆ. ಬಿಜೆಪಿಯವರಿಗೆ ಯಾವುದೇ ಕೆಲಸ ಇಲ್ಲ. ಅದಕ್ಕೆ ಇಂತಹ ಕೆಲಸ ಮಾಡ್ತಾರೆ. ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಘೋಷವಾಕ್ಯ ಬದಲಾವಣೆಗೆ ಸರ್ಕಾರ ಯಾವುದೇ ಆದೇಶ ಮಾಡಿರಲಿಲ್ಲ. ಯಾವುದೋ ವಾಟ್ಸಾಪ್ ನಲ್ಲಿ ಬಂದ ಮೆಸೇಜ್​ನಿಂದ ಗೊಂದಲವಾಗಿದೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!