AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ದಿನ ಬಿಟ್ಟು ದಿನ ಲಾಕ್​ಡೌನ್; ಜಿಲ್ಲಾಡಳಿತದ ಈ ಕೊವಿಡ್ ನಿಯಮದಿಂದ ಸಾರ್ವಜನಿಕರಲ್ಲಿ ಗೊಂದಲ

ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರು ಮಾತ್ರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ತಡೆಗೆ ದಿನ ಬಿಟ್ಟು ದಿನ ಸಂಪೂರ್ಣ ಲಾಕ್​ಡೌನ್, ವಾರಾಂತ್ಯದ ಶನಿವಾರ, ಭಾನುವಾರವೂ ಸಂಪೂರ್ಣ ಲಾಕ್ ಮಾಡಲಾಗುತ್ತಿದೆ. ತರಕಾರಿ, ಹಣ್ಣಿನ ವ್ಯಾಪಾರಿಗಳು ಹಾಗೂ ಜನರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಚಿತ್ರದುರ್ಗದಲ್ಲಿ ದಿನ ಬಿಟ್ಟು ದಿನ ಲಾಕ್​ಡೌನ್; ಜಿಲ್ಲಾಡಳಿತದ ಈ ಕೊವಿಡ್ ನಿಯಮದಿಂದ ಸಾರ್ವಜನಿಕರಲ್ಲಿ ಗೊಂದಲ
ಚಿತ್ರದುರ್ಗದಲ್ಲಿ ದಿನ ಬಿಟ್ಟು ದಿನ ಲಾಕ್​ಡೌನ್
preethi shettigar
|

Updated on: May 29, 2021 | 2:47 PM

Share

ಚಿತ್ರದುರ್ಗ: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರ ಲಾಕ್​ಡೌನ್ ಘೋಷಣೆ ಮಾಡಿದೆ. ಈ ನಿಟ್ಟಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿದೆ. ಆದರೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಮಾತ್ರ ಕೊರೊನಾ ಎರಡನೇ ಅಲೆಯ ಸೋಂಕು ಏರಿಕೆ ಆಗುತ್ತಿದೆ. ಹೀಗಾಗಿ, ಕೊವಿಡ್ ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಮುಂದಾಗಿದ್ದು, ದಿನಬಿಟ್ಟು ದಿನ ಲಾಕ್​ಡೌನ್ ಘೋಷಿಸಿದೆ. ಆದರೆ ಕೊರೊನಾ ನಿಯಂತ್ರಣಕ್ಕಿಂತ ಈ ಭಾಗದ ಜನರಲ್ಲಿ ಈ ರೀತಿಯಾ ಲಾಕ್​ಡೌನ್ ಗೊಂದಲ ಸೃಷ್ಟಿಸಿದೆ.

ಕೊರೊನಾ ಸೋಂಕಿನ ಪ್ರಮಾಣ ಶೇಕಡಾ 4ರಷ್ಟಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ, ಈಗ ಶೇ. 20ಕ್ಕೆ ಏರಿದೆ. ಹೀಗಾಗಿ, ಜಿಲ್ಲಾಡಳಿತ ದಿನಬಿಟ್ಟು ದಿನ ಲಾಕ್​ಡೌನ್ ಘೋಷಿಸಿದೆ. ಮೇ 26ರಿಂದ ಜೂನ್ 07ರವರೆಗೆ ದಿನಬಿಟ್ಟು ದಿನ ಸಂಪೂರ್ಣ ಲಾಕ್​ಡೌನನ್​ಗೆ ಡಿಸಿ ಆದೇಶಿಸಿದ್ದಾರೆ. ಜಿಲ್ಲಾಡಳಿತದ ಆದೇಶ ಸಾರ್ವಜನಿಕರು ಮತ್ತು ವ್ಯಾಪಾರಿಗಳಲ್ಲಿ ಗೊಂದಲ ಸೃಷ್ಟಿಸಿದೆ. ಹೀಗಾಗಿ ಜನ ನಿತ್ಯವೂ ರಸ್ತೆಗಿಳಿಯುತ್ತಿದ್ದು, ಪೊಲೀಸರಿಂದ ದಂಡಕ್ಕೆ ಗುರಿಯಾಗುವಂತಾಗಿದೆ.

ಅಂತೆಯೇ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿ ಬೀಳುವಂತಾಗಿದೆ. ಆದರೆ ಬೇರೆ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ಘೋಷಿಸಿದ್ದು, ಇಲ್ಲಿ ಈ ರೀತಿಯ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಹಾಗೆಯೇ ಜನರು ಕೂಡ ಈ ಬಗ್ಗೆ ಸರಿಯಾದ ಮಾಹಿತಿ ಹೊಂದಿಲ್ಲ. ಹೀಗಾಗಿ ಚಿತ್ರದುರ್ಗ ಜಿಲ್ಲಾಡಳಿತ ದಿನಬಿಟ್ಟು ದಿನ ಲಾಕ್​ಡೌನ್ ಘೋಷಿಸಿದ ಬಗ್ಗೆ ಬಗ್ಗೆ ಮರುಪರಿಶೀಲನೆ ನಡೆಸಬೇಕು ಎಂದು ಸ್ಥಳೀಯರಾದ ಶಫಿವುಲ್ಲಾ ಆಗ್ರಹಿಸಿದ್ದಾರೆ.

ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರು ಮಾತ್ರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ತಡೆಗೆ ದಿನ ಬಿಟ್ಟು ದಿನ ಸಂಪೂರ್ಣ ಲಾಕ್​ಡೌನ್, ವಾರಾಂತ್ಯದ ಶನಿವಾರ, ಭಾನುವಾರವೂ ಸಂಪೂರ್ಣ ಲಾಕ್ ಮಾಡಲಾಗುತ್ತಿದೆ. ತರಕಾರಿ, ಹಣ್ಣಿನ ವ್ಯಾಪಾರಿಗಳು ಹಾಗೂ ಜನರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲಾಡಳಿತ ಘೋಷಿಸಿರುವ ದಿನಬಿಟ್ಟು ದಿನ ಲಾಕ್​ಡೌನ್ ಸಾರ್ವಜನಿಕರಲ್ಲಿ ಗೊಂದಲು ಹುಟ್ಟುಹಾಕಿದೆ. ಹೀಗಾಗಿ, ಜಿಲ್ಲಾಡಳಿತ ಈ ಬಗ್ಗೆ ಮರು ಪರಿಶೀಲನೆ ನಡೆಸಬೇಕು ಹಾಗೂ ಕೊರೊನಾ ನಿಯಂತ್ರಣಕ್ಕೆ ಸೂಕ್ತ ರೀತಿಯ ಕ್ರಮಕೈಗೊಳ್ಳಬೇಕಿದೆ.

ಇದನ್ನೂ ಓದಿ:

ಸ್ಥಿತಿಗತಿ ನೋಡಿಕೊಂಡು ಲಾಕ್​ಡೌನ್​ ಬಗ್ಗೆ ತೀರ್ಮಾನ, ಜೂನ್ 7ರವರೆಗೆ ಎಂದಿನಂತೆ ಲಾಕ್​ಡೌನ್​ ಇರುತ್ತದೆ: ಸಿಎಂ ಬಿ.ಎಸ್.ಯಡಿಯೂರಪ್ಪ

ಕೊರೊನಾ 3ನೇ ಅಲೆಯ ಆತಂಕ‌, ಮತ್ತೆ ಲಾಕ್​ಡೌನ್​ಗೆ ಒಲವು: ಹೀಗಿರಲಿದೆ ಜೂನ್​ ತಿಂಗಳ ಚಿತ್ರಣ

Follow Us
preethi shettigar
preethi shettigar
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ