AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ದಿನ ಬಿಟ್ಟು ದಿನ ಲಾಕ್​ಡೌನ್; ಜಿಲ್ಲಾಡಳಿತದ ಈ ಕೊವಿಡ್ ನಿಯಮದಿಂದ ಸಾರ್ವಜನಿಕರಲ್ಲಿ ಗೊಂದಲ

ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರು ಮಾತ್ರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ತಡೆಗೆ ದಿನ ಬಿಟ್ಟು ದಿನ ಸಂಪೂರ್ಣ ಲಾಕ್​ಡೌನ್, ವಾರಾಂತ್ಯದ ಶನಿವಾರ, ಭಾನುವಾರವೂ ಸಂಪೂರ್ಣ ಲಾಕ್ ಮಾಡಲಾಗುತ್ತಿದೆ. ತರಕಾರಿ, ಹಣ್ಣಿನ ವ್ಯಾಪಾರಿಗಳು ಹಾಗೂ ಜನರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಚಿತ್ರದುರ್ಗದಲ್ಲಿ ದಿನ ಬಿಟ್ಟು ದಿನ ಲಾಕ್​ಡೌನ್; ಜಿಲ್ಲಾಡಳಿತದ ಈ ಕೊವಿಡ್ ನಿಯಮದಿಂದ ಸಾರ್ವಜನಿಕರಲ್ಲಿ ಗೊಂದಲ
ಚಿತ್ರದುರ್ಗದಲ್ಲಿ ದಿನ ಬಿಟ್ಟು ದಿನ ಲಾಕ್​ಡೌನ್
preethi shettigar
|

Updated on: May 29, 2021 | 2:47 PM

Share

ಚಿತ್ರದುರ್ಗ: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರ ಲಾಕ್​ಡೌನ್ ಘೋಷಣೆ ಮಾಡಿದೆ. ಈ ನಿಟ್ಟಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿದೆ. ಆದರೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಮಾತ್ರ ಕೊರೊನಾ ಎರಡನೇ ಅಲೆಯ ಸೋಂಕು ಏರಿಕೆ ಆಗುತ್ತಿದೆ. ಹೀಗಾಗಿ, ಕೊವಿಡ್ ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಮುಂದಾಗಿದ್ದು, ದಿನಬಿಟ್ಟು ದಿನ ಲಾಕ್​ಡೌನ್ ಘೋಷಿಸಿದೆ. ಆದರೆ ಕೊರೊನಾ ನಿಯಂತ್ರಣಕ್ಕಿಂತ ಈ ಭಾಗದ ಜನರಲ್ಲಿ ಈ ರೀತಿಯಾ ಲಾಕ್​ಡೌನ್ ಗೊಂದಲ ಸೃಷ್ಟಿಸಿದೆ.

ಕೊರೊನಾ ಸೋಂಕಿನ ಪ್ರಮಾಣ ಶೇಕಡಾ 4ರಷ್ಟಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ, ಈಗ ಶೇ. 20ಕ್ಕೆ ಏರಿದೆ. ಹೀಗಾಗಿ, ಜಿಲ್ಲಾಡಳಿತ ದಿನಬಿಟ್ಟು ದಿನ ಲಾಕ್​ಡೌನ್ ಘೋಷಿಸಿದೆ. ಮೇ 26ರಿಂದ ಜೂನ್ 07ರವರೆಗೆ ದಿನಬಿಟ್ಟು ದಿನ ಸಂಪೂರ್ಣ ಲಾಕ್​ಡೌನನ್​ಗೆ ಡಿಸಿ ಆದೇಶಿಸಿದ್ದಾರೆ. ಜಿಲ್ಲಾಡಳಿತದ ಆದೇಶ ಸಾರ್ವಜನಿಕರು ಮತ್ತು ವ್ಯಾಪಾರಿಗಳಲ್ಲಿ ಗೊಂದಲ ಸೃಷ್ಟಿಸಿದೆ. ಹೀಗಾಗಿ ಜನ ನಿತ್ಯವೂ ರಸ್ತೆಗಿಳಿಯುತ್ತಿದ್ದು, ಪೊಲೀಸರಿಂದ ದಂಡಕ್ಕೆ ಗುರಿಯಾಗುವಂತಾಗಿದೆ.

ಅಂತೆಯೇ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿ ಬೀಳುವಂತಾಗಿದೆ. ಆದರೆ ಬೇರೆ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ಘೋಷಿಸಿದ್ದು, ಇಲ್ಲಿ ಈ ರೀತಿಯ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಹಾಗೆಯೇ ಜನರು ಕೂಡ ಈ ಬಗ್ಗೆ ಸರಿಯಾದ ಮಾಹಿತಿ ಹೊಂದಿಲ್ಲ. ಹೀಗಾಗಿ ಚಿತ್ರದುರ್ಗ ಜಿಲ್ಲಾಡಳಿತ ದಿನಬಿಟ್ಟು ದಿನ ಲಾಕ್​ಡೌನ್ ಘೋಷಿಸಿದ ಬಗ್ಗೆ ಬಗ್ಗೆ ಮರುಪರಿಶೀಲನೆ ನಡೆಸಬೇಕು ಎಂದು ಸ್ಥಳೀಯರಾದ ಶಫಿವುಲ್ಲಾ ಆಗ್ರಹಿಸಿದ್ದಾರೆ.

ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರು ಮಾತ್ರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ತಡೆಗೆ ದಿನ ಬಿಟ್ಟು ದಿನ ಸಂಪೂರ್ಣ ಲಾಕ್​ಡೌನ್, ವಾರಾಂತ್ಯದ ಶನಿವಾರ, ಭಾನುವಾರವೂ ಸಂಪೂರ್ಣ ಲಾಕ್ ಮಾಡಲಾಗುತ್ತಿದೆ. ತರಕಾರಿ, ಹಣ್ಣಿನ ವ್ಯಾಪಾರಿಗಳು ಹಾಗೂ ಜನರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲಾಡಳಿತ ಘೋಷಿಸಿರುವ ದಿನಬಿಟ್ಟು ದಿನ ಲಾಕ್​ಡೌನ್ ಸಾರ್ವಜನಿಕರಲ್ಲಿ ಗೊಂದಲು ಹುಟ್ಟುಹಾಕಿದೆ. ಹೀಗಾಗಿ, ಜಿಲ್ಲಾಡಳಿತ ಈ ಬಗ್ಗೆ ಮರು ಪರಿಶೀಲನೆ ನಡೆಸಬೇಕು ಹಾಗೂ ಕೊರೊನಾ ನಿಯಂತ್ರಣಕ್ಕೆ ಸೂಕ್ತ ರೀತಿಯ ಕ್ರಮಕೈಗೊಳ್ಳಬೇಕಿದೆ.

ಇದನ್ನೂ ಓದಿ:

ಸ್ಥಿತಿಗತಿ ನೋಡಿಕೊಂಡು ಲಾಕ್​ಡೌನ್​ ಬಗ್ಗೆ ತೀರ್ಮಾನ, ಜೂನ್ 7ರವರೆಗೆ ಎಂದಿನಂತೆ ಲಾಕ್​ಡೌನ್​ ಇರುತ್ತದೆ: ಸಿಎಂ ಬಿ.ಎಸ್.ಯಡಿಯೂರಪ್ಪ

ಕೊರೊನಾ 3ನೇ ಅಲೆಯ ಆತಂಕ‌, ಮತ್ತೆ ಲಾಕ್​ಡೌನ್​ಗೆ ಒಲವು: ಹೀಗಿರಲಿದೆ ಜೂನ್​ ತಿಂಗಳ ಚಿತ್ರಣ

ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ