ಪ್ರವಾಹಗಳು ತಲೆದೋರಿದರೆ ಎದುರಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: May 23, 2024 | 5:34 PM

ಬರ ಪರಿಹಾರದ ಬಗ್ಗೆ ಮಾತಾಡಿದ ಸಿದ್ದರಾಮಯ್ಯ ತಮ್ಮ ಸರ್ಕಾರ ಈಗಾಗಲೇ ರೈತರಿಗೆ ತಲಾ ₹ 2,000 ಯಂತೆ ವಿತರಣೆ ಮಾಡಿದೆ. ಎನ್ ಡಿ ಆರ್ ಎಫ್ ನಿಂದ ₹3,454 ಕೋಟಿ ನೆರವು ಬಂದಿದೆ, ಅದನ್ನು ಹಂಚುವ ಕೆಲಸ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸಿಂಗ್ ನಡೆಸಿದ ಬಳಿಕ ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮೇ ತಿಂಗಳಲ್ಲಿ ಈ ಬಾರಿ ವಾಡಿಕೆಗಿಂತ ಜಾಸ್ತಿ ಮಳೆಯಾಗಿದೆ ಮತ್ತು ರಾಜ್ಯದ ಕೆಲ ಪ್ರದೇಶಗಳಲ್ಲಿ ಬಿತ್ತನೆ ಕೆಲಸ ಪ್ರಾರಂಭವಾಗಿದೆ ಎಂದು ಹೇಳಿದರು. ಹವಮಾನ ಇಲಾಖೆ (MET department) ವರದಿ ಪ್ರಕಾರ ಪ್ರಸಕ್ತ ಸಾಲಿನಲ್ಲಿ ಹೆಚ್ಚು ಮಳೆಯಾಗಲಿದೆ. ಅತಿಹೆಚ್ಚು ಮಳೆ ಕಾಣುವ ರಾಜ್ಯದ ಪ್ರದೇಶಗಳಲ್ಲಿ ಪ್ರವಾಹಗಳು (floods) ಉಂಟಾಗುವ ಪರಿಸ್ಥಿತಿ ತಲೆದೋರಿದರೆ ಅದನ್ನು ಎದುರಿಸಲು ಜಿಲ್ಲಾಡಳಿತ ಸನ್ನದ್ಧರಾಗಿರುವಂತೆ ಸೂಚಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ, ಹೂಳೆತ್ತ್ತುವ ಕೆಲಸ ಅರಂಭಿಸಿ ನೀರು ಸರಾಗವಾಗಿ ಕೆರೆಕುಂಟೆಗಳಿಗೆ ಹರಿದುಹೋಗುವಂತೆ ಮಾಡುವುದು, ನದಿ ನೀರುಹರಿವಿಗೆ ಅಡೆತಡೆಗಳು ಉಂಟಾಗಿದ್ದರೆ ಅವುಗಳನ್ನು ನಿವಾರಿಸುವುದು-ಒಟ್ಟಿನಲ್ಲಿ ಜನರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಬರ ಪರಿಹಾರದ ಬಗ್ಗೆ ಮಾತಾಡಿದ ಸಿದ್ದರಾಮಯ್ಯ ತಮ್ಮ ಸರ್ಕಾರ ಈಗಾಗಲೇ ರೈತರಿಗೆ ತಲಾ ₹ 2,000 ಯಂತೆ ವಿತರಣೆ ಮಾಡಿದೆ. ಎನ್ ಡಿ ಆರ್ ಎಫ್ ನಿಂದ ₹3,454 ಕೋಟಿ ನೆರವು ಬಂದಿದೆ, ಅದನ್ನು ಹಂಚುವ ಕೆಲಸ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Prajwal Revanna Case: ಪ್ರಕರಣದ ಸ್ಟೇಟಸ್ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದೀರ್ಘ ಚರ್ಚೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.