ಕೃಷಿ ಕೆಲಸಕ್ಕೆ ಮಕ್ಕಳ ಬದುಕು ಬಲಿ, 10 ಶಾಲಾ ಮಕ್ಕಳ ರಕ್ಷಣೆ

ರಾಯಚೂರು: ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ನಾಗಡದಿನ್ನಿ ಕ್ರಾಸ್ ಬಳಿ ಕೂಲಿ ಕೆಲಸಕ್ಕೆ ಕರೆದೊಯ್ಯುತ್ತಿದ್ದ 10 ಮಂದಿ ಶಾಲಾ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳು ರಕ್ಷಿಸಿದ್ದಾರೆ. 3 ಗೂಡ್ಸ್ ವಾಹನಗಳಲ್ಲಿ ಮಕ್ಕಳನ್ನ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ದಾಳಿ ಮಾಡಿದ ಅಧಿಕಾರಿಗಳು ಮಕ್ಕಳನ್ನ ರಕ್ಷಿಸಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೆ ಪೋಷಕರಿಂದ ವಿರೋಧವಿತ್ತು. ದಾಳಿ ವೇಳೆ ಅಧಿಕಾರಿಗಳ ಜೊತೆ ಪೋಷಕರ ವಾಗ್ವಾದ ನಡೆದಿದೆ. 150-200 ರೂಪಾಯಿ ಕೂಲಿ ಆಸೆಗೆ ಪೋಷಕರೇ ಮಕ್ಕಳನ್ನು ಕೃಷಿ ಚಟುವಟಿಕೆಗೆ ಬಾಲ ಕಾರ್ಮಿಕರಾಗಿ […]

ಕೃಷಿ ಕೆಲಸಕ್ಕೆ ಮಕ್ಕಳ ಬದುಕು ಬಲಿ, 10 ಶಾಲಾ ಮಕ್ಕಳ ರಕ್ಷಣೆ
ಸಾಧು ಶ್ರೀನಾಥ್​

Updated on: Nov 20, 2019 | 2:05 PM

ರಾಯಚೂರು: ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ನಾಗಡದಿನ್ನಿ ಕ್ರಾಸ್ ಬಳಿ ಕೂಲಿ ಕೆಲಸಕ್ಕೆ ಕರೆದೊಯ್ಯುತ್ತಿದ್ದ 10 ಮಂದಿ ಶಾಲಾ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳು ರಕ್ಷಿಸಿದ್ದಾರೆ.

3 ಗೂಡ್ಸ್ ವಾಹನಗಳಲ್ಲಿ ಮಕ್ಕಳನ್ನ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ದಾಳಿ ಮಾಡಿದ ಅಧಿಕಾರಿಗಳು ಮಕ್ಕಳನ್ನ ರಕ್ಷಿಸಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೆ ಪೋಷಕರಿಂದ ವಿರೋಧವಿತ್ತು. ದಾಳಿ ವೇಳೆ ಅಧಿಕಾರಿಗಳ ಜೊತೆ ಪೋಷಕರ ವಾಗ್ವಾದ ನಡೆದಿದೆ. 150-200 ರೂಪಾಯಿ ಕೂಲಿ ಆಸೆಗೆ ಪೋಷಕರೇ ಮಕ್ಕಳನ್ನು ಕೃಷಿ ಚಟುವಟಿಕೆಗೆ ಬಾಲ ಕಾರ್ಮಿಕರಾಗಿ ಕೆಲಸ ಮಾಡಿಸುತ್ತಿದ್ದಾರೆ.

3 ಗೂಡ್ಸ್ ವಾಹನಗಳನ್ನು ಜಪ್ತಿ ಮಾಡಿದ್ದು, ಮೂವರು ಚಾಲಕರನ್ನು ಬಂಧಸಿಲಾಗಿದೆ. ರಾಯಚೂರ ಜಿಲ್ಲೆಯ ಸಿರವಾರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Published On - 2:02 pm, Wed, 20 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us