AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ: ಬೆಳೆ ಸಮೀಕ್ಷೆ ಆ್ಯಪ್​ ಬಗ್ಗೆ ರೈತರಿಗೆ ಮಾಹಿತಿ

ಕ್ರಾಪ್ ಸರ್ವೆ ಆ್ಯಪ್​ ಮೂಲಕ ಬೆಳೆ ನೋಂದಣಿ ಮಾಡುವ‌ ವಿಧಾನ, ಬೆಳೆಗಳ ಫೋಟೊ ಅಪಲೋಡ್ ಮಾಡುವ ವಿಧಾನ ಸೇರಿದಂತೆ ಹಲವು ಮಾಹಿತಿಯನ್ನು ಜಿಲ್ಲಾಧಿಕಾರಿ ಪಡೆದುಕೊಂಡರು. ತಹಸೀಲ್ದಾರರು ಬೆಳೆ ಸಮೀಕ್ಷೆ ಬಗ್ಗೆ ಮುತುವರ್ಜಿ ವಹಿಸಬೇಕು ಎಂದು ಸೂಚನೆ ನೀಡಿದರು

ಹಳ್ಳಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ: ಬೆಳೆ ಸಮೀಕ್ಷೆ ಆ್ಯಪ್​ ಬಗ್ಗೆ ರೈತರಿಗೆ ಮಾಹಿತಿ
ಜಿಲ್ಲಾಧಿಕಾರಿಗಳಿಂದ ಬೆಳೆ ಸಮೀಕ್ಷೆ
preethi shettigar
| Edited By: |

Updated on:Jan 21, 2021 | 7:37 PM

Share

ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್ ಜಿಲ್ಲೆಯ ವಿವಿಧ ಭಾಗಕ್ಕೆ ಭೇಟಿ ನೀಡಿ ಬೆಳೆ ಸಮೀಕ್ಷೆ ಮಾಡಿದ್ದು, ಬೆಳೆಯ ಸಾಧಕ ಬಾಧಕದ ಬಗ್ಗೆ ರೈತರಿಂದ ಮಾಹಿತಿ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಬಸವಕಲ್ಯಾಣ ತಾಲೂಕಿನ ಪರತಾಪುರ ಗ್ರಾಮದ ರೈತ ಕರಣ್ ಅವರ ಜಮೀನಿಗೆ ಭೇಟಿ ನೀಡಿ, ಬೆಳೆ ಸಮೀಕ್ಷೆಯ ಬಗ್ಗೆ ಮಾಹಿತಿ ಪಡೆದರು.

ರೈತ ಕರಣ್ ಅವರು ಅಂದಾಜು 5 ಎಕರೆ ಜಮೀನಿನಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆಸಿದ ಬೆಳೆಗಳ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ, ಈ ಬೆಳೆ ಸಮೀಕ್ಷೆ ಪ್ರಕ್ರಿಯೆಗೆ ತಮ್ಮ ಜೊತೆಗೆ ಗ್ರಾಮಕ್ಕೆ ಬಂದಿದ್ದ ಲೆಕ್ಕಾಧಿಕಾರಿಗಳೊಂದಿಗೆ ಚರ್ಚಿಸಿದರು. ಕ್ರಾಪ್ ಸರ್ವೆ ಆ್ಯಪ್​ ಮೂಲಕ ಬೆಳೆ ನೋಂದಣಿ ಮಾಡುವ‌ ವಿಧಾನ, ಬೆಳೆಗಳ ಫೋಟೊ ಅಪಲೋಡ್ ಮಾಡುವ ವಿಧಾನ ಸೇರಿದಂತೆ ಹಲವು ಮಾಹಿತಿಯನ್ನು ಜಿಲ್ಲಾಧಿಕಾರಿ ಪಡೆದುಕೊಂಡರು.

ರೈತ ಕರಣ್ ಅವರ 5 ಎಕರೆ ಜಮೀನಿನಲ್ಲಿ ಇರುವ ಕೊತ್ತಂಬರಿ, ಪುಂಡಿ ಪಲ್ಯ, ಜೋಳ, ಕಡಲೆ ಎಲ್ಲವನ್ನು ಗುರುತಿಸಿ ಬೆಳೆ ಸಮೀಕ್ಷೆ ಆ್ಯಪ್​ನಲ್ಲಿ ನೋಂದಣಿ ಮಾಡುವ ಪ್ರಕ್ರಿಯೆಯನ್ನ ಸಮಗ್ರ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಬೆಳೆ ಸಮೀಕ್ಷೆ ಕಾರ್ಯವನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಿಗರು ಗಮನ ಹರಿಸಬೇಕು ಎಂದು ಸೂಚಿಸಿದರು.

ರೈತರ ಜಮೀನಿನಲ್ಲಿ ಬೆಳೆ ಸಮೀಕ್ಷೆ

ತಹಸೀಲ್ದಾರಗೆ ಸೂಚನೆ: ಈ ಬೆಳೆ ಸಮೀಕ್ಷೆಯು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ತಹಸೀಲ್ದಾರರು ಈ ಬಗ್ಗೆ ಮುತುವರ್ಜಿ ವಹಿಸಿ, ಪ್ರತಿ ಗಂಟೆಗೊಮ್ಮೆ ಪರಿಶೀಲನೆ ನಡೆಸುತ್ತ ನೋಂದಣಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಇದೆ ವೇಳೆಯಲ್ಲಿ ಜಿಲ್ಲಾಧಿಕಾರಿಗಳು ತಹಸೀಲ್ದಾರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬಸವಕಲ್ಯಾಣ ಸಹಾಯಕ ಆಸಕ್ತರಾದ ಭುವನೇಶ ಪಟೇಲ್, ತಹಸೀಲ್ದಾರ ಸಾವಿತ್ರಿ ಸಲಗರ ಉಪಸ್ಥಿತರಿದ್ದರು.

ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಜಾರಿ, ಎಲ್ಲಿ?

Published On - 7:34 pm, Thu, 21 January 21

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ