ಹಳ್ಳಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ: ಬೆಳೆ ಸಮೀಕ್ಷೆ ಆ್ಯಪ್​ ಬಗ್ಗೆ ರೈತರಿಗೆ ಮಾಹಿತಿ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 21, 2021 | 7:37 PM

ಕ್ರಾಪ್ ಸರ್ವೆ ಆ್ಯಪ್​ ಮೂಲಕ ಬೆಳೆ ನೋಂದಣಿ ಮಾಡುವ‌ ವಿಧಾನ, ಬೆಳೆಗಳ ಫೋಟೊ ಅಪಲೋಡ್ ಮಾಡುವ ವಿಧಾನ ಸೇರಿದಂತೆ ಹಲವು ಮಾಹಿತಿಯನ್ನು ಜಿಲ್ಲಾಧಿಕಾರಿ ಪಡೆದುಕೊಂಡರು. ತಹಸೀಲ್ದಾರರು ಬೆಳೆ ಸಮೀಕ್ಷೆ ಬಗ್ಗೆ ಮುತುವರ್ಜಿ ವಹಿಸಬೇಕು ಎಂದು ಸೂಚನೆ ನೀಡಿದರು

ಹಳ್ಳಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ: ಬೆಳೆ ಸಮೀಕ್ಷೆ ಆ್ಯಪ್​ ಬಗ್ಗೆ ರೈತರಿಗೆ ಮಾಹಿತಿ
ಜಿಲ್ಲಾಧಿಕಾರಿಗಳಿಂದ ಬೆಳೆ ಸಮೀಕ್ಷೆ
Follow us on

ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್ ಜಿಲ್ಲೆಯ ವಿವಿಧ ಭಾಗಕ್ಕೆ ಭೇಟಿ ನೀಡಿ ಬೆಳೆ ಸಮೀಕ್ಷೆ ಮಾಡಿದ್ದು, ಬೆಳೆಯ ಸಾಧಕ ಬಾಧಕದ ಬಗ್ಗೆ ರೈತರಿಂದ ಮಾಹಿತಿ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಬಸವಕಲ್ಯಾಣ ತಾಲೂಕಿನ ಪರತಾಪುರ ಗ್ರಾಮದ ರೈತ ಕರಣ್ ಅವರ ಜಮೀನಿಗೆ ಭೇಟಿ ನೀಡಿ, ಬೆಳೆ ಸಮೀಕ್ಷೆಯ ಬಗ್ಗೆ ಮಾಹಿತಿ ಪಡೆದರು.

ರೈತ ಕರಣ್ ಅವರು ಅಂದಾಜು 5 ಎಕರೆ ಜಮೀನಿನಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆಸಿದ ಬೆಳೆಗಳ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ, ಈ ಬೆಳೆ ಸಮೀಕ್ಷೆ ಪ್ರಕ್ರಿಯೆಗೆ ತಮ್ಮ ಜೊತೆಗೆ ಗ್ರಾಮಕ್ಕೆ ಬಂದಿದ್ದ ಲೆಕ್ಕಾಧಿಕಾರಿಗಳೊಂದಿಗೆ ಚರ್ಚಿಸಿದರು. ಕ್ರಾಪ್ ಸರ್ವೆ ಆ್ಯಪ್​ ಮೂಲಕ ಬೆಳೆ ನೋಂದಣಿ ಮಾಡುವ‌ ವಿಧಾನ, ಬೆಳೆಗಳ ಫೋಟೊ ಅಪಲೋಡ್ ಮಾಡುವ ವಿಧಾನ ಸೇರಿದಂತೆ ಹಲವು ಮಾಹಿತಿಯನ್ನು ಜಿಲ್ಲಾಧಿಕಾರಿ ಪಡೆದುಕೊಂಡರು.

ರೈತ ಕರಣ್ ಅವರ 5 ಎಕರೆ ಜಮೀನಿನಲ್ಲಿ ಇರುವ ಕೊತ್ತಂಬರಿ, ಪುಂಡಿ ಪಲ್ಯ, ಜೋಳ, ಕಡಲೆ ಎಲ್ಲವನ್ನು ಗುರುತಿಸಿ ಬೆಳೆ ಸಮೀಕ್ಷೆ ಆ್ಯಪ್​ನಲ್ಲಿ ನೋಂದಣಿ ಮಾಡುವ ಪ್ರಕ್ರಿಯೆಯನ್ನ ಸಮಗ್ರ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಬೆಳೆ ಸಮೀಕ್ಷೆ ಕಾರ್ಯವನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಿಗರು ಗಮನ ಹರಿಸಬೇಕು ಎಂದು ಸೂಚಿಸಿದರು.

ರೈತರ ಜಮೀನಿನಲ್ಲಿ ಬೆಳೆ ಸಮೀಕ್ಷೆ

ತಹಸೀಲ್ದಾರಗೆ ಸೂಚನೆ:
ಈ ಬೆಳೆ ಸಮೀಕ್ಷೆಯು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ತಹಸೀಲ್ದಾರರು ಈ ಬಗ್ಗೆ ಮುತುವರ್ಜಿ ವಹಿಸಿ, ಪ್ರತಿ ಗಂಟೆಗೊಮ್ಮೆ ಪರಿಶೀಲನೆ ನಡೆಸುತ್ತ ನೋಂದಣಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಇದೆ ವೇಳೆಯಲ್ಲಿ ಜಿಲ್ಲಾಧಿಕಾರಿಗಳು ತಹಸೀಲ್ದಾರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬಸವಕಲ್ಯಾಣ ಸಹಾಯಕ ಆಸಕ್ತರಾದ ಭುವನೇಶ ಪಟೇಲ್, ತಹಸೀಲ್ದಾರ ಸಾವಿತ್ರಿ ಸಲಗರ ಉಪಸ್ಥಿತರಿದ್ದರು.

ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಜಾರಿ, ಎಲ್ಲಿ?

 

Published On - 7:34 pm, Thu, 21 January 21