AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ: ಆರ್​ಟಿಒ ಎಚ್ಚರಿಕೆಗೂ ಬಗ್ಗದ ಖಾಸಗಿ ಬಸ್​ಗಳು, ಗಗನಕ್ಕೇರಿದ ಟಿಕೆಟ್ ದರ

ದೀಪಾವಳಿ ಹಬ್ಬ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಲು ರಜೆ ಇದ್ದು, ಖಾಸಗಿ ಬಸ್​​​ಗಳಿಗೆ ಟಿಕೆಟ್​ ದರ ಬೇಕಾಬಿಟ್ಟಿ ಏರಿಕೆ ಮಾಡದಂತೆ ಆರ್​​ಟಿಒ ಈಗಾಗಲೇ ಸೂಚನೆ, ಎಚ್ಚರಿಕೆ ನೀಡಿದೆ. ಆದರೆ, ಸಾರಿಗೆ ಇಲಾಖೆಯ ಎಚ್ಚರಿಕೆಯನ್ನು ಕ್ಯಾರೇ ಮಾಡದ ಖಾಸಗಿ ಬಸ್​ಗಳು ಸುಲಿಗೆ ಆರಂಭಿಸಿವೆ. ಟಿಕೆಟ್ ದರ ಗಗನಕ್ಕೇರಿಸಿವೆ.

ದೀಪಾವಳಿ: ಆರ್​ಟಿಒ ಎಚ್ಚರಿಕೆಗೂ ಬಗ್ಗದ ಖಾಸಗಿ ಬಸ್​ಗಳು, ಗಗನಕ್ಕೇರಿದ ಟಿಕೆಟ್ ದರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Oct 28, 2024 | 12:39 PM

Share

ಬೆಂಗಳೂರು, ಅಕ್ಟೋಬರ್ 28: ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ರಜೆಗಳು ಸಮೀಪಿಸುತ್ತಿದ್ದಂತೆಯೇ ಖಾಸಗಿ ಬಸ್ ಟಿಕೆಟ್ ದರಗಳು ಗಗನಕ್ಕೇರಿದೆ. ಬೆಂಗಳೂರು ಹಾಗೂ ಮಂಗಳೂರು ಮಧ್ಯೆ ಖಾಸಗಿ ಬಸ್​ಗಳು 1,000 ರೂ.ನಿಂದ 1,500 ರೂ.ವರಗೆ ಟಿಕೆಟ್ ದರ ವಸೂಲಿ ಮಾಡುತ್ತಿವೆ. ಕೆಲವು ಬಸ್​​ಗಳಲ್ಲಂತೂ ಟಿಕೆಟ್ ದರ 2,000 ರೂ. ವರೆಗೆ ಇದೆ.

ನೈಋತ್ಯ ರೈಲ್ವೆ ವಿಶೇಷ ದೀಪಾವಳಿ ರೈಲುಗಳ ಸೇವೆ ಒದಗಿಸುತ್ತಿದೆ. ಆದರೆ, ವಿಶೇಷ ರೈಲುಗಳ ಎಲ್ಲ ಸೀಟುಗಳು ಈಗಾಗಲೇ ಕಾಯ್ದಿರಿಸಲಾಗಿವೆ. ಹೀಗಾಗಿ ಬಸ್​ಗಳಿಗೆ ಬೇಡಿಕೆ ಹೆಚ್ಚಾಗಿದೆ. ಕೆಎಸ್​​ಆರ್​ಟಿಸಿ ಬಸ್​​ಗಳಲ್ಲಿಯೂ ಬಹುತೇಕ ಸೀಟ್​​ಗಳು ಮುಂಗಡ ಕಾಯ್ದಿರಿಸಲಾಗಿದೆ. ವಿಶೇಷ ಬಸ್​ಗಳಲ್ಲಿಯೂ ಮುಂಗಡ ಕಾಯ್ದಿರಿಸುವಿಕೆ ಜೋರಾಗಿದೆ. ಹೀಗಾಗಿ ಪ್ರಯಾಣಿಕರು ದುಬಾರಿ ದರ ತೆತ್ತು ಆನ್‌ಲೈನ್‌ನಲ್ಲಿ ಖಾಸಗಿ ಬಸ್‌ಗಳ ಟಿಕೆಟ್​ ಖರೀದಿಸುತ್ತಿದ್ದಾರೆ.

ಬೆಂಗಳೂರು ಹಾಗೂ ಉಡುಪಿ ಮಧ್ಯೆ ಸಾಮಾನ್ಯವಾಗಿ 400 ರೂ.ನಿಂದ 700 ರೂ. ಇರುತ್ತಿದ್ದ ಖಾಸಗಿ ಬಸ್ ಟಿಕೆಟ್ ದರ ಈಗ 1,000 ರೂ. ದಾಟಿದೆ.

ಹೆಚ್ಚುವರಿ ಖಾಸಗಿ ಬಸ್​ಗಳು: ಟಿಕೆಟ್ ದರ ದುಬಾರಿ

ಹಬ್ಬ ಹಾಗೂ ದೀರ್ಘ ವಾರಾಂತ್ಯದ ಕಾರಣ ಪ್ರಯಾಣಿಕರ ಹೆಚ್ಚುವರಿ ಬೇಡಿಕೆಗೆ ಅನುಗುಣವಾಗಿ ಕೆಲವು ಖಾಸಗಿ ಬಸ್ ಸಂಸ್ಥೆಗಳೂ ಸಹ ಹೆಚ್ಚುವರಿ ಬಸ್​ಗಳನ್ನು ನಿಯೋಜಿಸಲು ಮುಂದಾಗಿವೆ. ಆದರೆ, ಈ ಬಸ್​ಗಳಲ್ಲಿ ಟಿಕೆಟ್ ದರ ದುಪ್ಪಟ್ಟು ನಿಗದಿಪಡಿಸಲಾಗುತ್ತಿದೆ. ಲಗೇಜ್‌ಗೂ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತಿದೆ ಎಂದು ಪ್ರಯಾಣಿಕರು ಅಲವತ್ತುಕೊಳ್ಳುತ್ತಿದ್ದಾರೆ.

ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಸ್ಥಿರ

ಮತ್ತೊಂದೆಡೆ, ಮಂಗಳೂರು ಮತ್ತು ಬೆಂಗಳೂರು ನಡುವಿನ ಕೆಎಸ್‌ಆರ್‌ಟಿಸಿ ಬಸ್ ದರಗಳು ಸ್ಥಿರವಾಗಿವೆ. ಹೆಚ್ಚುವರಿ ವಿಶೇಷ ಬಸ್​​ ಸೇವೆಗಳಿಗೆ ಮಾತ್ರ ಶೇ 20 ರಷ್ಟು ದರ ಹೆಚ್ಚಳ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಡುಪಿ ಮತ್ತು ಕುಂದಾಪುರ ಮಾರ್ಗಗಳು ಸೇರಿದಂತೆ ಕರಾವಳಿ ಪ್ರದೇಶಗಳಿಗೆ ಈವರೆಗೆ 18 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ನಿಯೋಜಿಸಿದೆ.

ಇದನ್ನೂ ಓದಿ: ದೀಪಾವಳಿಗೆ ಖಾಸಗಿ ಬಸ್‌ ದುಬಾರಿ: ಮಾಲೀಕರಿಗೆ ಸಾರಿಗೆ ಇಲಾಖೆಗೆ ಖಡಕ್ ಎಚ್ಚರಿಕೆ!

ಆರ್​ಟಿಒ ಅಧಿಕಾರಿಗಳು ಹೇಳುವುದೇನು?

ಕಾಂಟ್ರಾಕ್ಟ್ ಕ್ಯಾರೇಜ್ ಬಸ್‌ಗಳಿಗೆ ಆರ್‌ಟಿಒ ಇಂತಿಷ್ಟೇ ಎಂದು ದರ ನಿಗದಿಪಡಿಸಿಲ್ಲ. ಆದಾಗ್ಯೂ, ಖಾಸಗಿ ಬಸ್​​ಗಳವರು ಬೇಕಾಬಿಟ್ಟಿ ದರ ಹೆಚ್ಚಿಸಲು ಸಾಧ್ಯವಿಲ್ಲ. ಆ ಬಗ್ಗೆ ದೂರುಗಳು ಬಂದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಆರ್​ಟಿಒ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ