AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ: ಆರ್​ಟಿಒ ಎಚ್ಚರಿಕೆಗೂ ಬಗ್ಗದ ಖಾಸಗಿ ಬಸ್​ಗಳು, ಗಗನಕ್ಕೇರಿದ ಟಿಕೆಟ್ ದರ

ದೀಪಾವಳಿ ಹಬ್ಬ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಲು ರಜೆ ಇದ್ದು, ಖಾಸಗಿ ಬಸ್​​​ಗಳಿಗೆ ಟಿಕೆಟ್​ ದರ ಬೇಕಾಬಿಟ್ಟಿ ಏರಿಕೆ ಮಾಡದಂತೆ ಆರ್​​ಟಿಒ ಈಗಾಗಲೇ ಸೂಚನೆ, ಎಚ್ಚರಿಕೆ ನೀಡಿದೆ. ಆದರೆ, ಸಾರಿಗೆ ಇಲಾಖೆಯ ಎಚ್ಚರಿಕೆಯನ್ನು ಕ್ಯಾರೇ ಮಾಡದ ಖಾಸಗಿ ಬಸ್​ಗಳು ಸುಲಿಗೆ ಆರಂಭಿಸಿವೆ. ಟಿಕೆಟ್ ದರ ಗಗನಕ್ಕೇರಿಸಿವೆ.

ದೀಪಾವಳಿ: ಆರ್​ಟಿಒ ಎಚ್ಚರಿಕೆಗೂ ಬಗ್ಗದ ಖಾಸಗಿ ಬಸ್​ಗಳು, ಗಗನಕ್ಕೇರಿದ ಟಿಕೆಟ್ ದರ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Oct 28, 2024 | 12:39 PM

ಬೆಂಗಳೂರು, ಅಕ್ಟೋಬರ್ 28: ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ರಜೆಗಳು ಸಮೀಪಿಸುತ್ತಿದ್ದಂತೆಯೇ ಖಾಸಗಿ ಬಸ್ ಟಿಕೆಟ್ ದರಗಳು ಗಗನಕ್ಕೇರಿದೆ. ಬೆಂಗಳೂರು ಹಾಗೂ ಮಂಗಳೂರು ಮಧ್ಯೆ ಖಾಸಗಿ ಬಸ್​ಗಳು 1,000 ರೂ.ನಿಂದ 1,500 ರೂ.ವರಗೆ ಟಿಕೆಟ್ ದರ ವಸೂಲಿ ಮಾಡುತ್ತಿವೆ. ಕೆಲವು ಬಸ್​​ಗಳಲ್ಲಂತೂ ಟಿಕೆಟ್ ದರ 2,000 ರೂ. ವರೆಗೆ ಇದೆ.

ನೈಋತ್ಯ ರೈಲ್ವೆ ವಿಶೇಷ ದೀಪಾವಳಿ ರೈಲುಗಳ ಸೇವೆ ಒದಗಿಸುತ್ತಿದೆ. ಆದರೆ, ವಿಶೇಷ ರೈಲುಗಳ ಎಲ್ಲ ಸೀಟುಗಳು ಈಗಾಗಲೇ ಕಾಯ್ದಿರಿಸಲಾಗಿವೆ. ಹೀಗಾಗಿ ಬಸ್​ಗಳಿಗೆ ಬೇಡಿಕೆ ಹೆಚ್ಚಾಗಿದೆ. ಕೆಎಸ್​​ಆರ್​ಟಿಸಿ ಬಸ್​​ಗಳಲ್ಲಿಯೂ ಬಹುತೇಕ ಸೀಟ್​​ಗಳು ಮುಂಗಡ ಕಾಯ್ದಿರಿಸಲಾಗಿದೆ. ವಿಶೇಷ ಬಸ್​ಗಳಲ್ಲಿಯೂ ಮುಂಗಡ ಕಾಯ್ದಿರಿಸುವಿಕೆ ಜೋರಾಗಿದೆ. ಹೀಗಾಗಿ ಪ್ರಯಾಣಿಕರು ದುಬಾರಿ ದರ ತೆತ್ತು ಆನ್‌ಲೈನ್‌ನಲ್ಲಿ ಖಾಸಗಿ ಬಸ್‌ಗಳ ಟಿಕೆಟ್​ ಖರೀದಿಸುತ್ತಿದ್ದಾರೆ.

ಬೆಂಗಳೂರು ಹಾಗೂ ಉಡುಪಿ ಮಧ್ಯೆ ಸಾಮಾನ್ಯವಾಗಿ 400 ರೂ.ನಿಂದ 700 ರೂ. ಇರುತ್ತಿದ್ದ ಖಾಸಗಿ ಬಸ್ ಟಿಕೆಟ್ ದರ ಈಗ 1,000 ರೂ. ದಾಟಿದೆ.

ಹೆಚ್ಚುವರಿ ಖಾಸಗಿ ಬಸ್​ಗಳು: ಟಿಕೆಟ್ ದರ ದುಬಾರಿ

ಹಬ್ಬ ಹಾಗೂ ದೀರ್ಘ ವಾರಾಂತ್ಯದ ಕಾರಣ ಪ್ರಯಾಣಿಕರ ಹೆಚ್ಚುವರಿ ಬೇಡಿಕೆಗೆ ಅನುಗುಣವಾಗಿ ಕೆಲವು ಖಾಸಗಿ ಬಸ್ ಸಂಸ್ಥೆಗಳೂ ಸಹ ಹೆಚ್ಚುವರಿ ಬಸ್​ಗಳನ್ನು ನಿಯೋಜಿಸಲು ಮುಂದಾಗಿವೆ. ಆದರೆ, ಈ ಬಸ್​ಗಳಲ್ಲಿ ಟಿಕೆಟ್ ದರ ದುಪ್ಪಟ್ಟು ನಿಗದಿಪಡಿಸಲಾಗುತ್ತಿದೆ. ಲಗೇಜ್‌ಗೂ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತಿದೆ ಎಂದು ಪ್ರಯಾಣಿಕರು ಅಲವತ್ತುಕೊಳ್ಳುತ್ತಿದ್ದಾರೆ.

ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಸ್ಥಿರ

ಮತ್ತೊಂದೆಡೆ, ಮಂಗಳೂರು ಮತ್ತು ಬೆಂಗಳೂರು ನಡುವಿನ ಕೆಎಸ್‌ಆರ್‌ಟಿಸಿ ಬಸ್ ದರಗಳು ಸ್ಥಿರವಾಗಿವೆ. ಹೆಚ್ಚುವರಿ ವಿಶೇಷ ಬಸ್​​ ಸೇವೆಗಳಿಗೆ ಮಾತ್ರ ಶೇ 20 ರಷ್ಟು ದರ ಹೆಚ್ಚಳ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಡುಪಿ ಮತ್ತು ಕುಂದಾಪುರ ಮಾರ್ಗಗಳು ಸೇರಿದಂತೆ ಕರಾವಳಿ ಪ್ರದೇಶಗಳಿಗೆ ಈವರೆಗೆ 18 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ನಿಯೋಜಿಸಿದೆ.

ಇದನ್ನೂ ಓದಿ: ದೀಪಾವಳಿಗೆ ಖಾಸಗಿ ಬಸ್‌ ದುಬಾರಿ: ಮಾಲೀಕರಿಗೆ ಸಾರಿಗೆ ಇಲಾಖೆಗೆ ಖಡಕ್ ಎಚ್ಚರಿಕೆ!

ಆರ್​ಟಿಒ ಅಧಿಕಾರಿಗಳು ಹೇಳುವುದೇನು?

ಕಾಂಟ್ರಾಕ್ಟ್ ಕ್ಯಾರೇಜ್ ಬಸ್‌ಗಳಿಗೆ ಆರ್‌ಟಿಒ ಇಂತಿಷ್ಟೇ ಎಂದು ದರ ನಿಗದಿಪಡಿಸಿಲ್ಲ. ಆದಾಗ್ಯೂ, ಖಾಸಗಿ ಬಸ್​​ಗಳವರು ಬೇಕಾಬಿಟ್ಟಿ ದರ ಹೆಚ್ಚಿಸಲು ಸಾಧ್ಯವಿಲ್ಲ. ಆ ಬಗ್ಗೆ ದೂರುಗಳು ಬಂದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಆರ್​ಟಿಒ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್