AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬ: NWKRTCಯಿಂದ ವಿಶೇಷ ಬಸ್, ಯಾವ ಯಾವ ನಗರಗಳಿಗೆ ಸಂಪರ್ಕ? ಇಲ್ಲಿದೆ ಮಾಹಿತಿ

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ ಬಸ್​ಗಳನ್ನು ರಸ್ತೆಗೆ ಇಳಿಸಲಿದೆ. ಯಾವ ಯಾವ ನಗರಗಳಿಂದ ವಿಶೇಷ ಬಸ್​ಗಳನ್ನು ಬಿಡಲಾಗಿದೆ? ಇಲ್ಲಿದೆ ಮಾಹಿತಿ.

ದೀಪಾವಳಿ ಹಬ್ಬ: NWKRTCಯಿಂದ ವಿಶೇಷ ಬಸ್, ಯಾವ ಯಾವ ನಗರಗಳಿಗೆ ಸಂಪರ್ಕ? ಇಲ್ಲಿದೆ ಮಾಹಿತಿ
ಎನ್​ಡಬ್ಲೂಕೆಆರ್​ಟಿಸಿ ಬಸ್​​
ವಿವೇಕ ಬಿರಾದಾರ
|

Updated on:Oct 28, 2024 | 7:42 AM

Share

ಬೆಂಗಳೂರು, ಅಕ್ಟೋಬರ್​ 28: ದೀಪಾವಳಿ ಹಬ್ಬ (Deepavali Festival) ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುತ್ತಾರೆ. ಮತ್ತು ಹಬ್ಬ ಮುಗಿಸಿಕೊಂಡು ವಾಪಸ್​ ಆಗುತ್ತಾರೆ. ಇದರಿಂದ ಸರ್ಕಾರಿ ಬಸ್​ಗಳಲ್ಲಿ (Government Buses) ಪ್ರಯಾಣಿಕರ ಸಂಖ್ಯೆ ಹೆಚ್ಚಾಳವಾಗಲಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹೆಚ್ಚುವರಿ ಬಸ್​ಗಳನ್ನು ರಸ್ತೆಗೆ ಇಳಿಸಲಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಎನ್​ಡಬ್ಲೂಕೆಆರ್​ಟಿಸಿ ಮಾಹಿತಿ ನೀಡಿದೆ.

ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ತೆರಳುವ ಹಾಗೂ ಹಬ್ಬ ಮುಗಿಸಿ ಹಿಂದಿರುವಗ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಬಸ್​ ವ್ಯವಸ್ಥೆ ಮಾಡಲಾಗಿದೆ ಎಂದು ಎನ್​ಡಬ್ಲುಕೆಆರ್​ಟಿಸಿ ತಿಳಿಸಿದೆ. ಮಂಗಳವಾರ (ಅ.29) ರಿಂದ ಶುಕ್ರವಾರ (ನ.​1) ಹಾಗೂ ರವಿವಾರ (ನ.03) ಮತ್ತು ಸೋಮವಾರ (ನ.04) ರಂದು ಈ ನಗರಗಳಿಂದ ಹೆಚ್ಚುವರಿ ಬಸ್​ಗಳು ಸಂಚರಿಸಲಿವೆ​.

ಇದನ್ನೂ ಓದಿ: ದೀಪಾವಳಿ ಹಬ್ಬ: ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿ ಮಧ್ಯೆ ವಿಶೇಷ ರೈಲು

ಬೆಂಗಳೂರು, ಮಂಗಳೂರು, ಪುಣೆ, ಗೋವಾ, ಹೈದರಾಬಾದ್​​ ನಗರಗಳಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ ಸೇರಿದಂತೆ ಇನ್ನೀತರ ಸ್ಥಳಗಳಿಗೆ ಹೆಚ್ಚುವರಿ ಬಸ್​ಗಳು ಕಾರ್ಯ ನಿರ್ವಹಿಸಲಿವೆ​. ಪ್ರಯಾಣಿಕರು ಇದರ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಟ್ವಿಟರ್​ ಪೋಸ್ಟ್​​

ಟಿಕೆಟ್ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ

ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್​ಸೈಟ್ ಮುಖಾಂತರ ಮಾಡಬಹುದಾಗಿದ್ದು, ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್​ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ನಿಗಮ ತಿಳಿಸಿದೆ.

ಎನ್​ಡಬ್ಲೂಕೆಆರ್​ಟಿಸಿ ಈ ಹಿಂದೆ ದಸರಾ ಹಬ್ಬದ ಸಂದರ್ಭದಲ್ಲಿಯೂ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್​ಗಳನ್ನು ಓಡಿಸಿತ್ತು. ಇದರಿಂದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಿತ್ತು. ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸುವಲ್ಲಿ ಎನ್​ಡಬ್ಲೂಕೆಆರ್​ಟಿಸಿ ಯಶಸ್ವಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Mon, 28 October 24

Follow Us
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ರಿಶಿ ಸುನಾಕ್ ಹೆಂಡತಿ ಕನ್ನಡದಲ್ಲಿ ಎಷ್ಟು ಚೆನ್ನಾಗಿ ಮಾತಾಡ್ತಾರೆ ಗೊತ್ತಾ?
ರಿಶಿ ಸುನಾಕ್ ಹೆಂಡತಿ ಕನ್ನಡದಲ್ಲಿ ಎಷ್ಟು ಚೆನ್ನಾಗಿ ಮಾತಾಡ್ತಾರೆ ಗೊತ್ತಾ?
ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!
ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!
ಟ್ರಕ್​ನಿಂದ ಹಾರಿ ಪ್ರಾಣ ಉಳಿಸಿಕೊಂಡು, 17 ಕಿ.ಮೀ ನಡೆದ ನಾಯಿಗಳು
ಟ್ರಕ್​ನಿಂದ ಹಾರಿ ಪ್ರಾಣ ಉಳಿಸಿಕೊಂಡು, 17 ಕಿ.ಮೀ ನಡೆದ ನಾಯಿಗಳು
ತೆಲುಗಿಗೆ ಹೊರಟ ಕಿರಣ್​ ರಾಜ್, ನಮ್ರತಾ, ಭವ್ಯಾ
ತೆಲುಗಿಗೆ ಹೊರಟ ಕಿರಣ್​ ರಾಜ್, ನಮ್ರತಾ, ಭವ್ಯಾ
ಲಿಯಾರಿಯ ಬೀದಿ ಬೀದಿಗಳಲ್ಲಿ ಭಾರತೀಯ ಸೀಕ್ರೆಟ್ ಏಜೆಂಟ್​ಗಳಿಗಾಗಿ ಹುಡುಕಾಟ?
ಲಿಯಾರಿಯ ಬೀದಿ ಬೀದಿಗಳಲ್ಲಿ ಭಾರತೀಯ ಸೀಕ್ರೆಟ್ ಏಜೆಂಟ್​ಗಳಿಗಾಗಿ ಹುಡುಕಾಟ?
'ಬಂದರೋ ಬಂದರೋ ಭಾವ ಬಂದರೋ' ಎಂದು ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು!
'ಬಂದರೋ ಬಂದರೋ ಭಾವ ಬಂದರೋ' ಎಂದು ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು!
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಡ್ರೈವರ್ ಟ್ಯಾಲೆಂಟ್ ಮೆಚ್ಚಬೇಕೆಂದ ಲಾಯರ್!
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಡ್ರೈವರ್ ಟ್ಯಾಲೆಂಟ್ ಮೆಚ್ಚಬೇಕೆಂದ ಲಾಯರ್!
ರಘು ಜಿಮ್ ಅಲ್ಲಿ ಫಿಟ್ನೆಸ್​ ಎಕ್ಸ್​​ಪರ್ಟ್ ಆದ ರಕ್ಷಿತಾ ಶೆಟ್ಟಿ
ರಘು ಜಿಮ್ ಅಲ್ಲಿ ಫಿಟ್ನೆಸ್​ ಎಕ್ಸ್​​ಪರ್ಟ್ ಆದ ರಕ್ಷಿತಾ ಶೆಟ್ಟಿ