AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬ: NWKRTCಯಿಂದ ವಿಶೇಷ ಬಸ್, ಯಾವ ಯಾವ ನಗರಗಳಿಗೆ ಸಂಪರ್ಕ? ಇಲ್ಲಿದೆ ಮಾಹಿತಿ

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ ಬಸ್​ಗಳನ್ನು ರಸ್ತೆಗೆ ಇಳಿಸಲಿದೆ. ಯಾವ ಯಾವ ನಗರಗಳಿಂದ ವಿಶೇಷ ಬಸ್​ಗಳನ್ನು ಬಿಡಲಾಗಿದೆ? ಇಲ್ಲಿದೆ ಮಾಹಿತಿ.

ದೀಪಾವಳಿ ಹಬ್ಬ: NWKRTCಯಿಂದ ವಿಶೇಷ ಬಸ್, ಯಾವ ಯಾವ ನಗರಗಳಿಗೆ ಸಂಪರ್ಕ? ಇಲ್ಲಿದೆ ಮಾಹಿತಿ
ಎನ್​ಡಬ್ಲೂಕೆಆರ್​ಟಿಸಿ ಬಸ್​​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Oct 28, 2024 | 7:42 AM

Share

ಬೆಂಗಳೂರು, ಅಕ್ಟೋಬರ್​ 28: ದೀಪಾವಳಿ ಹಬ್ಬ (Deepavali Festival) ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುತ್ತಾರೆ. ಮತ್ತು ಹಬ್ಬ ಮುಗಿಸಿಕೊಂಡು ವಾಪಸ್​ ಆಗುತ್ತಾರೆ. ಇದರಿಂದ ಸರ್ಕಾರಿ ಬಸ್​ಗಳಲ್ಲಿ (Government Buses) ಪ್ರಯಾಣಿಕರ ಸಂಖ್ಯೆ ಹೆಚ್ಚಾಳವಾಗಲಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹೆಚ್ಚುವರಿ ಬಸ್​ಗಳನ್ನು ರಸ್ತೆಗೆ ಇಳಿಸಲಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಎನ್​ಡಬ್ಲೂಕೆಆರ್​ಟಿಸಿ ಮಾಹಿತಿ ನೀಡಿದೆ.

ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ತೆರಳುವ ಹಾಗೂ ಹಬ್ಬ ಮುಗಿಸಿ ಹಿಂದಿರುವಗ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಬಸ್​ ವ್ಯವಸ್ಥೆ ಮಾಡಲಾಗಿದೆ ಎಂದು ಎನ್​ಡಬ್ಲುಕೆಆರ್​ಟಿಸಿ ತಿಳಿಸಿದೆ. ಮಂಗಳವಾರ (ಅ.29) ರಿಂದ ಶುಕ್ರವಾರ (ನ.​1) ಹಾಗೂ ರವಿವಾರ (ನ.03) ಮತ್ತು ಸೋಮವಾರ (ನ.04) ರಂದು ಈ ನಗರಗಳಿಂದ ಹೆಚ್ಚುವರಿ ಬಸ್​ಗಳು ಸಂಚರಿಸಲಿವೆ​.

ಇದನ್ನೂ ಓದಿ: ದೀಪಾವಳಿ ಹಬ್ಬ: ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿ ಮಧ್ಯೆ ವಿಶೇಷ ರೈಲು

ಬೆಂಗಳೂರು, ಮಂಗಳೂರು, ಪುಣೆ, ಗೋವಾ, ಹೈದರಾಬಾದ್​​ ನಗರಗಳಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ ಸೇರಿದಂತೆ ಇನ್ನೀತರ ಸ್ಥಳಗಳಿಗೆ ಹೆಚ್ಚುವರಿ ಬಸ್​ಗಳು ಕಾರ್ಯ ನಿರ್ವಹಿಸಲಿವೆ​. ಪ್ರಯಾಣಿಕರು ಇದರ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಟ್ವಿಟರ್​ ಪೋಸ್ಟ್​​

ಟಿಕೆಟ್ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ

ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್​ಸೈಟ್ ಮುಖಾಂತರ ಮಾಡಬಹುದಾಗಿದ್ದು, ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್​ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ನಿಗಮ ತಿಳಿಸಿದೆ.

ಎನ್​ಡಬ್ಲೂಕೆಆರ್​ಟಿಸಿ ಈ ಹಿಂದೆ ದಸರಾ ಹಬ್ಬದ ಸಂದರ್ಭದಲ್ಲಿಯೂ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್​ಗಳನ್ನು ಓಡಿಸಿತ್ತು. ಇದರಿಂದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಿತ್ತು. ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸುವಲ್ಲಿ ಎನ್​ಡಬ್ಲೂಕೆಆರ್​ಟಿಸಿ ಯಶಸ್ವಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Mon, 28 October 24

Follow Us
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ