AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬ: NWKRTCಯಿಂದ ವಿಶೇಷ ಬಸ್, ಯಾವ ಯಾವ ನಗರಗಳಿಗೆ ಸಂಪರ್ಕ? ಇಲ್ಲಿದೆ ಮಾಹಿತಿ

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ ಬಸ್​ಗಳನ್ನು ರಸ್ತೆಗೆ ಇಳಿಸಲಿದೆ. ಯಾವ ಯಾವ ನಗರಗಳಿಂದ ವಿಶೇಷ ಬಸ್​ಗಳನ್ನು ಬಿಡಲಾಗಿದೆ? ಇಲ್ಲಿದೆ ಮಾಹಿತಿ.

ದೀಪಾವಳಿ ಹಬ್ಬ: NWKRTCಯಿಂದ ವಿಶೇಷ ಬಸ್, ಯಾವ ಯಾವ ನಗರಗಳಿಗೆ ಸಂಪರ್ಕ? ಇಲ್ಲಿದೆ ಮಾಹಿತಿ
ಎನ್​ಡಬ್ಲೂಕೆಆರ್​ಟಿಸಿ ಬಸ್​​
ವಿವೇಕ ಬಿರಾದಾರ
|

Updated on:Oct 28, 2024 | 7:42 AM

Share

ಬೆಂಗಳೂರು, ಅಕ್ಟೋಬರ್​ 28: ದೀಪಾವಳಿ ಹಬ್ಬ (Deepavali Festival) ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುತ್ತಾರೆ. ಮತ್ತು ಹಬ್ಬ ಮುಗಿಸಿಕೊಂಡು ವಾಪಸ್​ ಆಗುತ್ತಾರೆ. ಇದರಿಂದ ಸರ್ಕಾರಿ ಬಸ್​ಗಳಲ್ಲಿ (Government Buses) ಪ್ರಯಾಣಿಕರ ಸಂಖ್ಯೆ ಹೆಚ್ಚಾಳವಾಗಲಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹೆಚ್ಚುವರಿ ಬಸ್​ಗಳನ್ನು ರಸ್ತೆಗೆ ಇಳಿಸಲಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಎನ್​ಡಬ್ಲೂಕೆಆರ್​ಟಿಸಿ ಮಾಹಿತಿ ನೀಡಿದೆ.

ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ತೆರಳುವ ಹಾಗೂ ಹಬ್ಬ ಮುಗಿಸಿ ಹಿಂದಿರುವಗ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಬಸ್​ ವ್ಯವಸ್ಥೆ ಮಾಡಲಾಗಿದೆ ಎಂದು ಎನ್​ಡಬ್ಲುಕೆಆರ್​ಟಿಸಿ ತಿಳಿಸಿದೆ. ಮಂಗಳವಾರ (ಅ.29) ರಿಂದ ಶುಕ್ರವಾರ (ನ.​1) ಹಾಗೂ ರವಿವಾರ (ನ.03) ಮತ್ತು ಸೋಮವಾರ (ನ.04) ರಂದು ಈ ನಗರಗಳಿಂದ ಹೆಚ್ಚುವರಿ ಬಸ್​ಗಳು ಸಂಚರಿಸಲಿವೆ​.

ಇದನ್ನೂ ಓದಿ: ದೀಪಾವಳಿ ಹಬ್ಬ: ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿ ಮಧ್ಯೆ ವಿಶೇಷ ರೈಲು

ಬೆಂಗಳೂರು, ಮಂಗಳೂರು, ಪುಣೆ, ಗೋವಾ, ಹೈದರಾಬಾದ್​​ ನಗರಗಳಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ ಸೇರಿದಂತೆ ಇನ್ನೀತರ ಸ್ಥಳಗಳಿಗೆ ಹೆಚ್ಚುವರಿ ಬಸ್​ಗಳು ಕಾರ್ಯ ನಿರ್ವಹಿಸಲಿವೆ​. ಪ್ರಯಾಣಿಕರು ಇದರ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಟ್ವಿಟರ್​ ಪೋಸ್ಟ್​​

ಟಿಕೆಟ್ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ

ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್​ಸೈಟ್ ಮುಖಾಂತರ ಮಾಡಬಹುದಾಗಿದ್ದು, ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್​ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ನಿಗಮ ತಿಳಿಸಿದೆ.

ಎನ್​ಡಬ್ಲೂಕೆಆರ್​ಟಿಸಿ ಈ ಹಿಂದೆ ದಸರಾ ಹಬ್ಬದ ಸಂದರ್ಭದಲ್ಲಿಯೂ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್​ಗಳನ್ನು ಓಡಿಸಿತ್ತು. ಇದರಿಂದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಿತ್ತು. ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸುವಲ್ಲಿ ಎನ್​ಡಬ್ಲೂಕೆಆರ್​ಟಿಸಿ ಯಶಸ್ವಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Mon, 28 October 24

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್