AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲ್ಯಾಪ್‌ಟಾಪ್‌, ಟ್ಯಾಬ್‌ ತಯಾರಿಸಲು ರಾಜ್ಯದಲ್ಲಿ ಹೂಡಿಕೆ ಪ್ರಸ್ತಾವನೆ ಇಟ್ಟ ಡಿಕ್ಸನ್‌ ಕಂಪನಿ

ಕಂಪನಿಯು 10ರಿಂದ 15 ಎಕರೆಯಷ್ಟು ಭೂಮಿಗೆ ಬೇಡಿಕೆ ಇಟ್ಟಿದೆ. ಇಎಸ್‌ಡಿಎಂ ನೀತಿಯ ಪ್ರಕಾರ ಬೆಂಗಳೂರಿನ ಹೊರಭಾಗದಲ್ಲಿ ಕಂಪನಿ ತನ್ನ ಘಟಕವನ್ನು ಸ್ಥಾಪನೆ ಮಾಡಿದರೆ ಸರಕಾರದಿಂದ ಸಿಗಲಿರುವ ಎಲ್ಲ ಸಬ್ಸಿಡಿ, ಪ್ರಯೋಜನಗಳು ದೊರೆಯಲಿವೆ.

ಲ್ಯಾಪ್‌ಟಾಪ್‌, ಟ್ಯಾಬ್‌ ತಯಾರಿಸಲು ರಾಜ್ಯದಲ್ಲಿ ಹೂಡಿಕೆ ಪ್ರಸ್ತಾವನೆ ಇಟ್ಟ ಡಿಕ್ಸನ್‌ ಕಂಪನಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 25, 2021 | 9:36 PM

Share

ಬೆಂಗಳೂರು: ಲ್ಯಾಪ್‌ಟಾಪ್‌, ಟ್ಯಾಬ್‌ ಇತ್ಯಾದಿ ಎಲೆಕ್ಟ್ರಾನಿಕ್‌ ಉತ್ಪನ್ನಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ನೊಯ್ಡಾ ಮೂಲದ ಡಿಕ್ಸನ್‌ ಕಂಪನಿ, ರಾಜ್ಯದಲ್ಲಿ ತಯಾರಿಕಾ ಘಟಕ ಆರಂಭ ಮಾಡಲು ಮುಂದೆ ಬಂದಿದೆ. ಈ ಬಗ್ಗೆ ಐಟಿ- ಬಿಟಿ, ಎಲೆಕ್ಟ್ರಾನಿಕ್ ಖಾತೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಕಂಪನಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು.

ಬೆಂಗಳೂರಿನಲ್ಲಿಂದು ‌ಅಶ್ವತ್ಥನಾರಾಯಣ ಅವರ ಮುಂದೆ ಪ್ರಸ್ತಾವನೆ ಇಟ್ಟ ಡಿಕ್ಸನ್‌ ಕಂಪನಿಯ ಕಾರ್ಯಕಾರಿ ಅಧ್ಯಕ್ಷ ಸುನಿಲ್ ವಚಾನಿ, ಅಗತ್ಯವಾದ ಜಾಗ ಹಾಗೂ ಇತರೆ ಅಂಶಗಳ ಬಗ್ಗೆ ಬೇಡಿಕೆ ಇಟ್ಟಿದ್ದಾರೆ. ಕಂಪನಿಯ ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅಶ್ವತ್ಥನಾರಾಯಣ ಅವರು ಜಮೀನು ಕೊಡುವ ಭರವಸೆ ನೀಡಿದ್ದಾರೆ.

ಎಲೆಕ್ಟ್ರಾನಿಕ್ಸ್‌ ವ್ಯವಸ್ಥೆ ಮತ್ತು ಅಭಿವೃದ್ಧಿ ನಿರ್ವಹಣಾ (ಇಎಸ್‌ಡಿಎಂ) ಇಲಾಖೆಯ ವ್ಯಾಪ್ತಿಯಲ್ಲಿ ಈ ಯೋಜನೆ ಕಾರ್ಯಗತವಾಗಲಿದೆ. ಕೋಲಾರ ಜಿಲ್ಲೆಯ ಮಾಸ್ತೇನಹಳ್ಳಿ, ಮಿಂಡೇನಹಳ್ಳಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹರಳೂರು, ರಾಮನಗರ ಜಿಲ್ಲೆಯ ಹಾರೋಹಳ್ಳಿ ಈ ಜಾಗಗಳ ಪೈಕಿ ಯಾವುದಾದರೂ ಒಂದು ಸ್ಥಳದಲ್ಲಿ ತಯಾರಿಕಾ ಘಟಕವನ್ನು ಡಿಕ್ಸನ್‌ ಕಂಪನಿ ಸ್ಥಾಪನೆ ಮಾಡಲು ಜಮೀನು ನೀಡಲಾಗುವುದು ಎಂದು ‌ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಕಂಪನಿಯು 10ರಿಂದ 15 ಎಕರೆಯಷ್ಟು ಭೂಮಿಗೆ ಬೇಡಿಕೆ ಇಟ್ಟಿದೆ. ಇಎಸ್‌ಡಿಎಂ ನೀತಿಯ ಪ್ರಕಾರ ಬೆಂಗಳೂರಿನ ಹೊರಭಾಗದಲ್ಲಿ ಕಂಪನಿ ತನ್ನ ಘಟಕವನ್ನು ಸ್ಥಾಪನೆ ಮಾಡಿದರೆ ಸರ್ಕಾರದಿಂದ ಸಿಗಲಿರುವ ಎಲ್ಲ ಸಬ್ಸಿಡಿ, ಪ್ರಯೋಜನಗಳು ದೊರೆಯಲಿವೆ. ಸ್ಥಳೀಯರಿಗೆ ಉದ್ಯೋಗ ನೀಡುವ ಬಗ್ಗೆಯೂ ಕಂಪನಿಗೆ ಮನವರಿಕೆ ಮಾಡಲಾಗಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಸುಮಾರು 30 ಸಾವಿರ ಕೋಟಿಗೂ ಹೆಚ್ಚು ಮಾರುಕಟ್ಟೆ ಮೌಲ್ಯವನ್ನು ಹೊಂದಿರುವ ಡಿಕ್ಸನ್‌ ಕಂಪನಿ, ಲ್ಯಾಪ್‌ಟಾಪ್‌, ಟ್ಯಾಬ್‌, ಡೆಸ್ಟಾಪ್‌, ಸಿಎಫ್‌ಎಲ್ ಬಲ್ಬ್‌ಗಳು, ಎಲ್‌ಇಡಿ ಟೀವಿಗಳು, ಸಿಸಿಟಿವಿ, ವಾಷಿಂಗ್‌ ಮಷಿನ್‌ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ತಯಾರಿಕೆಯಲ್ಲಿ ಹೆಸರುವಾಸಿಯಾಗಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಅತುಲ್‌ ಲಾಲ್‌, ಐಟಿ- ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಡಿಸಿಎಂ ಕಾರ್ಯದರ್ಶಿ ಪಿ.ಪ್ರದೀಪ, ಐಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ ಸರಕಾರದ ಹಿರಿಯ ಅಧಿಕಾರಿಗಳು ಇದ್ದರು.

ಇದನ್ನೂ ಓದಿ: Taxation On Gold Investments: ಚಿನ್ನದ ಮೇಲಿನ ಹೂಡಿಕೆಗೆ ತೆರಿಗೆ ಲೆಕ್ಕಾಚಾರ ಹೇಗೆ?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು