AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DJ Halli KG Halli Riots | ‘NIA ಚಾರ್ಜ್​ಶೀಟ್ ಪೂರ್ವನಿಯೋಜಿತ.. SDPIನ ಗುರಿಯಾಗಿಸಿಕೊಂಡು ಚಾರ್ಜ್​ಶೀಟ್​ ಸಲ್ಲಿಸಲಾಗಿದೆ’

ಕೇಂದ್ರದ ಒತ್ತಡಕ್ಕೆ ಮಣಿದು NIA ಚಾರ್ಜ್​ಶೀಟ್​​ ಸಲ್ಲಿಸಿದೆ. ​NIA ಚಾರ್ಜ್​​ಶೀಟ್​ ಪೂರ್ವ ನಿಯೋಜಿತವಾದದ್ದು. SDPIನ ಗುರಿಯಾಗಿಸಿಕೊಂಡು ಚಾರ್ಜ್​ಶೀಟ್​ ಸಲ್ಲಿಸಲಾಗಿದೆ ಎಂದು ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ಕೇಸ್​ಗೆ ಸಂಬಂಧಿಸಿದಂತೆ NIA ಚಾರ್ಜ್​ಶೀಟ್​ ಸಲ್ಲಿಕೆ ಕುರಿತು SDPI ಸುದ್ದಿಗೋಷ್ಠಿ ನಡೆಸಿದೆ.

DJ Halli KG Halli Riots | ‘NIA ಚಾರ್ಜ್​ಶೀಟ್ ಪೂರ್ವನಿಯೋಜಿತ.. SDPIನ ಗುರಿಯಾಗಿಸಿಕೊಂಡು ಚಾರ್ಜ್​ಶೀಟ್​ ಸಲ್ಲಿಸಲಾಗಿದೆ’
KUSHAL V
|

Updated on: Feb 26, 2021 | 6:29 PM

Share

ಬೆಂಗಳೂರು: ಕೇಂದ್ರದ ಒತ್ತಡಕ್ಕೆ ಮಣಿದು NIA ಚಾರ್ಜ್​ಶೀಟ್​​ ಸಲ್ಲಿಸಿದೆ. ​NIA ಚಾರ್ಜ್​​ಶೀಟ್​ ಪೂರ್ವ ನಿಯೋಜಿತವಾದದ್ದು. SDPIನ ಗುರಿಯಾಗಿಸಿಕೊಂಡು ಚಾರ್ಜ್​ಶೀಟ್​ ಸಲ್ಲಿಸಲಾಗಿದೆ ಎಂದು ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ಕೇಸ್​ಗೆ ಸಂಬಂಧಿಸಿದಂತೆ NIA ಚಾರ್ಜ್​ಶೀಟ್​ ಸಲ್ಲಿಕೆ ಕುರಿತು SDPI ಸುದ್ದಿಗೋಷ್ಠಿ ನಡೆಸಿದೆ. ಹಲಸೂರು ಗೇಟ್ ಬಳಿಯಿರುವ ಸಂಘದ ಮುಖ್ಯ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ SDPIನ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡಲಿಪೇಟೆ, ರಾಜ್ಯ ಮಾಧ್ಯಮ ಉಸ್ತುವಾರಿ ಅಕ್ರಂ ಹುಸೇನ್, ಬೆಂಗಳೂರು ಜಿಲ್ಲಾಧ್ಯಕ್ಷ ಫಯಾಜ್ ಅಹಮದ್ ಹಾಗೂ ಉಪಾಧ್ಯಕ್ಷ ಗಂಗಪ್ಪ ಪಾಲ್ಗೊಂಡರು. ನಿಷ್ಪಕ್ಷ ತನಿಖಾಧಿಕಾರಿಗಳ ಮೇಲೆ ಸರ್ಕಾರದಿಂದ ಒತ್ತಡ ಹೇರಲಾಗಿದೆ. ನಿರ್ದಿಷ್ಟ ಪಕ್ಷ ಮತ್ತು ಸಮುದಾಯದ ತೇಜೋವಧೆ ಮಾಡುವ ರೀತಿಯಲ್ಲಿ ಚಾರ್ಜ್​​ಶೀಟ್​​ ವರದಿ ಸಲ್ಲಿಕೆಯಾಗಿದೆ ಎಂದು ಸಂಘದ ನಾಯಕರು ಆರೋಪಿಸಿದರು.

ಈ ವೇಳೆ, ಮಾತನಾಡಿದ ಸಂಘದ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡಲಿಪೇಟೆ ಇದು ಪೂರ್ವನಿಯೋಜಿತ ಚಾರ್ಜ್​ಶೀಟ್ ಆಗಿದೆ. ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಮಣಿದು ಚಾರ್ಜ್​ಶೀಟ್ ಸಲ್ಲಿಕೆಯಾಗಿದೆ. ಕಳೆದ 6 ತಿಂಗಳಲ್ಲಿ ಎರಡು ಸಾವಿರ ಜನರ ವಿಚಾರಣೆ ಮಾಡಲಾಗಿದೆ. ಸಂಪತ್ ರಾಜ್ ಹಾಗೂ ಇನ್ನಿತರರು ಹೊಣೆಗಾರರು. ರಾಜಕೀಯ ಪಿತೂರಿ ಎಂಬುವುದು ತನಿಖೆ ನಂತರ CCB ಮಾಹಿತಿ ನೀಡಿತ್ತು. ಸ್ಥಳೀಯ ಶಾಸಕ ಅಖಂಡ ಶ್ರೀನಿವಾಸ್ ಸಹ ಸಂಪತ್ ರಾಜ್ ವಿರುದ್ಧ ಆರೋಪ ಮಾಡಿದ್ದಾರೆ. ಆದರೆ NIA, CCB ತನಿಖೆಯನ್ನು ಮರೆಮಾಚಿ ಒಂದು ಪಕ್ಷವನ್ನು ಟಾರ್ಗೆಟ್ ಮಾಡಿದೆ ಎಂದು ಹೇಳಿದರು.

‘ನವೀನ್ ಮೊದಲು ಪೊಸ್ಟ್ ಮಾಡಿದ್ದಾನೆ.. ಇದು ಎಲ್ಲರಿಗೂ ಗೊತ್ತಿದೆ’ ನವೀನ್ ಮೊದಲು ಪೊಸ್ಟ್ ಮಾಡಿದ್ದಾನೆ. ಇದು ಎಲ್ಲರಿಗೂ ಗೊತ್ತಿದೆ. ಆದರೆ ದುರ್ಬಲ ಕೇಸ್ ಹಾಕುವ ಮುಖಾಂತರ ಅವರನ್ನು ಹೊರಗೆ ಬಿಡಲಾಗಿದೆ. ಫೈರೋಜ್ ಪಾಷಾ ಎಂಬಾತನನ್ನು ಮೊದಲ ಆರೋಪಿ ಮಾಡಲಾಗಿದೆ. ಮೊದಲು ಆತ ಆಮ್ ಆದ್ಮಿ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿದರು. ನಂತರ ಆತ SDPI ಕಾರ್ಯಕರ್ತ ಎಂದು ಹೇಳಿದರು. ಆದರೆ ಫೈರೋಜ್ ಪಾಷಾ SDPI ಕಾರ್ಯಕರ್ತ ಅಲ್ಲ ಎಂದು ಅಪ್ಸರ್ ಕೊಡಲಿಪೇಟೆ ಹೇಳಿದರು.

ನವೀನ್ ಹಾಗೂ ಫೈರೋಜ್ ನಡುವೆ ಪೋಸ್ಟ್ ಸಂಬಂಧಿಸಿದಂತೆ ಕಚ್ಚಾಟ ನಡೆದಿದೆ. ಇದೇ ಕಾರಣಕ್ಕೆ ಗಲಭೆ ನಡೆದಿದೆ ಎಂದು ಬಿಂಬಿಸಲಾಗಿದೆ. ತನಿಖೆಗೆ ಬರುವ ಮೊದಲೇ SDPIನ NIA ಟಾರ್ಗೆಟ್ ಮಾಡಿದೆ. ಕೇಸ್​ನಲ್ಲಿ SDPIನ ಸಿಲುಕಿಸುವ ಯತ್ನ ಮಾಡಿದೆ. ಜನವಿರೋಧಿ ನೀತಿ ಹಾಗೂ ಕಾನೂನುಗಳ ವಿರುದ್ಧ ಹೋರಾಟ ಮಾಡುವವರನ್ನ ಟಾರ್ಗೆಟ್ ಮಾಡಲಾಗುತ್ತಿದೆ. ಇದರ ವಿರುದ್ಧ ನ್ಯಾಯಯುತ ಹಾಗೂ ಸಂವಿಧಾನಾತ್ಮಕ ಹೋರಟ ಮಾಡಲಿದ್ದೇವೆ. ಆರೋಪಕ್ಕೆ ತಕ್ಕ ಸಾಕ್ಷಿಗಳನ್ನು ಕೊರ್ಟ್​ನಲ್ಲಿ ತನಿಖಾ ತಂಡ ಸಲ್ಲಿಸಬೇಕು ಎಂದು ಅಪ್ಸರ್ ಕೊಡಲಿಪೇಟೆ ಹೇಳಿದರು.

ಇದನ್ನೂ ಓದಿ: ಪ್ರೊ.ಕೆ.ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ಮೀರಾ ರಾಘವೇಂದ್ರ ವಕೀಲಿಕೆಯ ಸನ್ನದು ಅಮಾನತುಪಡಿಸಲು ಶಿಫಾರಸು

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ