AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಪ್ಲಾನ್ ಮಾಡಿದ್ದ ಡಿಕೆ ಸಹೋದರರು: ಸಿಪಿ ಯೋಗೇಶ್ವರ್ ಸ್ಫೋಟಕ ಹೇಳಿಕೆ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್​ ಹೇಳಿದ್ದರು. ಆದರೆ​ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಡಿಕೆ ಬ್ರದರ್ಸ್ ಸಿದ್ಧತೆ ನಡೆಸಿದ್ರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. 

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Jun 14, 2024 | 3:21 PM

Share

ರಾಮನಗರ, ಜೂನ್​ 14: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್​ ಹೇಳಿದ್ದರು. ಆದರೆ​ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwar) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್​​ ಆಗಿರುವ ನಟ ದರ್ಶನ್ (Darshan)​ ಕಾಂಗ್ರೆಸ್​ನಿಂದ​ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಬಯಸಿದ್ರಾ? ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಡಿಕೆ ಬ್ರದರ್ಸ್ ಸಿದ್ಧತೆ ನಡೆಸಿದ್ರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ

ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್​, ಕಾಂಗ್ರೆಸ್​ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಈ ಹಿಂದೆ ಡಿ.ಕೆ.ಸುರೇಶ್ ಹೇಳಿದ್ದರು. ಆದರೆ​ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ. ನಟರೊಬ್ಬರು ಕಾಂಗ್ರೆಸ್ ಪರವಾಗಿ ಹೆಚ್ಚು ಪ್ರಚಾರ ಮಾಡಿದ್ದರು. ಅವರನ್ನು ಕಾಂಗ್ರೆಸ್​​​ಗೆ ಸೇರಿಸಿಕೊಂಡು ಚುನಾವಣೆಗೆ ನಿಲ್ಲಿಸಲು ಡಿಕೆ ಬ್ರದರ್ಸ್ ಪ್ಲಾನ್​​ ಮಾಡಿದ್ದ. ಆ ವ್ಯಕ್ತಿ ಯಾರು ಅಂತಾ ನೀವೇ ಊಹಿಸಿಕೊಳ್ಳಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ದರ್ಶನ್ ಕಾಂಗ್ರೆಸ್ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ: ಶೋಭಾ ಕರಂದ್ಲಾಜೆ ಪ್ರಶ್ನೆ

ದರ್ಶನ್ ಮೇಲೆ ಕೊಲೆ ಆರೋಪ ವಿಚಾರವಾಗಿ ಮಾತನಾಡಿದ ಅವರು, ಇದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇದೊಂದು ವಿಚಿತ್ರ ಕೇಸ್ ಅನ್ನಿಸುತ್ತಿದೆ. ರಾಜಕೀಯಕ್ಕೆ ಬರಬೇಕು ಅಂತ ಆಸೆ ಇತ್ತೇನೋ ಆದರೆ ಈ ರೀತಿ ಅನಾಹುತ ಆಗಿ ಹೋಗಿದೆ. ನೋಡೊಣ ಎಂದು ಹೇಳಿದ್ದಾರೆ.

ಚನ್ನಪಟ್ಟಣ ಬೈ ಎಲೆಕ್ಷನ್ ವಿಚಾರವಾಗಿ ಮಾತನಾಡಿದ್ದು, ರಾಮನಗರ ನಾಲ್ಕು ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ ಬಿಜೆಪಿಗೆ ಅಸ್ತಿತ್ವ ಇದೆ. ಇಲ್ಲಿ ಬಿಜೆಪಿಗೆ ಹೆಚ್ಚು ಬಲ ಇದೆ. ಕನಕಪುರ, ರಾಮನಗರ, ಮಾಗಡಿಯಲ್ಲಿ ಜೆಡಿಎಸ್​ಗೆ ಶಕ್ತಿ ಇದೆ. ಆದರೆ ಪಕ್ಷದ ವರಿಷ್ಠರು ಏನು ತೀರ್ಮಾನ ಮಾಡ್ತಾರೆ ನೋಡೊಣ. ವಸ್ತುಸ್ಥಿತಿ ಏನಿದೆ ಅನ್ನೋದನ್ನ ನಾನು ಹೇಳಿದ್ದೇನೆ. ಎರಡೂ ಪಕ್ಷಗಳು ಸೇರಿ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್​: ತಾನಾಗಿಯೇ ಬಂದು ಶರಣಾದ ಎ8 ಆರೋಪಿ, ಆತನ ಪಾತ್ರವೇನು?

ಎನ್​ಡಿಎ ಅಭ್ಯರ್ಥಿ ಯಾರೇ ಆದ್ರೂ ನಾವು ಕೆಲಸ ಮಾಡ್ತೇವೆ. ಲೋಕಸಭಾ ಚುನಾವಣೆಯಲ್ಲಿ ಜೊತೆಯಾಗಿ ಕೆಲಸ ಮಾಡಿ ಸಕ್ಸಸ್ ಸಿಕ್ಕಿದೆ. ಹಾಗಾಗಿ ಯಾವುದೇ ಗೊಂದಲ ಇಲ್ಲದೇ ಈ ಚುನಾವಣೆಯಲ್ಲೂ ಒಟ್ಟಾಗಿ ಕೆಲಸ ಮಾಡ್ತೇವೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್​ ಸದ್ಯ ಕಂಬಿ ಎಣಿಸುತ್ತಿದ್ದಾರೆ. ತನಿಖೆ ಚುರುಕುಗೊಳಿಸಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದಾರೆ. ಬಂಧಿತ ಆರೋಪಿಗಳಿಗೆ ಡ್ರಿಲ್​ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:52 pm, Fri, 14 June 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್