AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಪ್ಲಾನ್ ಮಾಡಿದ್ದ ಡಿಕೆ ಸಹೋದರರು: ಸಿಪಿ ಯೋಗೇಶ್ವರ್ ಸ್ಫೋಟಕ ಹೇಳಿಕೆ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್​ ಹೇಳಿದ್ದರು. ಆದರೆ​ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಡಿಕೆ ಬ್ರದರ್ಸ್ ಸಿದ್ಧತೆ ನಡೆಸಿದ್ರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. 

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Jun 14, 2024 | 3:21 PM

Share

ರಾಮನಗರ, ಜೂನ್​ 14: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್​ ಹೇಳಿದ್ದರು. ಆದರೆ​ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwar) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್​​ ಆಗಿರುವ ನಟ ದರ್ಶನ್ (Darshan)​ ಕಾಂಗ್ರೆಸ್​ನಿಂದ​ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಬಯಸಿದ್ರಾ? ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಡಿಕೆ ಬ್ರದರ್ಸ್ ಸಿದ್ಧತೆ ನಡೆಸಿದ್ರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ

ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್​, ಕಾಂಗ್ರೆಸ್​ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಈ ಹಿಂದೆ ಡಿ.ಕೆ.ಸುರೇಶ್ ಹೇಳಿದ್ದರು. ಆದರೆ​ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ. ನಟರೊಬ್ಬರು ಕಾಂಗ್ರೆಸ್ ಪರವಾಗಿ ಹೆಚ್ಚು ಪ್ರಚಾರ ಮಾಡಿದ್ದರು. ಅವರನ್ನು ಕಾಂಗ್ರೆಸ್​​​ಗೆ ಸೇರಿಸಿಕೊಂಡು ಚುನಾವಣೆಗೆ ನಿಲ್ಲಿಸಲು ಡಿಕೆ ಬ್ರದರ್ಸ್ ಪ್ಲಾನ್​​ ಮಾಡಿದ್ದ. ಆ ವ್ಯಕ್ತಿ ಯಾರು ಅಂತಾ ನೀವೇ ಊಹಿಸಿಕೊಳ್ಳಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ದರ್ಶನ್ ಕಾಂಗ್ರೆಸ್ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ: ಶೋಭಾ ಕರಂದ್ಲಾಜೆ ಪ್ರಶ್ನೆ

ದರ್ಶನ್ ಮೇಲೆ ಕೊಲೆ ಆರೋಪ ವಿಚಾರವಾಗಿ ಮಾತನಾಡಿದ ಅವರು, ಇದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇದೊಂದು ವಿಚಿತ್ರ ಕೇಸ್ ಅನ್ನಿಸುತ್ತಿದೆ. ರಾಜಕೀಯಕ್ಕೆ ಬರಬೇಕು ಅಂತ ಆಸೆ ಇತ್ತೇನೋ ಆದರೆ ಈ ರೀತಿ ಅನಾಹುತ ಆಗಿ ಹೋಗಿದೆ. ನೋಡೊಣ ಎಂದು ಹೇಳಿದ್ದಾರೆ.

ಚನ್ನಪಟ್ಟಣ ಬೈ ಎಲೆಕ್ಷನ್ ವಿಚಾರವಾಗಿ ಮಾತನಾಡಿದ್ದು, ರಾಮನಗರ ನಾಲ್ಕು ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ ಬಿಜೆಪಿಗೆ ಅಸ್ತಿತ್ವ ಇದೆ. ಇಲ್ಲಿ ಬಿಜೆಪಿಗೆ ಹೆಚ್ಚು ಬಲ ಇದೆ. ಕನಕಪುರ, ರಾಮನಗರ, ಮಾಗಡಿಯಲ್ಲಿ ಜೆಡಿಎಸ್​ಗೆ ಶಕ್ತಿ ಇದೆ. ಆದರೆ ಪಕ್ಷದ ವರಿಷ್ಠರು ಏನು ತೀರ್ಮಾನ ಮಾಡ್ತಾರೆ ನೋಡೊಣ. ವಸ್ತುಸ್ಥಿತಿ ಏನಿದೆ ಅನ್ನೋದನ್ನ ನಾನು ಹೇಳಿದ್ದೇನೆ. ಎರಡೂ ಪಕ್ಷಗಳು ಸೇರಿ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್​: ತಾನಾಗಿಯೇ ಬಂದು ಶರಣಾದ ಎ8 ಆರೋಪಿ, ಆತನ ಪಾತ್ರವೇನು?

ಎನ್​ಡಿಎ ಅಭ್ಯರ್ಥಿ ಯಾರೇ ಆದ್ರೂ ನಾವು ಕೆಲಸ ಮಾಡ್ತೇವೆ. ಲೋಕಸಭಾ ಚುನಾವಣೆಯಲ್ಲಿ ಜೊತೆಯಾಗಿ ಕೆಲಸ ಮಾಡಿ ಸಕ್ಸಸ್ ಸಿಕ್ಕಿದೆ. ಹಾಗಾಗಿ ಯಾವುದೇ ಗೊಂದಲ ಇಲ್ಲದೇ ಈ ಚುನಾವಣೆಯಲ್ಲೂ ಒಟ್ಟಾಗಿ ಕೆಲಸ ಮಾಡ್ತೇವೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್​ ಸದ್ಯ ಕಂಬಿ ಎಣಿಸುತ್ತಿದ್ದಾರೆ. ತನಿಖೆ ಚುರುಕುಗೊಳಿಸಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದಾರೆ. ಬಂಧಿತ ಆರೋಪಿಗಳಿಗೆ ಡ್ರಿಲ್​ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:52 pm, Fri, 14 June 24

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ