AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಕಡಿಮೆ ಮಾಡಿದ್ದಾರೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪ

ಬೈ ಎಲೆಕ್ಷನ್ ಕರ್ತವ್ಯಕ್ಕೆ ಹೋಗಿದ್ದ ಶಿಕ್ಷಕರ ಸಾವು ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಡಿಕೆಶಿ ಇದಕ್ಕೆ ನಮ್ಮ ಸ್ವಯಂಕೃತ ಅಪರಾಧವೇ ಕಾರಣ. ಆಡಳಿತ ನಡೆಸುವವರೇ ಇದಕ್ಕೆ ಹೊಣೆ. ಉಪಚುನಾವಣೆ ವೇಳೆ ಎಲ್ಲರೂ ಜಾಗೃತಿ ವಹಿಸಬೇಕಾಗಿತ್ತು. ಯಾವ ಪಕ್ಷದವರೂ ಸರಿಯಾದ ಅಂತರವನ್ನು ಕಾಪಾಡಲಿಲ್ಲ.

ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಕಡಿಮೆ ಮಾಡಿದ್ದಾರೆ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪ
ಡಿ.ಕೆ. ಶಿವಕುಮಾರ್
Follow us
sandhya thejappa
|

Updated on: May 15, 2021 | 3:31 PM

ಬೆಂಗಳೂರು: ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಕಡಿಮೆ ಮಾಡಿದ್ದಾರೆ ಎಂದು ಆರೋಪಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೊವಿಡ್ ಟೆಸ್ಟ್ ಕಡಿಮೆ ಮಾಡಲು ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ. ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಕೂಡ ಇದನ್ನೇ ಹೇಳಿದ್ದಾರೆ. ಜನಗಳಿಗೆ ನಾವು ಅಷ್ಟೋ ಇಷ್ಟೋ ಮಾಡುತ್ತಾ ಇದ್ದೆವು. ಈಗ ನಿಮ್ಮಿಂದ ಆಗೊಲ್ಲ ಎಂದರೆ ಬಿಟ್ಟು ಹೋಗಲಿ. ಲಾಕ್​ಡೌನ್​ ವಿಚಾರದಲ್ಲಿ ನಾವು ಮೂಗು ತುರಿಸುವುದಿಲ್ಲ. ಲಾಕ್​ಡೌನ್​ ನಿರ್ಧಾರವನ್ನು ರಾಜ್ಯ ಸರ್ಕಾರಕ್ಕೆ ಬಿಡುತ್ತೇನೆ. ಹಾಗಂತ ಮಾಡಿದ ತಪ್ಪು ತಿದ್ದಿಕೊಳ್ಳದಿದ್ದರೆ ಸುಮ್ಮನೆ ಇರಲ್ಲ ಎಂದು ಹೇಳಿದ್ದಾರೆ.

ಬೈ ಎಲೆಕ್ಷನ್ ಕರ್ತವ್ಯಕ್ಕೆ ಹೋಗಿದ್ದ ಶಿಕ್ಷಕರ ಸಾವು ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಡಿಕೆಶಿ ಇದಕ್ಕೆ ನಮ್ಮ ಸ್ವಯಂಕೃತ ಅಪರಾಧವೇ ಕಾರಣ. ಆಡಳಿತ ನಡೆಸುವವರೇ ಇದಕ್ಕೆ ಹೊಣೆ. ಉಪಚುನಾವಣೆ ವೇಳೆ ಎಲ್ಲರೂ ಜಾಗೃತಿ ವಹಿಸಬೇಕಾಗಿತ್ತು. ಯಾವ ಪಕ್ಷದವರೂ ಸರಿಯಾದ ಅಂತರವನ್ನು ಕಾಪಾಡಲಿಲ್ಲ. ನಾನು ಪ್ರಯತ್ನಿಸಿದೆ ಆದರೆ ಜನರ ಜಂಜಾಟ ಹೆಚ್ಚಾಗಿತ್ತು. ಸರ್ಕಾರ ಚುನಾವಣೆ ಮಾಡುವುದು ಬೇಡವೆಂದು ಹೇಳಿದ್ದರೆ, ಚುನಾವಣಾ ಆಯೋಗ ಏನೂ ಮಾಡುವುದಕ್ಕೆ ಆಗುತ್ತಿರಲಿಲ್ಲ. ನಾವು ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್ ಇಂದು ಡಿ.ಕೆ.ಶಿವಕುಮಾರ್ ಅವರ 60 ನೇ ಹುಟ್ಟುಹಬ್ಬ ಹಿನ್ನೆಲೆ ಶಿವಮೊಗ್ಗ ನಗರದ ಶ್ರೀ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ನೇತೃತ್ವದಲ್ಲಿ ಪೂಜೆ ನಡೆಯಿತು. ಡಿಕೆಶಿ ಬ್ರಿಗೇಡ್​ನ ಸದಸ್ಯರು ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದರು. ಜೊತೆಗೆ ಚಿಕ್ಕಬಳ್ಳಾಪುರದ ಕೈವಾರ ತಾತಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದಂಪತಿ ಸಮೇತ ದೇವಸ್ಥಾನಕ್ಕೆ ಆಗಮಿಸಿದ ಶಿವಕುಮಾರ್ಗೆ ಶಿಡ್ಲಘಟ್ಟ ಕ್ಷೇತ್ರದ ಶಾಸಕ ವಿ.ಮುನಿಯಪ್ಪ, ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ನ್.ಕೇಶವರೆಡ್ಡಿ ಸಾಥ್ ನೀಡಿದರು.

ಇದನ್ನೂ ಓದಿ

ಕೊರೊನಾ ರೋಗಿಗಳು ಉಸಿರಾಟದ ವ್ಯಾಯಾಮವನ್ನು ಮಾಡುವುದು ಹೇಗೆ?..ಇಲ್ಲಿದೆ ನೋಡಿ ಕೇಂದ್ರ ಸರ್ಕಾರ ಸೂಚಿಸಿದ ಕ್ರಮಗಳು

ಮೇ 26 ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದು 7 ವರ್ಷ; ಅಂದು ರೈತರಿಂದ ಕರಾಳ ದಿನ ಆಚರಣೆಗೆ ದೆಹಲಿ ರೈತ ನಾಯಕರ ನಿರ್ಧಾರ

(DK Shivakumar accused the karnataka government of reducing the covid test in state)

Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ