AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಪೀಡಕರಂತೆ ವರ್ತಿಸುವ ಡಿಕೆ ಶಿವಕುಮಾರ್: ನೀರಿನ ದರ ಏರಿಕೆಗೆ ಬಿಜೆಪಿ ಆಕ್ರೋಶ

ನೀರಿನ ದರ ಹೆಚ್ಚಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಪ್ರತಿಪಕ್ಷ ಬಿಜೆಪಿಯನ್ನು ಕೆರಳಿಸಿದೆ. ಕಾಂಗ್ರೆಸ್ ಸರ್ಕಾರ ಹಾಗೂ ಡಿಸಿಎಂ ಜನರ ಪೀಡಕರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಬಿಜೆಪಿ ನಾಯಕರು ಡಿಕೆ ಶಿವಕುಮಾರ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಜನ ಪೀಡಕರಂತೆ ವರ್ತಿಸುವ ಡಿಕೆ ಶಿವಕುಮಾರ್: ನೀರಿನ ದರ ಏರಿಕೆಗೆ ಬಿಜೆಪಿ ಆಕ್ರೋಶ
ಸಾಂದರ್ಭಿಕ ಚಿತ್ರ
ಕಿರಣ್​ ಹನಿಯಡ್ಕ
| Edited By: |

Updated on: Aug 22, 2024 | 2:06 PM

Share

ಬೆಂಗಳೂರು, ಆಗಸ್ಟ್​​ 22: ನೀರಿನ ದರ ಏರಿಕೆ ಮಾಡುವ ಸಂಬಂಧ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಟೀಕಾ ಪ್ರಹಾರ ನಡೆಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಕರ್ನಾಟಕ ಬಿಜೆಪಿ, ಮೂರು ಬಿಟ್ಟವರು ಊರಿಗೆ ದೊಡ್ಡವರು. ಡಿಕೆ ಶಿವಕುಮಾರ್ ಜನರ ಪೀಡಕರಂತೆ ವರ್ತಿಸುತ್ತಿದ್ದಾರೆ ಎಂದಿದೆ.

‘ಜನರ ಪೀಡಕರಂತೆ ವರ್ತಿಸುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಂಥವರನ್ನು ನೋಡಿಯೇ ‘ಮೂರು ಬಿಟ್ಟವರು ಊರಿಗೆ ದೊಡ್ಡವರು’ ಎನ್ನುವು ನಾಣ್ನುಡಿ ಬರೆದಂತೆ ತೋರುತ್ತಿದೆ. ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ದರ್ಪದ ಮಾತುಗಳನ್ನು ಆಡುತ್ತಲೇ ಇದೀಗ ಕುಡಿಯುವ ನೀರಿನ ಬೆಲೆ ಏರಿಕೆ ಮಾಡಿ ಬೆಂಗಳೂರಿಗರ ಜೇಬಿಗೆ ಕತ್ತರಿ ಪ್ರಯೋಗಕ್ಕೆ ಮುಂದಾಗಿದ್ದಾರೆ. ಬೆಂಗಳೂರಿಗೆ ಬದುಕು ಕಟ್ಟಿಕೊಳ್ಳಲು ಬಂದಿರುವ ಜನಸಾಮಾನ್ಯರು ಬೆಲೆ ಏರಿಕೆಯ ಭೂತವಾಗಿರುವ ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿಯುವ ಕಾಲ ದೂರವಿಲ್ಲ’ ಎಂದು ಬಿಜೆಪಿ ಉಲ್ಲೇಖಿಸಿದೆ.

‘ದರ ಏರಿಕೆ, ಗುಂಡಿ ಭಾಗ್ಯ, ಅವ್ಯವಸ್ಥೆಯೇ ಕೊಡುಗೆ’

ಕಾಂಗ್ರೆಸ್​​ ಬರೀ ದರ ಏರಿಕೆಯನ್ನಷ್ಟೇ ಬೆಂಗಳೂರು ಜನಕ್ಕೆ ನೀಡಿದೆ ಎಂದು ಶಾಸಕ ಅಶ್ವತ್ಥ್ ನಾರಾಯಣ ಟೀಕಿಸಿದರು. ಬೆಂಗಳೂರಿನಲ್ಲಿ ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರಿಗೆ ಈ ಸರ್ಕಾರ ಕೊಟ್ಟಿದ್ದು ಏನು? ಬೆಂಗಳೂರಿನವರಿಗೆ ಕೊಟ್ಟಿದ್ದು ದರ ಏರಿಕೆ, ಗುಂಡಿ ಭಾಗ್ಯ, ಅವ್ಯವಸ್ಥೆ. ರಸ್ತೆಯಲ್ಲಿ ಯಾರೂ ಓಡಾಡದಂತಹ ಪರಿಸ್ಥಿತಿ ನಿರ್ಮಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ನೀರಿನ ದರ ಏರಿಕೆ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸಿದರು.

ಬೆಂಗಳೂರಿನಲ್ಲಿ ಬಡ, ಮಧ್ಯಮ ವರ್ಗದ ಜನ ಹೆಚ್ಚು ಇದ್ದಾರೆ. ಜನ ಬದುಕಬೇಕಾ, ಸಾಯಬೇಕಾ, ಸರ್ಕಾರಕ್ಕೆ ಕರುಣೆ ಇಲ್ವಾ ಎಂದು ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್​ಸಿ ರವಿಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಎಲ್ಲದರ ಬೆಲೆ ಏರಿಕೆ ಮಾಡುತ್ತಿದ್ದರೆ ಜನರು ಏನು ಮಾಡಬೇಕು? ಯಾವುದೇ ಕಾರಣಕ್ಕೂ ನೀರಿನ ದರ ಹೆಚ್ಚಳ ಮಾಡಬಾರದು. ನೀರಿನ ದರ ಏರಿಕೆ ಮಾಡಿದರೆ ಬಿಜೆಪಿ ವಿರೋಧಿಸಲಿದೆ. ನೀರಿನ ದರ ಹೆಚ್ಚಿಸಿದರೆ ಬೆಂಗಳೂರಿನ ಜನ ಶಾಪ ಹಾಕುತ್ತಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜನ ಬೈದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ನಡೆದ ಕಾವೇರಿ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿಕೆ ಶಿವಕುಮಾರ್, ಯಾರು ಏನೇ ಅಂದರೂ ತಲೆಕೆಡಿಸಿಕೊಳ್ಳಲ್ಲ, ನೀರಿನ ದರ ಹೆಚ್ಚಿಸಿಯೇ ಸಿದ್ಧ ಎಂದಿದ್ದಾರೆ. ಇದರ ಬೆನ್ನಲ್ಲೇ ಪ್ರತಿಪಕ್ಷ ಬಿಜೆಪಿ ಅವರ ವಿರುದ್ಧ ಮುಗಿಬಿದ್ದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ