Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾವೇಶಕ್ಕೆ ಮುನ್ನ ‘ಟೆಂಪಲ್​ ರನ್​’: ಕೊಲ್ಲೂರಿನಲ್ಲಿ ಡಿಕೆಶಿ, ಬನಶಂಕರಿ ಸನ್ನಿಧಿಯಲ್ಲಿ ಈಶ್ವರಪ್ಪ

ಭಾನುವಾರದಂದು ರಾಜಕೀಯ ನಾಯಕರು ತಮ್ಮ ರಾಜಕೀಯ ವರಸೆ, ಕಸರತ್ತುಗಳಿಗೆ ಕೊಂಚ ಬ್ರೇಕ್​ ಕೊಟ್ಟು ಫುಲ್ ರಿಲಾಕ್ಸ್​ ಮೂಡ್​ನಲ್ಲಿ ಇರಲು ಬಯಸುತ್ತಾರೆ. ಅಂತೆಯೇ, ಇಂದು ಕೆಲ ನಾಯಕರು ದೇವರ ಮೊರೆಹೋಗಿ ಕೊಂಚ ನೆಮ್ಮದಿ ಪಡೆಯಲು ಮುಂದಾದರು.

ಸಮಾವೇಶಕ್ಕೆ ಮುನ್ನ ‘ಟೆಂಪಲ್​ ರನ್​’: ಕೊಲ್ಲೂರಿನಲ್ಲಿ ಡಿಕೆಶಿ, ಬನಶಂಕರಿ ಸನ್ನಿಧಿಯಲ್ಲಿ ಈಶ್ವರಪ್ಪ
ರಾಜಕೀಯ ನಾಯಕರ ಟೆಂಪಲ್​ ರನ್​
Follow us
KUSHAL V
|

Updated on:Nov 29, 2020 | 12:30 PM

ಉಡುಪಿ/ಬಾಗಲಕೋಟೆ: ಭಾನುವಾರದಂದು ರಾಜಕೀಯ ನಾಯಕರು ತಮ್ಮ ರಾಜಕೀಯ ವರಸೆ, ಕಸರತ್ತುಗಳಿಗೆ ಕೊಂಚ ಬ್ರೇಕ್​ ಕೊಟ್ಟು ಫುಲ್ ರಿಲಾಕ್ಸ್​ ಮೂಡ್​ನಲ್ಲಿ ಇರಲು ಬಯಸುತ್ತಾರೆ. ಅಂತೆಯೇ, ಇಂದು ಕೆಲ ನಾಯಕರು ದೇವರ ಮೊರೆಹೋಗಿ ಕೊಂಚ ನೆಮ್ಮದಿ ಪಡೆಯಲು ಮುಂದಾದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಸುಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ‌ ಭೇಟಿಕೊಟ್ಟರು. ಮೂಕಾಂಬಿಕೆಯ ದರ್ಶನ ಪಡೆದ ಡಿ.ಕೆ.ಶಿವಕುಮಾರ್​ ನಂತರ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇದಲ್ಲದೆ, ದೇವಸ್ಥಾನದಲ್ಲಿ ನಡೆಯುತ್ತಿದ್ದ ರಥೋತ್ಸವದಲ್ಲೂ ಭಾಗಿಯಾದರು. ತದ ನಂತರ, ದೇವಸ್ಥಾನದ ವತಿಯಿಂದ ಡಿಕೆಶಿಗೆ ಪ್ರಸಾದ ಪ್ರದಾನ ಮಾಡಲಾಯಿತು. ದೇಗುಲದ ಅರ್ಚಕರಾದ ನರಸಿಂಹ ಅಡಿಗರು ಪ್ರಸಾದ ನೀಡಿ ಶಿವಕುಮಾರ್​ಗೆ ಗೌರವಿಸಿದರು.

ದರ್ಶನ ಪಡೆದ ನಂತರ ಉಡುಪಿಯತ್ತ ಪ್ರಯಾಣ ಬೆಳೆಸಿದ ಡಿ.ಕೆ.ಶಿವಕುಮಾರ್ ಮಾರ್ಗ ಮಧ್ಯೆ ಮಾರಣಕಟ್ಟೆ ದೇವಾಲಯಕ್ಕೂ ಭೇಟಿಕೊಟ್ಟರು. ಅಂದ ಹಾಗೆ, ಶಿವಕುಮಾರ್ ನಿನ್ನೆ ರಾತ್ರಿ ಕಮಲಶಿಲೆ ದೇವಾಲಯಕ್ಕೆ ಭೇಟಿ ನೀಡಿದ್ದರು ಎಂದು ಸಹ ತಿಳಿದುಬಂದಿದೆ.

ಜಿಲ್ಲೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳಲು ಶಿವಕುಮಾರ್ ಆಗಮಿಸಿದ್ದಾರೆ. ಡಿ.ಕೆ.ಶಿವಕುಮಾರ್​ ಉಡುಪಿಯ ಬಾಸೆಲ್ ಮಿಶನ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದ ಬಳಿಕ‌ ಸಂಜೆ ಉಡುಪಿಯ ಶ್ರೀಕೃಷ್ಣ ಮಠ, ಚರ್ಚ್ ಹಾಗೂ ಮಸೀದಿಗೂ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.

ಬನಶಂಕರಿಯ ಸನ್ನಿಧಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಸಚಿವ ಕೆ.ಎಸ್.ಈಶ್ವರಪ್ಪ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿರುವ ಇತಿಹಾಸ ಪ್ರಸಿದ್ಧ ಬನಶಂಕರಿ ದೇವಸ್ಥಾನಕ್ಕೆ‌ ಭೇಟಿಕೊಟ್ಟರು. ಸಚಿವರೊಟ್ಟಿಗೆ ಅವರ ಪುತ್ರ ಕೆ.ಇ.ಕಾಂತೇಶ್ ಸಹ ಆಗಮಿಸಿದ್ದರು. ದೇವಿಯ ದರ್ಶನ ಪಡೆದ ಈಶ್ವರಪ್ಪ ಇಂದು ಜಿಲ್ಲೆಯಲ್ಲಿ ನಡೆಯಲಿರುವ ಕುರುಬ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಬನಶಂಕರಿಯ ಸನ್ನಿಧಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ

Published On - 12:20 pm, Sun, 29 November 20

ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ