AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾವೇಶಕ್ಕೆ ಮುನ್ನ ‘ಟೆಂಪಲ್​ ರನ್​’: ಕೊಲ್ಲೂರಿನಲ್ಲಿ ಡಿಕೆಶಿ, ಬನಶಂಕರಿ ಸನ್ನಿಧಿಯಲ್ಲಿ ಈಶ್ವರಪ್ಪ

ಭಾನುವಾರದಂದು ರಾಜಕೀಯ ನಾಯಕರು ತಮ್ಮ ರಾಜಕೀಯ ವರಸೆ, ಕಸರತ್ತುಗಳಿಗೆ ಕೊಂಚ ಬ್ರೇಕ್​ ಕೊಟ್ಟು ಫುಲ್ ರಿಲಾಕ್ಸ್​ ಮೂಡ್​ನಲ್ಲಿ ಇರಲು ಬಯಸುತ್ತಾರೆ. ಅಂತೆಯೇ, ಇಂದು ಕೆಲ ನಾಯಕರು ದೇವರ ಮೊರೆಹೋಗಿ ಕೊಂಚ ನೆಮ್ಮದಿ ಪಡೆಯಲು ಮುಂದಾದರು.

ಸಮಾವೇಶಕ್ಕೆ ಮುನ್ನ ‘ಟೆಂಪಲ್​ ರನ್​’: ಕೊಲ್ಲೂರಿನಲ್ಲಿ ಡಿಕೆಶಿ, ಬನಶಂಕರಿ ಸನ್ನಿಧಿಯಲ್ಲಿ ಈಶ್ವರಪ್ಪ
ರಾಜಕೀಯ ನಾಯಕರ ಟೆಂಪಲ್​ ರನ್​
KUSHAL V
|

Updated on:Nov 29, 2020 | 12:30 PM

Share

ಉಡುಪಿ/ಬಾಗಲಕೋಟೆ: ಭಾನುವಾರದಂದು ರಾಜಕೀಯ ನಾಯಕರು ತಮ್ಮ ರಾಜಕೀಯ ವರಸೆ, ಕಸರತ್ತುಗಳಿಗೆ ಕೊಂಚ ಬ್ರೇಕ್​ ಕೊಟ್ಟು ಫುಲ್ ರಿಲಾಕ್ಸ್​ ಮೂಡ್​ನಲ್ಲಿ ಇರಲು ಬಯಸುತ್ತಾರೆ. ಅಂತೆಯೇ, ಇಂದು ಕೆಲ ನಾಯಕರು ದೇವರ ಮೊರೆಹೋಗಿ ಕೊಂಚ ನೆಮ್ಮದಿ ಪಡೆಯಲು ಮುಂದಾದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಸುಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ‌ ಭೇಟಿಕೊಟ್ಟರು. ಮೂಕಾಂಬಿಕೆಯ ದರ್ಶನ ಪಡೆದ ಡಿ.ಕೆ.ಶಿವಕುಮಾರ್​ ನಂತರ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇದಲ್ಲದೆ, ದೇವಸ್ಥಾನದಲ್ಲಿ ನಡೆಯುತ್ತಿದ್ದ ರಥೋತ್ಸವದಲ್ಲೂ ಭಾಗಿಯಾದರು. ತದ ನಂತರ, ದೇವಸ್ಥಾನದ ವತಿಯಿಂದ ಡಿಕೆಶಿಗೆ ಪ್ರಸಾದ ಪ್ರದಾನ ಮಾಡಲಾಯಿತು. ದೇಗುಲದ ಅರ್ಚಕರಾದ ನರಸಿಂಹ ಅಡಿಗರು ಪ್ರಸಾದ ನೀಡಿ ಶಿವಕುಮಾರ್​ಗೆ ಗೌರವಿಸಿದರು.

ದರ್ಶನ ಪಡೆದ ನಂತರ ಉಡುಪಿಯತ್ತ ಪ್ರಯಾಣ ಬೆಳೆಸಿದ ಡಿ.ಕೆ.ಶಿವಕುಮಾರ್ ಮಾರ್ಗ ಮಧ್ಯೆ ಮಾರಣಕಟ್ಟೆ ದೇವಾಲಯಕ್ಕೂ ಭೇಟಿಕೊಟ್ಟರು. ಅಂದ ಹಾಗೆ, ಶಿವಕುಮಾರ್ ನಿನ್ನೆ ರಾತ್ರಿ ಕಮಲಶಿಲೆ ದೇವಾಲಯಕ್ಕೆ ಭೇಟಿ ನೀಡಿದ್ದರು ಎಂದು ಸಹ ತಿಳಿದುಬಂದಿದೆ.

ಜಿಲ್ಲೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳಲು ಶಿವಕುಮಾರ್ ಆಗಮಿಸಿದ್ದಾರೆ. ಡಿ.ಕೆ.ಶಿವಕುಮಾರ್​ ಉಡುಪಿಯ ಬಾಸೆಲ್ ಮಿಶನ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದ ಬಳಿಕ‌ ಸಂಜೆ ಉಡುಪಿಯ ಶ್ರೀಕೃಷ್ಣ ಮಠ, ಚರ್ಚ್ ಹಾಗೂ ಮಸೀದಿಗೂ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.

ಬನಶಂಕರಿಯ ಸನ್ನಿಧಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಸಚಿವ ಕೆ.ಎಸ್.ಈಶ್ವರಪ್ಪ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿರುವ ಇತಿಹಾಸ ಪ್ರಸಿದ್ಧ ಬನಶಂಕರಿ ದೇವಸ್ಥಾನಕ್ಕೆ‌ ಭೇಟಿಕೊಟ್ಟರು. ಸಚಿವರೊಟ್ಟಿಗೆ ಅವರ ಪುತ್ರ ಕೆ.ಇ.ಕಾಂತೇಶ್ ಸಹ ಆಗಮಿಸಿದ್ದರು. ದೇವಿಯ ದರ್ಶನ ಪಡೆದ ಈಶ್ವರಪ್ಪ ಇಂದು ಜಿಲ್ಲೆಯಲ್ಲಿ ನಡೆಯಲಿರುವ ಕುರುಬ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಬನಶಂಕರಿಯ ಸನ್ನಿಧಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ

Published On - 12:20 pm, Sun, 29 November 20

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ