AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾವೇಶಕ್ಕೆ ಮುನ್ನ ‘ಟೆಂಪಲ್​ ರನ್​’: ಕೊಲ್ಲೂರಿನಲ್ಲಿ ಡಿಕೆಶಿ, ಬನಶಂಕರಿ ಸನ್ನಿಧಿಯಲ್ಲಿ ಈಶ್ವರಪ್ಪ

ಭಾನುವಾರದಂದು ರಾಜಕೀಯ ನಾಯಕರು ತಮ್ಮ ರಾಜಕೀಯ ವರಸೆ, ಕಸರತ್ತುಗಳಿಗೆ ಕೊಂಚ ಬ್ರೇಕ್​ ಕೊಟ್ಟು ಫುಲ್ ರಿಲಾಕ್ಸ್​ ಮೂಡ್​ನಲ್ಲಿ ಇರಲು ಬಯಸುತ್ತಾರೆ. ಅಂತೆಯೇ, ಇಂದು ಕೆಲ ನಾಯಕರು ದೇವರ ಮೊರೆಹೋಗಿ ಕೊಂಚ ನೆಮ್ಮದಿ ಪಡೆಯಲು ಮುಂದಾದರು.

ಸಮಾವೇಶಕ್ಕೆ ಮುನ್ನ ‘ಟೆಂಪಲ್​ ರನ್​’: ಕೊಲ್ಲೂರಿನಲ್ಲಿ ಡಿಕೆಶಿ, ಬನಶಂಕರಿ ಸನ್ನಿಧಿಯಲ್ಲಿ ಈಶ್ವರಪ್ಪ
ರಾಜಕೀಯ ನಾಯಕರ ಟೆಂಪಲ್​ ರನ್​
Follow us
KUSHAL V
|

Updated on:Nov 29, 2020 | 12:30 PM

ಉಡುಪಿ/ಬಾಗಲಕೋಟೆ: ಭಾನುವಾರದಂದು ರಾಜಕೀಯ ನಾಯಕರು ತಮ್ಮ ರಾಜಕೀಯ ವರಸೆ, ಕಸರತ್ತುಗಳಿಗೆ ಕೊಂಚ ಬ್ರೇಕ್​ ಕೊಟ್ಟು ಫುಲ್ ರಿಲಾಕ್ಸ್​ ಮೂಡ್​ನಲ್ಲಿ ಇರಲು ಬಯಸುತ್ತಾರೆ. ಅಂತೆಯೇ, ಇಂದು ಕೆಲ ನಾಯಕರು ದೇವರ ಮೊರೆಹೋಗಿ ಕೊಂಚ ನೆಮ್ಮದಿ ಪಡೆಯಲು ಮುಂದಾದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಸುಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ‌ ಭೇಟಿಕೊಟ್ಟರು. ಮೂಕಾಂಬಿಕೆಯ ದರ್ಶನ ಪಡೆದ ಡಿ.ಕೆ.ಶಿವಕುಮಾರ್​ ನಂತರ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇದಲ್ಲದೆ, ದೇವಸ್ಥಾನದಲ್ಲಿ ನಡೆಯುತ್ತಿದ್ದ ರಥೋತ್ಸವದಲ್ಲೂ ಭಾಗಿಯಾದರು. ತದ ನಂತರ, ದೇವಸ್ಥಾನದ ವತಿಯಿಂದ ಡಿಕೆಶಿಗೆ ಪ್ರಸಾದ ಪ್ರದಾನ ಮಾಡಲಾಯಿತು. ದೇಗುಲದ ಅರ್ಚಕರಾದ ನರಸಿಂಹ ಅಡಿಗರು ಪ್ರಸಾದ ನೀಡಿ ಶಿವಕುಮಾರ್​ಗೆ ಗೌರವಿಸಿದರು.

ದರ್ಶನ ಪಡೆದ ನಂತರ ಉಡುಪಿಯತ್ತ ಪ್ರಯಾಣ ಬೆಳೆಸಿದ ಡಿ.ಕೆ.ಶಿವಕುಮಾರ್ ಮಾರ್ಗ ಮಧ್ಯೆ ಮಾರಣಕಟ್ಟೆ ದೇವಾಲಯಕ್ಕೂ ಭೇಟಿಕೊಟ್ಟರು. ಅಂದ ಹಾಗೆ, ಶಿವಕುಮಾರ್ ನಿನ್ನೆ ರಾತ್ರಿ ಕಮಲಶಿಲೆ ದೇವಾಲಯಕ್ಕೆ ಭೇಟಿ ನೀಡಿದ್ದರು ಎಂದು ಸಹ ತಿಳಿದುಬಂದಿದೆ.

ಜಿಲ್ಲೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳಲು ಶಿವಕುಮಾರ್ ಆಗಮಿಸಿದ್ದಾರೆ. ಡಿ.ಕೆ.ಶಿವಕುಮಾರ್​ ಉಡುಪಿಯ ಬಾಸೆಲ್ ಮಿಶನ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದ ಬಳಿಕ‌ ಸಂಜೆ ಉಡುಪಿಯ ಶ್ರೀಕೃಷ್ಣ ಮಠ, ಚರ್ಚ್ ಹಾಗೂ ಮಸೀದಿಗೂ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.

ಬನಶಂಕರಿಯ ಸನ್ನಿಧಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಸಚಿವ ಕೆ.ಎಸ್.ಈಶ್ವರಪ್ಪ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿರುವ ಇತಿಹಾಸ ಪ್ರಸಿದ್ಧ ಬನಶಂಕರಿ ದೇವಸ್ಥಾನಕ್ಕೆ‌ ಭೇಟಿಕೊಟ್ಟರು. ಸಚಿವರೊಟ್ಟಿಗೆ ಅವರ ಪುತ್ರ ಕೆ.ಇ.ಕಾಂತೇಶ್ ಸಹ ಆಗಮಿಸಿದ್ದರು. ದೇವಿಯ ದರ್ಶನ ಪಡೆದ ಈಶ್ವರಪ್ಪ ಇಂದು ಜಿಲ್ಲೆಯಲ್ಲಿ ನಡೆಯಲಿರುವ ಕುರುಬ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಬನಶಂಕರಿಯ ಸನ್ನಿಧಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ

Published On - 12:20 pm, Sun, 29 November 20

5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ