ಊರಲ್ಲಿ ಜನ ನನಗೆ ಹೊಡೆಯೊಕ್ಕೆ ಬರ್ತಿದಾರೆ- ಡಿಕೆ ಶಿವಕುಮಾರ್

ಬೆಂಗಳೂರು: ಪಾದರಾಯನಪುರದಲ್ಲಾದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ರಾಮನಗರದ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ವಿಷಯಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಊರಲ್ಲಿ ಜನ ನನಗೆ ಹೊಡೆಯೊಕ್ಕೆ ಬರ್ತಿದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ಪಾದರಾಯನಪುರ ದುಷ್ಕರ್ಮಿಗಳನ್ನ ರಾಮನಗರ ಜೈಲಿಗೆ ಯಾಕೆ ಹಾಕಿದ್ರೋ ಗೊತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ ಒಬ್ಬ ಡಾಕ್ಟರ್. ಅವರು ನಮ್ಮ ಜಿಲ್ಲೆಯನ್ನು ಕ್ಲೀನ್ ಮಾಡ್ತೀನಿ ಎಂದು ಹೇಳಿದ್ದಾರೆ ಸಚಿವ ಅಶ್ವತ್ಥ್ […]

ಊರಲ್ಲಿ ಜನ ನನಗೆ ಹೊಡೆಯೊಕ್ಕೆ ಬರ್ತಿದಾರೆ- ಡಿಕೆ ಶಿವಕುಮಾರ್
ಸಾಧು ಶ್ರೀನಾಥ್​

Updated on: Apr 24, 2020 | 2:12 PM

ಬೆಂಗಳೂರು: ಪಾದರಾಯನಪುರದಲ್ಲಾದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ರಾಮನಗರದ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ವಿಷಯಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಊರಲ್ಲಿ ಜನ ನನಗೆ ಹೊಡೆಯೊಕ್ಕೆ ಬರ್ತಿದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ಪಾದರಾಯನಪುರ ದುಷ್ಕರ್ಮಿಗಳನ್ನ ರಾಮನಗರ ಜೈಲಿಗೆ ಯಾಕೆ ಹಾಕಿದ್ರೋ ಗೊತ್ತಿಲ್ಲ.

ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ ಒಬ್ಬ ಡಾಕ್ಟರ್. ಅವರು ನಮ್ಮ ಜಿಲ್ಲೆಯನ್ನು ಕ್ಲೀನ್ ಮಾಡ್ತೀನಿ ಎಂದು ಹೇಳಿದ್ದಾರೆ ಸಚಿವ ಅಶ್ವತ್ಥ್ ನಾರಾಯಣ ಅವರಲ್ಲಿ ನಾನು ಮನವಿ ಮಾಡುತ್ತೇನೆ ದಯಮಾಡಿ ನಮ್ಮ ಜಿಲ್ಲೆಯನ್ನ ಆರಾಮಾಗಿ ಇರಲು ಬಿಡಿ ಎಂದಿದ್ದಾರೆ. ನಿನ್ನೆಯಿಂದ ನನಗೆ ನಿದ್ರೆ ಇಲ್ಲ. ಅಲ್ಲಿನ ಜನ ಹೋರಾಟ ಮಾಡಲು ಹಿಂದೆ ಮುಂದೆ ನೋಡಲ್ಲ.

ಅಲ್ಲಿನ ಜನರು ನನಗೆ ಹೊಡೆಯೋದೊಂದೇ ಬಾಕಿಯಿದೆ. ನನ್ನ ತಮ್ಮನೇ ನನಗೆ ಹೊಡೆದು ಬಿಡುತ್ತಾನೆ ಎಂದ ತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಆರೋಪಿಗಳನ್ನು ಯಾರು ಜೈಲಿಗೆ ಕರೆದುಕೊಂಡು ಹೋದರು. ಎಲ್ಲದರ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಡಿಕೆಶಿ ಆಗ್ರಹಿಸಿದ್ದಾರೆ.

Published On - 1:21 pm, Fri, 24 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us