DK Shivakumar: ಕೊವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ; ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಡಿಕೆ ಶಿವಕುಮಾರ್ ಹಾಜರು

Mekedatu Padayatra: ಕೊವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿ, ಮೇಕೆದಾಟು ಪಾದಯಾತ್ರೆ ನಡೆಸಿದ್ದಕ್ಕಾಗಿ ಡಿಕೆಶಿ ವಿರುದ್ಧ ಕೇಸ್ ದಾಖಲಾಗಿತ್ತು. ಈ ಕುರಿತು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಡಿಕೆ ಶಿವಕುಮಾರ್ ಸೇರಿದಂತೆ 29 ಜನರಿಗೆ ಸಮನ್ಸ್​​ ಜಾರಿ ಮಾಡಿತ್ತು.

DK Shivakumar: ಕೊವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ; ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಡಿಕೆ ಶಿವಕುಮಾರ್ ಹಾಜರು
ಡಿಕೆ ಶಿವಕುಮಾರ
Follow us
| Updated By: ಸುಷ್ಮಾ ಚಕ್ರೆ

Updated on:Jun 15, 2022 | 12:17 PM

ಬೆಂಗಳೂರು: ಮೇಕೆದಾಟು ಯೋಜನೆ (Mekedatu Project) ಜಾರಿಗೆ ಒತ್ತಾಯಿಸಿ ಪಾದಯಾತ್ರೆ ವೇಳೆ ಕೊವಿಡ್ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಕೇಸ್​ ದಾಖಲಿಸಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಡಿ.ಕೆ. ಶಿವಕುಮಾರ್​ ಹಾಜರಾಗಿದ್ದಾರೆ. ಕೊವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿ, ಮೇಕೆದಾಟು ಪಾದಯಾತ್ರೆ ನಡೆಸಿದ್ದಕ್ಕಾಗಿ ಡಿಕೆಶಿ ವಿರುದ್ಧ ಕೇಸ್ ದಾಖಲಾಗಿತ್ತು. ಈ ಕುರಿತು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಡಿಕೆ ಶಿವಕುಮಾರ್ ಸೇರಿದಂತೆ 29 ಜನರಿಗೆ ಸಮನ್ಸ್​​ ಜಾರಿ ಮಾಡಿತ್ತು.

ಹೀಗಾಗಿ, ಇಂದು ಕೋರ್ಟ್​ಗೆ ಹಾಜರಾಗಿ ಡಿಕೆ ಶಿವಕುಮಾರ್ ಜಾಮೀನು ಪಡೆಯಲಿದ್ದಾರೆ. ರಾಮನಗರದಲ್ಲಿ ಮಾರ್ಗಸೂಚಿ ಉಲ್ಲಂಘನೆ ಮಾಡಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಿದ್ದರು. ರಾಮನಗರದಲ್ಲಿ ಪ್ರಕರಣದ ವಿವಿಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ನಡೆಸಿದ ಪಾದಯಾತ್ರೆಯ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಈ ಹಿಂದೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಈ ವೇಳೆ ಶಿವಕುಮಾರ್‌ ಹೇಳಿಕೆಯನ್ನು ನ್ಯಾಯಾಲಯವು ದಾಖಲಿಸಿಕೊಂಡಿತ್ತು.

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್‌ ಪಾದಯಾತ್ರೆ ಹಮ್ಮಿಕೊಂಡಿತ್ತು. ಕೊವಿಡ್‌ ಹೆಚ್ಚಳವಾಗಿದ್ದ ವೇಳೆ ಪಾದಯಾತ್ರೆ ಕೈಗೊಂಡಿದ್ದರಿಂದ ಕೊವಿಡ್‌ ನಿಯಮ ಉಲ್ಲಂಘನೆಯ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದ ಸಂಬಂಧ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯವು ಡಿಕೆ ಶಿವಕುಮಾರ್​​ಗೆ ಖುದ್ದು ಹಾಜರಾಗಬೇಕು ಎಂದು ಸೂಚನೆ ನೀಡಿತ್ತು.

ಇದನ್ನೂ ಓದಿ
Image
ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಿಎಂ ಪತ್ರ: ನೆರೆರಾಜ್ಯದ ಯೋಜನೆಗೆ ತಕರಾರು ತಪ್ಪು ಎಂದ ಗೋವಿಂದ ಕಾರಜೋಳ
Image
Mekedatu project ಮೇಕೆದಾಟು ಬಗ್ಗೆ ತಮಿಳುನಾಡು ಸರ್ಕಾರದಿಂದ ಹೊಸ ಕ್ಯಾತೆ ; ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂಗೆ ಮನವಿ
Image
ತಮಿಳುನಾಡಿಗೆ ಟಾಂಗ್! ಮೇಕೆದಾಟು ಯೋಜನೆ ಜಾರಿಗಾಗಿ ವಿಧಾನಸಭೆಯಲ್ಲಿ ಕರ್ನಾಟಕ ಸರ್ಕಾರದಿಂದಲೂ ನಿರ್ಣಯ

ಇದನ್ನೂ ಓದಿ: Mekedatu project ಮೇಕೆದಾಟು ಬಗ್ಗೆ ತಮಿಳುನಾಡು ಸರ್ಕಾರದಿಂದ ಹೊಸ ಕ್ಯಾತೆ ; ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂಗೆ ಮನವಿ

ಏನಿದು ಪ್ರಕರಣ?:

ಮೇಕೆದಾಟು ಪಾದಯಾತ್ರೆಯಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಡಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಒಟ್ಟು 29 ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಡಿ.ಕೆ. ಸುರೇಶ್ ಸೇರಿ ಒಟ್ಟು 29 ನಾಯಕರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಇದೇ ವರ್ಷದ ಜನವರಿಯಲ್ಲಿ ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಏರುಗತಿಯಲ್ಲಿದ್ದಾಗ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಕೈಗೊಂಡಿದ್ದರು. ಬಳಿಕ ನ್ಯಾಯಾಲಯದ ತಾಕೀತಿನ ಬಳಿಕ ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದರು.

ಕಾಂಗ್ರೆಸ್ ಪಾದಯಾತ್ರೆಯನ್ನು ತಡೆಯದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಆಗ ಅರ್ಧಕ್ಕೆ ನಿಲ್ಲಿಸಿದ್ದ ಪಾದಯಾತ್ರೆಯನ್ನು ಕೊರೊನಾ ಪ್ರಕರಣಗಳು ಕಡಿಮೆ ಆದ ಬಳಿಕ ಮುಂದುವರೆಸಿ ಪೂರ್ಣಗೊಳಿಸಿದ್ದರು. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು. ಇದನ್ನು ಉಲ್ಲಂಘನೆ ಮಾಡಿ ಸಾವಿರಾರು ಜನರನ್ನು ಒಂದಡೆ ಸೇರಿಸಿ ಪಾದಯಾತ್ರೆ ಮಾಡಿದ ಕಾಂಗ್ರೆಸ್ ಮುಖಂಡರ ವಿರುದ್ಧ ಸಾತನೂರು ಪೊಲೀಸರು ಎಫ್ಐಆರ್ ದಾಖಲಿಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:16 pm, Wed, 15 June 22

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ