AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಕೊವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ; ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಡಿಕೆ ಶಿವಕುಮಾರ್ ಹಾಜರು

Mekedatu Padayatra: ಕೊವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿ, ಮೇಕೆದಾಟು ಪಾದಯಾತ್ರೆ ನಡೆಸಿದ್ದಕ್ಕಾಗಿ ಡಿಕೆಶಿ ವಿರುದ್ಧ ಕೇಸ್ ದಾಖಲಾಗಿತ್ತು. ಈ ಕುರಿತು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಡಿಕೆ ಶಿವಕುಮಾರ್ ಸೇರಿದಂತೆ 29 ಜನರಿಗೆ ಸಮನ್ಸ್​​ ಜಾರಿ ಮಾಡಿತ್ತು.

DK Shivakumar: ಕೊವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ; ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಡಿಕೆ ಶಿವಕುಮಾರ್ ಹಾಜರು
ಡಿಕೆ ಶಿವಕುಮಾರ
TV9 Web
| Edited By: |

Updated on:Jun 15, 2022 | 12:17 PM

Share

ಬೆಂಗಳೂರು: ಮೇಕೆದಾಟು ಯೋಜನೆ (Mekedatu Project) ಜಾರಿಗೆ ಒತ್ತಾಯಿಸಿ ಪಾದಯಾತ್ರೆ ವೇಳೆ ಕೊವಿಡ್ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಕೇಸ್​ ದಾಖಲಿಸಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಡಿ.ಕೆ. ಶಿವಕುಮಾರ್​ ಹಾಜರಾಗಿದ್ದಾರೆ. ಕೊವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿ, ಮೇಕೆದಾಟು ಪಾದಯಾತ್ರೆ ನಡೆಸಿದ್ದಕ್ಕಾಗಿ ಡಿಕೆಶಿ ವಿರುದ್ಧ ಕೇಸ್ ದಾಖಲಾಗಿತ್ತು. ಈ ಕುರಿತು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಡಿಕೆ ಶಿವಕುಮಾರ್ ಸೇರಿದಂತೆ 29 ಜನರಿಗೆ ಸಮನ್ಸ್​​ ಜಾರಿ ಮಾಡಿತ್ತು.

ಹೀಗಾಗಿ, ಇಂದು ಕೋರ್ಟ್​ಗೆ ಹಾಜರಾಗಿ ಡಿಕೆ ಶಿವಕುಮಾರ್ ಜಾಮೀನು ಪಡೆಯಲಿದ್ದಾರೆ. ರಾಮನಗರದಲ್ಲಿ ಮಾರ್ಗಸೂಚಿ ಉಲ್ಲಂಘನೆ ಮಾಡಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಿದ್ದರು. ರಾಮನಗರದಲ್ಲಿ ಪ್ರಕರಣದ ವಿವಿಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು. ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ನಡೆಸಿದ ಪಾದಯಾತ್ರೆಯ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಈ ಹಿಂದೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಈ ವೇಳೆ ಶಿವಕುಮಾರ್‌ ಹೇಳಿಕೆಯನ್ನು ನ್ಯಾಯಾಲಯವು ದಾಖಲಿಸಿಕೊಂಡಿತ್ತು.

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್‌ ಪಾದಯಾತ್ರೆ ಹಮ್ಮಿಕೊಂಡಿತ್ತು. ಕೊವಿಡ್‌ ಹೆಚ್ಚಳವಾಗಿದ್ದ ವೇಳೆ ಪಾದಯಾತ್ರೆ ಕೈಗೊಂಡಿದ್ದರಿಂದ ಕೊವಿಡ್‌ ನಿಯಮ ಉಲ್ಲಂಘನೆಯ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದ ಸಂಬಂಧ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯವು ಡಿಕೆ ಶಿವಕುಮಾರ್​​ಗೆ ಖುದ್ದು ಹಾಜರಾಗಬೇಕು ಎಂದು ಸೂಚನೆ ನೀಡಿತ್ತು.

ಇದನ್ನೂ ಓದಿ
Image
ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಿಎಂ ಪತ್ರ: ನೆರೆರಾಜ್ಯದ ಯೋಜನೆಗೆ ತಕರಾರು ತಪ್ಪು ಎಂದ ಗೋವಿಂದ ಕಾರಜೋಳ
Image
Mekedatu project ಮೇಕೆದಾಟು ಬಗ್ಗೆ ತಮಿಳುನಾಡು ಸರ್ಕಾರದಿಂದ ಹೊಸ ಕ್ಯಾತೆ ; ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂಗೆ ಮನವಿ
Image
ತಮಿಳುನಾಡಿಗೆ ಟಾಂಗ್! ಮೇಕೆದಾಟು ಯೋಜನೆ ಜಾರಿಗಾಗಿ ವಿಧಾನಸಭೆಯಲ್ಲಿ ಕರ್ನಾಟಕ ಸರ್ಕಾರದಿಂದಲೂ ನಿರ್ಣಯ

ಇದನ್ನೂ ಓದಿ: Mekedatu project ಮೇಕೆದಾಟು ಬಗ್ಗೆ ತಮಿಳುನಾಡು ಸರ್ಕಾರದಿಂದ ಹೊಸ ಕ್ಯಾತೆ ; ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂಗೆ ಮನವಿ

ಏನಿದು ಪ್ರಕರಣ?:

ಮೇಕೆದಾಟು ಪಾದಯಾತ್ರೆಯಲ್ಲಿ ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಡಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಒಟ್ಟು 29 ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಡಿ.ಕೆ. ಸುರೇಶ್ ಸೇರಿ ಒಟ್ಟು 29 ನಾಯಕರಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಇದೇ ವರ್ಷದ ಜನವರಿಯಲ್ಲಿ ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಏರುಗತಿಯಲ್ಲಿದ್ದಾಗ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಕೈಗೊಂಡಿದ್ದರು. ಬಳಿಕ ನ್ಯಾಯಾಲಯದ ತಾಕೀತಿನ ಬಳಿಕ ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದರು.

ಕಾಂಗ್ರೆಸ್ ಪಾದಯಾತ್ರೆಯನ್ನು ತಡೆಯದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಆಗ ಅರ್ಧಕ್ಕೆ ನಿಲ್ಲಿಸಿದ್ದ ಪಾದಯಾತ್ರೆಯನ್ನು ಕೊರೊನಾ ಪ್ರಕರಣಗಳು ಕಡಿಮೆ ಆದ ಬಳಿಕ ಮುಂದುವರೆಸಿ ಪೂರ್ಣಗೊಳಿಸಿದ್ದರು. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು. ಇದನ್ನು ಉಲ್ಲಂಘನೆ ಮಾಡಿ ಸಾವಿರಾರು ಜನರನ್ನು ಒಂದಡೆ ಸೇರಿಸಿ ಪಾದಯಾತ್ರೆ ಮಾಡಿದ ಕಾಂಗ್ರೆಸ್ ಮುಖಂಡರ ವಿರುದ್ಧ ಸಾತನೂರು ಪೊಲೀಸರು ಎಫ್ಐಆರ್ ದಾಖಲಿಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:16 pm, Wed, 15 June 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್