AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಪ್ರಾಸಿಕ್ಯೂಷನ್ ನೊಟೀಸ್ ವಾಪಸಿಗೆ ಸಚಿವ ಸಂಪುಟ ನಿರ್ಣಯ, ರಾಜ್ಯಪಾಲ-ಸರ್ಕಾರದ ನಡುವೆ ಸಂಘರ್ಷಕ್ಕೆ ಮುನ್ನುಡಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ ಎಂದು ದೂರು ಕೇಳಿ ಬಂದ ಬೆನ್ನಲ್ಲಿಯೇ ರಾಜ್ಯಪಾಲರಿಂದ ನೊಟೀಸ್ ಜಾರಿ ಮಾಡಲಾಗಿದ್ದು, ಇದೀಗ ರಾಜ್ಯಪಾಲರ ನೋಟಿಸ್ ಅನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಮುಡಾ ಪ್ರಾಸಿಕ್ಯೂಷನ್ ನೊಟೀಸ್ ವಾಪಸಿಗೆ ಸಚಿವ ಸಂಪುಟ ನಿರ್ಣಯ, ರಾಜ್ಯಪಾಲ-ಸರ್ಕಾರದ ನಡುವೆ ಸಂಘರ್ಷಕ್ಕೆ ಮುನ್ನುಡಿ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್​
ಪ್ರಸನ್ನ ಗಾಂವ್ಕರ್​
| Edited By: |

Updated on:Aug 01, 2024 | 3:00 PM

Share

ಬೆಂಗಳೂರು (ಆಗಸ್ಟ್, 01): ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದದಲ್ಲಿ ಇಂದು(ಆಗಸ್ಟ್ 01) ನಡೆದ ಸಚಿವ ಸಂಪುಟ ಸಭೆಯಲ್ಲಿ ಎರಡು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೋಟಿಸ್​ ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಾಗೇ ಇನ್ನೊಂದು ಈ ಬಗ್ಗೆ ಕಾನೂನು ಹೋರಾಟ ನಡೆಸಲು ಸಹ ಸಂಪುಟ ಸಭೆಯಲ್ಲಿ ನಿರ್ಣಯವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ ಎಂದು ದೂರು ನೀಡಿದ ಬೆನ್ನಲ್ಲಿಯೇ ರಾಜ್ಯಪಾಲರು ನೊಟೀಸ್ ಜಾರಿ ಮಾಡಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಎದುರಿಸಬೇಕಿದ್ದ ಹಿನ್ನೆಲೆಯಲ್ಲಿ ಅವರನ್ನು ಹೊರಗಿಟ್ಟು ಸಚಿವ ಸಂಪುಟ ಸಭೆ ನಡೆಸಿದ್ದು,  ಈ ಎರಡು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯಪಾಲ ಹಾಗೂ ಸರ್ಕಾರದ ನಡುವಿನ ಕಾನೂನು ಸಂಘರ್ಷ ಶುರುವಾಗುವ ಲಕ್ಷಣಗಳು ಕಾಣಿಸುತ್ತಿವೆ.

ಸಚಿವ ಸಂಪುಟದಲ್ಲಿ ಏನೆಲ್ಲಾ ಚರ್ಚೆ ಆಯ್ತು?

ಮುಡಾ ಹಗರಣದ ಆರೋಪ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮ್ಯಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವ ಚಿಂತನೆ ನಡೆಸಿದ್ದಾರೆ. ಇದಕ್ಕೂ ಮೊದಲು ನೋಟಿಸ್​ ನೀಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ರಾಜ್ಯಪಾಲರ ನೋಟಿಸ್​ಗೆ ಸಚಿವ ಸಂಪುಟ ವಿರೋಧಿಸಿದ್ದು, ನೋಟಿಸ್​​​ನಲ್ಲಿ ಬಳಸಿದ ಪದ ಮತ್ತು ಒಕ್ಕಣಿಕೆಗೆ ಆಕ್ಷೇಪಿಸಿದೆ. ಅಲ್ಲದೇ ನೋಟಿಸ್​ ಹಿಂಪಡೆಯುವಂತೆ ನಿರ್ಣಯ ಕೈಗೊಂಡಿದೆ. ಇನ್ನು ಈ ಬಗ್ಗೆ ಹೋರಾಟ ನಡೆಸಲು ಸಹ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ: 2010ರಲ್ಲಿ ಯಡಿಯೂರಪ್ಪಗೆ ಆದಂತೆ ಸಿದ್ದರಾಮಯ್ಯಗೆ ಕುತ್ತು ತರುತ್ತಾ ಪ್ರಾಸಿಕ್ಯೂಷನ್? ಅಂದು ಏನಾಗಿತ್ತು ಗೊತ್ತಾ?

  • ರಾಜ್ಯಪಾಲ ನೋಟಿಸ್​ ನೀಡಿರುವ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದು, ಈ ಹಿಂದೆ ಬಿಜೆಪಿ ನಾಯಕರ ವಿರುದ್ಧ ದೂರು ದಾಖಲು ಆಗಿವೆ. ಆ ದೂರುಗಳ ಬಗ್ಗೆ ರಾಜ್ಯಪಾಲರು ಯಾವುದೆ ಕ್ರಮ ಕೈಗೊಂಡಿಲ್ಲ. ಮುಡಾ ಪ್ರಕರಣದಲ್ಲಿ ದೂರು ದಾಖಲು ಆಗಿರುವ ದಿನವೇ ನೋಟೀಸ್ ನೀಡಲಾಗಿದೆ. ಮುಖ್ಯ ಕಾರ್ಯದರ್ಶಿಗೆ ನೋಟಿಸ್ ನೀಡಲಾಗಿದೆ. ಯಾಕಿಷ್ಟು ಆತುರದ ನೋಟಿಸ್? ಇದೊಂದು ರಾಜಕೀಯ ಪ್ರೇರಿತ ಎಂದು ಸಚಿವ ಸಂಪುಟ ನಿರ್ಧಾರ ಮಾಡಿದೆ.
  • ಮೊಟ್ಟೆ ಹಗರಣಕ್ಕೆ ಸಂಬಂಧಿಸಿ ಇದೇ ರಾಜ್ಯಪಾಲರ ಮುಂದೆ ದೂರು ದಾಖಲಾಗಿತ್ತು. ಮೊಟ್ಟೆ ಪ್ರಕರಣ ದಲ್ಲಿ ದೂರು ನೀಡಿ ಮೂರು ತಿಂಗಳಾದರೂ ರಾಜ್ಯಪಾಲರು ಕ್ರಮ ಕೈಗೊಂಡಿರಲಿಲ್ಲ. ಹಿಂದೆ ಬಿಜೆಪಿಯವರ ವಿರುದ್ದ ಖಾಸಗಿ ದೂರು ದಾಖಲಾದಾಗ ಪ್ರಾಸಿಕ್ಯುಷನ್ ಗೂ ಅನುಮತಿ ನೀಡಿಲ್ಲ, ಶೋಕಾಸ್ ನೊಟೀಸ್ ಕೂಡ ನೀಡಿರಲಿಲ್ಲ. ಆದ್ರೆ, ಈಗ ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಒತ್ತಡ ಹೇರುತ್ತಿರುವುದು ಸರಿಯಲ್ಲ ಎಂದು ಸಚಿವ ಸಂಪುಟದಲ್ಲಿ ಚರ್ಚೆ ಮಾಡಲಾಗಿದೆ.

ಸಭೆ ಬಳಿಕ ಸಚಿವರುಗಳು ಹೇಳಿದ್ದೇನು?

ಇನ್ನು ಸಚಿವ ಸಂಪುಟ ಬಳಿಕ ಮಾಧ್ಯಗಳಿಗೆ ಪ್ರತಿಕ್ರಿಯಿಸಿದ ಸಚಿವ ರಾಜಣ್ಣ, ಕೋಣನಿಗೆ ಕಾಯಿಲೆ ಬಂದರೆ ಎಮ್ಮೆಗೆ ಬರೆ ಹಾಕಿದ್ರಂತೆ. ಎಮ್ಮೆಗೆ ಕಾಯಿಲೆ ಬಂದ್ರೆ ಕೋಣನಿಗೆ ಬರೆ ಹಾಕಿದ್ರಂತೆ ಹಾಗಾಯ್ತು. 20 ವರ್ಷಗಳ ಹಿಂದೆಯೇ ಸಿಎಂ ಪತ್ನಿ ಸೈಟ್​ ಪಡೆದುಕೊಂಡಿದ್ದಾರೆ. ಕಾನೂನು ಪ್ರಕಾರವಾಗಿಯೇ ಮುಡಾ ಸೈಟ್​​ ಪಡೆದುಕೊಂಡಿದ್ದಾರೆ. ಈಗ ಗವರ್ನರ್ ಗೆಹ್ಲೋಟ್​ ಮುಂದೆ‌ ಎಷ್ಟು ಅರ್ಜಿಗಳು ಇವೆ?. ಇದು ರಾಜಕೀಯ ಮಿಶ್ರಣ, ಇದು ಪೂರ್ಣ ರಾಜಕಾರಣ ಎಂದರು.

ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ವಿಚಾರವಾಗಿ ಸಂಪುಟ ಸಭೆ ಬಳಿಕ ಟಿವಿ9 ಜೊತೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಈಗ ನೀಡಿದ ನೋಟಿಸ್ ಸಂಪೂರ್ಣ ರಾಜಕೀಯ ಪ್ರೇರಿತವಾಗಿದೆ. ಶೋಕಾಸ್​ ನೋಟಿಸ್ ತಿರಸ್ಕರಿಸಲು ನಿರ್ಣಯ ಮಾಡಿದ್ದೇವೆ. ಗವರ್ನರ್ ಬಳಸಿಕೊಂಡು ಕೇಂದ್ರ ಸರ್ಕಾರ ಅಧಿಕಾರದ ದುರುಪಯೋಗ ಮಾಡಿಕೊಳ್ಳುತ್ತಿದೆ. ಮುಡಾ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ರಾಜ್ಯ ಸರ್ಕಾರವನ್ನ ಅಸ್ಥಿರಗೊಳಿಸಲು ಕೇಂದ್ರ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು.

ಒಟ್ಟಿನಲ್ಲಿ ಮುಡಾ ಹಗರಣ ಆರೋಪ ಕ್ಷಣ ಕ್ಷಣಕ್ಕೂ ಸಿಎಂ ಕೊರಳಿಗೆ ಬಿಗಿಯಾಗಿ ಸುತ್ತಿಕೊಳ್ಳುತ್ತಿದ್ದು, ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡುತ್ತಾರಾ? ಇದಕ್ಕೆ ಸರ್ಕಾರ ಹೇಗೆ ಮೆಟ್ಟಿ ನಿಲ್ಲುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Thu, 1 August 24

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!