ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್: ಬಿಲ್ಡರ್, ಒತ್ತುವರಿ ಮಾಡಿದವರಿಗೆ ಶಾಕ್ ಕೊಟ್ಟ ಡಿಸಿಎಂ

ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್​ ಇಂದು ಬೆಂಗಳೂರು ಸಿಟಿ ರೌಂಡ್ಸ್​ ಹಾಕಿದ್ದಾರೆ. ರಾಜಕಾಲುವೆ ಕಾಮಗಾರಿ ವೀಕ್ಷಣೆ ಮಾಡಿದ್ದು, ಆದಷ್ಟು ಬೇಗ ರಾಜಕಾಲುವೆ ಕಾಮಗಾರಿ ಮುಗಿಸುತ್ತೇವೆ ಎಂದು ಹೇಳಿದ್ದಾರೆ. ಖಾಸಗಿ ಬಿಲ್ಡರ್ಸ್ ಹಾಗೂ ಭೂ ಮಾಲೀಕರು ಒತ್ತುವರಿ ತೆರವು ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್: ಬಿಲ್ಡರ್, ಒತ್ತುವರಿ ಮಾಡಿದವರಿಗೆ ಶಾಕ್ ಕೊಟ್ಟ ಡಿಸಿಎಂ
ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್: ಬಿಲ್ಡರ್, ಒತ್ತುವರಿ ಮಾಡಿದವರಿಗೆ ಶಾಕ್ ಕೊಟ್ಟ ಡಿಸಿಎಂ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: May 20, 2024 | 8:02 PM

ಬೆಂಗಳೂರು, ಮೇ 20: ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಲಿದ ಹಿನ್ನೆಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಬೆಂಗಳೂರು ಸಿಟಿ ರೌಂಡ್ಸ್​ ಹಾಕಿದ್ದಾರೆ. ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಜೊತೆಗೆ ಕೆ.ಆರ್ ಪುರ ಸಮೀಪದ ಎನ್​ಜಿಎಫ್​​ ಬಳಿ ಸ್ಕೈಡೆಕ್ ಸ್ಥಳ ವೀಕ್ಷಣೆ ಮಾಡಿದ್ದು, ಯಾವುದೇ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ (Raja Kaluve Encroachment) ತೆರವು ಕಾರ್ಯಚರಣೆ ಮಾಡುತ್ತೇವೆ. ಖಾಸಗಿ ಬಿಲ್ಡರ್ಸ್ ಹಾಗೂ ಭೂ ಮಾಲೀಕರು ಒತ್ತುವರಿ ತೆರವು ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಮಳೆ ಹಿನ್ನೆಲೆ ರಾಜಕಾಲುವೆ ಸ್ವಚ್ಛತೆ ಕುರಿತು ಬಿಬಿಎಂಪಿ ಆಯುಕ್ತರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಪಕ್ಕದ ಸಾಯಿ ಲೇಔಟ್​ಗೆ ಮಳೆ ನೀರು ನುಗ್ಗುವ ಭೀತಿ ಹಿನ್ನೆಲೆ ಮಳೆ ನೀರು ರಾಜಕಾಲುವೆಗೆ ಕನೆಕ್ಟ್ ಮಾಡಲು ಸೂಚನೆ ನೀಡಿದ್ದಾರೆ. ಇದೇ ವೇಳೆ ಬಿಡಿಎ ಸೈಟ್​ಗಳಿಗೆ ದಾರಿ ಇಲ್ಲ ಅಂತಾ ಡಿ.ಕೆ.ಶಿವಕುಮಾರ್​ಗೆ ಬಿಡಿಎ ನಿವಾಸಿಗಳಿಂದ ದೂರು ನೀಡಿದ್ದಾರೆ.

ಇದನ್ನೂ ಓದಿ: ಮಧ್ಯವರ್ತಿಗಳಿಲ್ಲದೆ ಫಲಾನುಭವಿಗಳಿಗೆ ತಲುಪಿದ 5 ಗ್ಯಾರೆಂಟಿ: 1 ವರ್ಷದ ಸಾಧನೆ ಬಿಚ್ಚಿಟ್ಟ ಸಿದ್ದರಾಮಯ್ಯ

ಅಮೃತಹಳ್ಳಿಯ ರಾಚೇನಹಳ್ಳಿ ಸಮೀಪದಲ್ಲಿರುವ ಜವಹರಲಾಲ್ ನೆಹರು ಅಧ್ಯಯನ ಕೇಂದ್ರಕ್ಕೂ ಶಿವಕುಮಾರ್​ ಭೇಟಿ ನೀಡಿದ್ದು, ಪ್ರಗತಿ ಹಂತದಲ್ಲಿರುವ ಕಾಮಗಾರಿ ವೀಕ್ಷಣೆ ಮಾಡಿದ್ದಾರೆ.

ಆದಷ್ಟು ಬೇಗ ರಾಜಕಾಲುವೆ ಕಾಮಗಾರಿ ಮುಗಿಸುತ್ತೇವೆ ಎಂದ ಡಿ.ಕೆ.ಶಿವಕುಮಾರ್

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್​, ಬೆಂಗಳೂರಿನಲ್ಲಿ ಮಳೆಯಿಂದ ಹಾನಿಯಾಗಿಲ್ಲ, ಆದರೆ ನೀರು ನಿಂತಿದೆ. ಪ್ರೈವೇಟ್ ಲೇಔಟ್ ನಿರ್ಲಕ್ಷ್ಯದಿಂದ ಈ ರೀತಿ ಆಗಿದೆ, ಸರಿಪಡಿಸುತ್ತೇವೆ. ನಿವಾಸಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಸೂಕ್ತ ಕ್ರಮ ಕೈಗೊಳ್ತೇವೆ. ಆದಷ್ಟು ಬೇಗ ರಾಜಕಾಲುವೆ ಕಾಮಗಾರಿ ಮುಗಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇವರಾಜೇಗೌಡ ಜೈಲಿಂದ ಹೊರಬಂದ ದಿನ ಸರ್ಕಾರ ಉರುಳೋದಾದರೆ ಅವರು ಅಲ್ಲೇ ಇರಲಿ: ಜಿ ಪರಮೇಶ್ವರ್, ಗೃಹ ಸಚಿವ

ಮಳೆಯಿಂದ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಲೇಔಟ್ ನಿರ್ಮಿಸಿ ಮೂಲಸೌಕರ್ಯ ಒದಗಿಸದವರಿಗೆ ನೋಟಿಸ್ ನೀಡಲಾಗಿದೆ. ಬಿಡಿಎ ಲೇಔಟ್​ಗಳ ಖಾಸಗೀಕರಣ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಬಿಬಿಎಂಪಿ ಮತ್ತು ಬಿಡಿಎಗೆ ಆದಾಯ ಬೇಕಲ್ವಾ. ವಿರೋಧ ಮಾಡೋರು ಮಾಡಲಿ, ಈ ಹಿಂದೆ ಅದೆಲ್ಲಾ ಆಗಿದೆ. ವ್ಯಾಪಾರಸ್ಥರು, ಅಂಗಡಿ ಮಾಲೀಕರಿಗೆ ಅಲ್ಟ್ರಾನೇಟಿವ್ ವ್ಯವಸ್ಥೆ ಮಾಡ್ತೇವೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ