AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್: ಬಿಲ್ಡರ್, ಒತ್ತುವರಿ ಮಾಡಿದವರಿಗೆ ಶಾಕ್ ಕೊಟ್ಟ ಡಿಸಿಎಂ

ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್​ ಇಂದು ಬೆಂಗಳೂರು ಸಿಟಿ ರೌಂಡ್ಸ್​ ಹಾಕಿದ್ದಾರೆ. ರಾಜಕಾಲುವೆ ಕಾಮಗಾರಿ ವೀಕ್ಷಣೆ ಮಾಡಿದ್ದು, ಆದಷ್ಟು ಬೇಗ ರಾಜಕಾಲುವೆ ಕಾಮಗಾರಿ ಮುಗಿಸುತ್ತೇವೆ ಎಂದು ಹೇಳಿದ್ದಾರೆ. ಖಾಸಗಿ ಬಿಲ್ಡರ್ಸ್ ಹಾಗೂ ಭೂ ಮಾಲೀಕರು ಒತ್ತುವರಿ ತೆರವು ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್: ಬಿಲ್ಡರ್, ಒತ್ತುವರಿ ಮಾಡಿದವರಿಗೆ ಶಾಕ್ ಕೊಟ್ಟ ಡಿಸಿಎಂ
ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್: ಬಿಲ್ಡರ್, ಒತ್ತುವರಿ ಮಾಡಿದವರಿಗೆ ಶಾಕ್ ಕೊಟ್ಟ ಡಿಸಿಎಂ
Anil Kalkere
| Edited By: |

Updated on: May 20, 2024 | 8:02 PM

Share

ಬೆಂಗಳೂರು, ಮೇ 20: ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಲಿದ ಹಿನ್ನೆಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಬೆಂಗಳೂರು ಸಿಟಿ ರೌಂಡ್ಸ್​ ಹಾಕಿದ್ದಾರೆ. ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಜೊತೆಗೆ ಕೆ.ಆರ್ ಪುರ ಸಮೀಪದ ಎನ್​ಜಿಎಫ್​​ ಬಳಿ ಸ್ಕೈಡೆಕ್ ಸ್ಥಳ ವೀಕ್ಷಣೆ ಮಾಡಿದ್ದು, ಯಾವುದೇ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ (Raja Kaluve Encroachment) ತೆರವು ಕಾರ್ಯಚರಣೆ ಮಾಡುತ್ತೇವೆ. ಖಾಸಗಿ ಬಿಲ್ಡರ್ಸ್ ಹಾಗೂ ಭೂ ಮಾಲೀಕರು ಒತ್ತುವರಿ ತೆರವು ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಮಳೆ ಹಿನ್ನೆಲೆ ರಾಜಕಾಲುವೆ ಸ್ವಚ್ಛತೆ ಕುರಿತು ಬಿಬಿಎಂಪಿ ಆಯುಕ್ತರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಪಕ್ಕದ ಸಾಯಿ ಲೇಔಟ್​ಗೆ ಮಳೆ ನೀರು ನುಗ್ಗುವ ಭೀತಿ ಹಿನ್ನೆಲೆ ಮಳೆ ನೀರು ರಾಜಕಾಲುವೆಗೆ ಕನೆಕ್ಟ್ ಮಾಡಲು ಸೂಚನೆ ನೀಡಿದ್ದಾರೆ. ಇದೇ ವೇಳೆ ಬಿಡಿಎ ಸೈಟ್​ಗಳಿಗೆ ದಾರಿ ಇಲ್ಲ ಅಂತಾ ಡಿ.ಕೆ.ಶಿವಕುಮಾರ್​ಗೆ ಬಿಡಿಎ ನಿವಾಸಿಗಳಿಂದ ದೂರು ನೀಡಿದ್ದಾರೆ.

ಇದನ್ನೂ ಓದಿ: ಮಧ್ಯವರ್ತಿಗಳಿಲ್ಲದೆ ಫಲಾನುಭವಿಗಳಿಗೆ ತಲುಪಿದ 5 ಗ್ಯಾರೆಂಟಿ: 1 ವರ್ಷದ ಸಾಧನೆ ಬಿಚ್ಚಿಟ್ಟ ಸಿದ್ದರಾಮಯ್ಯ

ಅಮೃತಹಳ್ಳಿಯ ರಾಚೇನಹಳ್ಳಿ ಸಮೀಪದಲ್ಲಿರುವ ಜವಹರಲಾಲ್ ನೆಹರು ಅಧ್ಯಯನ ಕೇಂದ್ರಕ್ಕೂ ಶಿವಕುಮಾರ್​ ಭೇಟಿ ನೀಡಿದ್ದು, ಪ್ರಗತಿ ಹಂತದಲ್ಲಿರುವ ಕಾಮಗಾರಿ ವೀಕ್ಷಣೆ ಮಾಡಿದ್ದಾರೆ.

ಆದಷ್ಟು ಬೇಗ ರಾಜಕಾಲುವೆ ಕಾಮಗಾರಿ ಮುಗಿಸುತ್ತೇವೆ ಎಂದ ಡಿ.ಕೆ.ಶಿವಕುಮಾರ್

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್​, ಬೆಂಗಳೂರಿನಲ್ಲಿ ಮಳೆಯಿಂದ ಹಾನಿಯಾಗಿಲ್ಲ, ಆದರೆ ನೀರು ನಿಂತಿದೆ. ಪ್ರೈವೇಟ್ ಲೇಔಟ್ ನಿರ್ಲಕ್ಷ್ಯದಿಂದ ಈ ರೀತಿ ಆಗಿದೆ, ಸರಿಪಡಿಸುತ್ತೇವೆ. ನಿವಾಸಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಸೂಕ್ತ ಕ್ರಮ ಕೈಗೊಳ್ತೇವೆ. ಆದಷ್ಟು ಬೇಗ ರಾಜಕಾಲುವೆ ಕಾಮಗಾರಿ ಮುಗಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇವರಾಜೇಗೌಡ ಜೈಲಿಂದ ಹೊರಬಂದ ದಿನ ಸರ್ಕಾರ ಉರುಳೋದಾದರೆ ಅವರು ಅಲ್ಲೇ ಇರಲಿ: ಜಿ ಪರಮೇಶ್ವರ್, ಗೃಹ ಸಚಿವ

ಮಳೆಯಿಂದ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಲೇಔಟ್ ನಿರ್ಮಿಸಿ ಮೂಲಸೌಕರ್ಯ ಒದಗಿಸದವರಿಗೆ ನೋಟಿಸ್ ನೀಡಲಾಗಿದೆ. ಬಿಡಿಎ ಲೇಔಟ್​ಗಳ ಖಾಸಗೀಕರಣ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಬಿಬಿಎಂಪಿ ಮತ್ತು ಬಿಡಿಎಗೆ ಆದಾಯ ಬೇಕಲ್ವಾ. ವಿರೋಧ ಮಾಡೋರು ಮಾಡಲಿ, ಈ ಹಿಂದೆ ಅದೆಲ್ಲಾ ಆಗಿದೆ. ವ್ಯಾಪಾರಸ್ಥರು, ಅಂಗಡಿ ಮಾಲೀಕರಿಗೆ ಅಲ್ಟ್ರಾನೇಟಿವ್ ವ್ಯವಸ್ಥೆ ಮಾಡ್ತೇವೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?