AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಡಿಕೆಶಿ ಡೆಡ್​​ಲೈನ್: ಇಲ್ಲದಿದ್ದರೆ ಸಸ್ಪೆಂಡ್​ ಫಿಕ್ಸ್​ ಎಂದ ಡಿಸಿಎಂ

ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಬಗ್ಗೆ ಟಿವಿ9 ಅಭಿಯಾನ ನಡೆಸಿತ್ತು. ಸದ್ಯ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್​​ ಬಿಬಿಎಂಪಿ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ಮಾಡಿದ್ದಾರೆ. 15 ದಿನದಲ್ಲಿ ರಸ್ತೆಗುಂಡಿ ಮುಚ್ಚಬೇಕು, ಇಲ್ಲಂದ್ರೆ ಸಸ್ಪೆಂಡ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಡಿಕೆಶಿ ಡೆಡ್​​ಲೈನ್: ಇಲ್ಲದಿದ್ದರೆ ಸಸ್ಪೆಂಡ್​ ಫಿಕ್ಸ್​ ಎಂದ ಡಿಸಿಎಂ
ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಡಿಕೆಶಿ ಡೆಡ್​​ಲೈನ್: ಇಲ್ಲದಿದ್ದರೆ ಸಸ್ಪೆಂಡ್​ ಫಿಕ್ಸ್​ ಎಂದ ಡಿಸಿಎಂ
Anil Kalkere
| Edited By: |

Updated on: Sep 08, 2024 | 4:47 PM

Share

ಬೆಂಗಳೂರು, ಸೆಪ್ಟೆಂಬರ್​ 08: ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಸಂಬಂಧ ಬಿಬಿಎಂಪಿ ಹಿರಿಯ ಅಧಿಕಾರಿಗಳ ಜೊತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​​ ಇಂದು ಸಭೆ ಮಾಡಿದ್ದಾರೆ. ಮಲ್ಲೇಶ್ವರದ ವೈಯಾಲಿಕಾವಲ್ ನ ಬಿಬಿಎಂಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಕಮಿಷನರ್ ತುಷಾರ್ ಗಿರಿನಾಥ್, ವಿಶೇಷ ಕಮಿಷನರ್ ಮುನಿಶ್ ಮೌದ್ಗೀಲ್, ಬಿಎಂಆರ್ಡಿಎ ಕಮಿಷನರ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ಧರು.

ಬೆಂಗಳೂರಿನಲ್ಲಿ ಸೆಪ್ಟೆಂಬರ್‌ನಲ್ಲಿ ಮಳೆ ಆಗುತ್ತೆ, ಎಚ್ಚರಿಕೆಯಿಂದ ಇರಿ. 15 ದಿನದಲ್ಲಿ ಎಲ್ಲಾ ರಸ್ತೆಗುಂಡಿ ಮುಚ್ಚಬೇಕು, ಇಲ್ಲದಿದ್ದರೆ ಆ್ಯಕ್ಷನ್​ ಗ್ಯಾರಂಟಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಯಾವುದೇ ದೂರು ಬರಬಾರದು. ದೂರು ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದು ಹೇಳಿದ್ದಾರೆ.

ಡಿಕೆ ಶಿವಕುಮಾರ್ ಟ್ವೀಟ್​

ಸೆಪ್ಟೆಂಬರ್‌ 15ರ ನಂತರ ಸಿಟಿ ರೌಂಡ್ಸ್‌

ಸೆಪ್ಟೆಂಬರ್‌ 15ರ ನಂತರ ಸಿಟಿ ರೌಂಡ್ಸ್‌ ಹಾಕುತ್ತೇನೆ. ಎಷ್ಟು ಅಧಿಕಾರಿಗಳು ಸಸ್ಪೆಂಡ್ ಆಗುತ್ತಾರೆಂದು ಗೊತ್ತಿಲ್ಲ. ನೀರು ನಿಂತುಕೊಳ್ಳುವ ಜಾಗಗಳ ಬಗ್ಗೆ ಗಮನ ಕೊಡಿ. ಅಪಾಯಕಾರಿ ಮರಗಳಿದ್ದರೆ ಕತ್ತರಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇನ್ನು ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಸ್ವಚ್ಛತೆ ಕಾಪಾಡುತ್ತೇವೆ ಎಂದು ಎಲ್ಲಾ ಶಾಲೆಗಳಲ್ಲಿ ಪ್ರತಿಜ್ಞೆ ಮಾಡಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು 15 ದಿನ ಗಡುವು: ಅಧಿಕಾರಿಗಳಿಗೆ ಡಿಕೆ ಶಿವಕುಮಾರ್​ ತಾಕೀತು

ಸಭೆ ಬಳಿಕ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್​, ನಾನು ಒಂದು ವಾರ ಇರಲ್ಲ, ಅಮೆರಿಕ ಪ್ರವಾಸ ಕೈಗೊಂಡಿದ್ದೇನೆ. ಅಮೆರಿಕದಲ್ಲಿ ಖಾಸಗಿ ಕಾರ್ಯಕ್ರಮವಿದೆ, ಯಾರನ್ನೂ ಭೇಟಿ ಆಗಲ್ಲ. ವಿಶೇಷ ಫ್ಯಾಮಿಲಿ ಟ್ರಿಪ್ ಇದು, ಕುಟುಂಬ ಸಮೇತ ಹೋಗುತ್ತಿದ್ದೇವೆ. ಸೆ.15 ವರೆಗೆ ರಸ್ತೆ ಗುಂಡಿ ಮುಚ್ಚಿ ಎಂದು ಎಚ್ಚರಿಕೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Anil Kalkere
Anil Kalkere
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?