ನಾನೇನು ತಪ್ಪು ಮಾಡಿಲ್ಲ, ಜಸ್ಟ್​ ಅಕೌಂಟಿಂಗ್​ನಲ್ಲಿ ತಪ್ಪಾಗಿದೆ ಎಂದ ಡಿಕೆಶಿ

ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ, ಆದ್ರೆ ಕೆಲ ಅಕೌಂಟಿಂಗ್ ವಿಚಾರದಲ್ಲಿ ಸ್ವಲ್ಪ ಮಿಸ್ಟೇಕ್ ಆಗಿದೆ ಅಷ್ಟೇ ಎಂದು ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಜಿ.ಪರಮೇಶ್ವರ್ ಬಳಿ ಅವಲತ್ತುಕೊಂಡಿದ್ದಾರೆ. ಕಳೆದ ವಾರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಆಗ ನಾನು ಯಾವುದೇ ತಪ್ಪು ಮಾಡಿಲ್ಲ, ಇಡಿ ಅಧಿಕಾರಿಗಳು ನನ್ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಕೆಲ ಅಕೌಂಟ್​ನಲ್ಲಿ ಮಾತ್ರ ಸ್ವಲ್ಪ ತಪ್ಪಾಗಿದೆ ಅಂತ ನನ್ನ ಬಳಿ ಡಿಕೆ ಶಿವಕುಮಾರ್ ಹೇಳಿದ್ರು ಎಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಮಾಜಿ […]

ನಾನೇನು ತಪ್ಪು ಮಾಡಿಲ್ಲ, ಜಸ್ಟ್​ ಅಕೌಂಟಿಂಗ್​ನಲ್ಲಿ ತಪ್ಪಾಗಿದೆ ಎಂದ ಡಿಕೆಶಿ
ಸಾಧು ಶ್ರೀನಾಥ್​

Updated on: Sep 19, 2019 | 2:46 PM

ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ, ಆದ್ರೆ ಕೆಲ ಅಕೌಂಟಿಂಗ್ ವಿಚಾರದಲ್ಲಿ ಸ್ವಲ್ಪ ಮಿಸ್ಟೇಕ್ ಆಗಿದೆ ಅಷ್ಟೇ ಎಂದು ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಜಿ.ಪರಮೇಶ್ವರ್ ಬಳಿ ಅವಲತ್ತುಕೊಂಡಿದ್ದಾರೆ.

ಕಳೆದ ವಾರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಆಗ ನಾನು ಯಾವುದೇ ತಪ್ಪು ಮಾಡಿಲ್ಲ, ಇಡಿ ಅಧಿಕಾರಿಗಳು ನನ್ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಕೆಲ ಅಕೌಂಟ್​ನಲ್ಲಿ ಮಾತ್ರ ಸ್ವಲ್ಪ ತಪ್ಪಾಗಿದೆ ಅಂತ ನನ್ನ ಬಳಿ ಡಿಕೆ ಶಿವಕುಮಾರ್ ಹೇಳಿದ್ರು ಎಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಮಾಜಿ ಡಿಸಿಎಂ ಪರಮೇಶ್ವರ್ ಹೇಳಿದರು.

ಸದ್ಯ ಕಾಂಗ್ರೆಸ್​ನ ಮಾಜಿ ಸಚಿವ ಡಿಕೆ ಶಿವಕುಮಾರ್ ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು ಆರ್​ಎಂಎಲ್​ ಆಸ್ಪತ್ರೆಯಿಂದ ನೇರವಾಗಿ ದೆಹಲಿಯ ತಿಹಾರ್ ಜೈಲಿಗೆ ಡಿಕೆಶಿಯನ್ನು ಶಿಫ್ಟ್​ ಮಾಡಲಾಗಿದೆ.

Published On - 2:20 pm, Thu, 19 September 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us