AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಲಾರ ಲಿಂಗೇಶ್ವರನಿಗೆ ಡಿ.ಕೆ. ಶಿವಕುಮಾರ್ ಕಾಣಿಕೆ.. ಬೆಳ್ಳಿ ಹೆಲಿಕಾಪ್ಟರ್ ಗಿಫ್ಟ್​! ಕಾರಣವೇನು ಗೊತ್ತಾ?

ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿರುವ ಸುಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಿಕುಮಾರ್​ ಭೇಟಿಕೊಟ್ಟರು. ಶಿವಕುಮಾರ್​ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಹ ಸಲ್ಲಿಸಿದರು.ಇದೇ ವೇಳೆ, ದೇಗುಲಕ್ಕೆ ಡಿ.ಕೆ.ಶಿವಕುಮಾರ್​ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡಿದರು.

ಮೈಲಾರ ಲಿಂಗೇಶ್ವರನಿಗೆ ಡಿ.ಕೆ. ಶಿವಕುಮಾರ್ ಕಾಣಿಕೆ.. ಬೆಳ್ಳಿ ಹೆಲಿಕಾಪ್ಟರ್ ಗಿಫ್ಟ್​! ಕಾರಣವೇನು ಗೊತ್ತಾ?
ಮೈಲಾರಲಿಂಗೇಶ್ವರನಿಗೆ ಕಾಣಿಕೆಯಾಗಿ ಬೆಳ್ಳಿ ಹೆಲಿಕಾಪ್ಟರ್ ಗಿಫ್ಟ್​ ನೀಡಿದ ಡಿಕೆಶಿ
KUSHAL V
| Edited By: ಸಾಧು ಶ್ರೀನಾಥ್​|

Updated on: Dec 18, 2020 | 12:07 PM

Share

ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿರುವ ಸುಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಿಕುಮಾರ್​ ಭೇಟಿ ಕೊಟ್ಟರು. ಶಿವಕುಮಾರ್​ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಹ ಸಲ್ಲಿಸಿದರು. ಇದೇ ವೇಳೆ, ದೇಗುಲಕ್ಕೆ ಡಿ.ಕೆ. ಶಿವಕುಮಾರ್​ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡಿದರು.

ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡಿದ್ದಕ್ಕೆ ಕಾರಣವೇನು? ಅಂದ ಹಾಗೆ, 2018ರಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮೈಲಾರಲಿಂಗೇಶ್ವರ ದೇವಸ್ಥಾನದ ಮೇಲೆ ಡಿ.ಕೆ. ಶಿವಕುಮಾರ್​ ಅವರ ಹೆಲಿಕಾಪ್ಟರ್ ಹಾದುಹೋಗಿತ್ತಂತೆ. ಹೀಗಾಗಿ, ಇದರಿಂದಲೇ, ದೇವರಿಗೆ ಅಪಚಾರ ಆಗಿತ್ತೆಂದು ಮತ್ತು ಡಿ.ಕೆ.ಶಿವಕುಮಾರ್​ಗೆ ಭಾರಿ ಸಮಸ್ಯೆಗಳು ಎದುರಾಗಿದ್ದವು ಎಂದು ಕೇಳಿಬಂದಿತ್ತು. ಹೀಗಾಗಿ, ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾಣಿಕೆ ನೀಡಿದರು. ಕಾರ್ಯಕರ್ತರು ಹಾಗೂ ದೇಗುಲದ ಗುರುಗಳ ಸಲಹೆ ಮೇರೆಗೆ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದರು.

ದೇವಸ್ಥಾನದ ಆವರಣದಲ್ಲಿ 5 ಬಾರಿ ದೀರ್ಘದಂಡ ನಮಸ್ಕಾರ ಹಾಕಿದ ಶಿವಕುಮಾರ್​ ಬಳಿಕ ರುದ್ರಸ್ನಾನದ ವಿಧಿ ನೆರವೇರಿಸಿ, ಪೂಜೆ ಸಲ್ಲಿಸಿದರು. ಮೈಲಾರಲಿಂಗೇಶ್ವರನಿಗೆ ಪೂಜೆ ಸಲ್ಲಿಸಿ ಬೆಳ್ಳಿಯ ಹೆಲಿಕ್ಯಾಪ್ಟರ್ ನೀಡಿ ಹರಕೆ ತೀರಿಸಿದರು. ಸುಮಾರು 1 ಕೆ.ಜಿ‌ ತೂಕದ ಬೆಳ್ಳಿಯಿಂದ ಮಾಡಿರುವ ಹೆಲಿಕಾಪ್ಟರ್​ನ ಶಿವಕುಮಾರ್​ ಕಾಣಿಕೆಯಾಗಿ ನೀಡಿದರು.

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ