AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ಜನರಿಗೆ ಪಕೋಡ ಮಾರಿ ಅಂತಾ ಹೇಳಿದ್ರು, ಈಗ ಎಣ್ಣೆ ಬೆಲೆನೂ ಜಾಸ್ತಿಯಾಗಿದೆ.. ಕೇಂದ್ರದ ವಿರುದ್ಧ ಡಿಕೆಶಿ ಆಕ್ರೋಶ

ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ತೈಲ ಬೆಲೆ ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಆದರೆ ಸರ್ಕಾರಿ, ಖಾಸಗಿ ನೌಕರರ ಸಂಬಳ ಹೆಚ್ಚಾಗಿದೆಯಾ? ಮನ್ರೇಗಾ ಯೋಜನೆಯಡಿ ನೀಡುವ ಕೂಲಿ ಹೆಚ್ಚಾಗಿದೆಯಾ?

ಯುವ ಜನರಿಗೆ ಪಕೋಡ ಮಾರಿ ಅಂತಾ ಹೇಳಿದ್ರು, ಈಗ ಎಣ್ಣೆ ಬೆಲೆನೂ ಜಾಸ್ತಿಯಾಗಿದೆ.. ಕೇಂದ್ರದ ವಿರುದ್ಧ ಡಿಕೆಶಿ ಆಕ್ರೋಶ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
TV9 Web
| Edited By: |

Updated on: Jun 13, 2021 | 1:41 PM

Share

ತುಮಕೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲೆ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್‌ನ ಪೆಟ್ರೋಲ್ ಬಂಕ್ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಧರಣಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಶಾಸಕ ಡಾ.ರಂಗನಾಥ್, ವೆಂಕಟರಮಣಪ್ಪ, ಮಾಜಿ ಸಚಿವ ರಾಜಣ್ಣ ಸೇರಿ ಹಲವರು ಭಾಗಿಯಾಗಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ತೈಲ ಬೆಲೆ ಸೇರಿದಂತೆ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಆದರೆ ಸರ್ಕಾರಿ, ಖಾಸಗಿ ನೌಕರರ ಸಂಬಳ ಹೆಚ್ಚಾಗಿದೆಯಾ? ಮನ್ರೇಗಾ ಯೋಜನೆಯಡಿ ನೀಡುವ ಕೂಲಿ ಹೆಚ್ಚಾಗಿದೆಯಾ? ತೈಲ ಬೆಲೆ ಏರಿಕೆಯಿಂದ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಅಡುಗೆ ಎಣ್ಣೆ, ಸಿಮೆಂಟ್, ಕಬ್ಬಿಣದ ಬೆಲೆ ಗಗನಕ್ಕೆ ಏರುತ್ತಿದೆ. ಕ್ರಿಮಿನಾಶಕಗಳು, ರಸಗೊಬ್ಬರಗಳ ಬೆಲೆಯೂ ಹೆಚ್ಚಾಗಿದೆ. ಈ ಸರ್ಕಾರ ಜನರಿಂದ ಪಿಕ್ ಪಾಕೆಟ್ ಮಾಡುತ್ತಿದೆ. ಹೀಗಾಗಿ ಬೆಲೆ ಏರಿಕೆ ವಿರೋಧಿಸಿ ಹೋರಾಟ ಮಾಡ್ತಿದ್ದೇವೆ ಎಂದು ಹೇಳಿದರು.

ಗ್ರಾಮೀಣ ಮಟ್ಟದಲ್ಲಿ ಹೋಬಳಿ ಮಟ್ಟದಲ್ಲಿ ಈ ಕಾರ್ಯಕ್ರಮ ಮುಂದುವರಿಯುತ್ತಿದೆ. ಸುಮಾರು 900 ಜಿಲ್ಲಾ ಪಂಚಾಯಿತಿ, ಹೋಬಳಿಗಳಲ್ಲಿ ಈ ಕಾರ್ಯಕ್ರಮ ನಡೀತಿದೆ. ನಾಳೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರತಿಭಟನೆ ನಡೆಯುತ್ತಿದೆ. ತೈಲ ಬೆಲೆ ಏರಿಕೆಯಾಗ್ತಾ ಇದೆ. ಯುವ ಜನರಿಗೆ ಪಕೋಡ ಮಾರಿ ಅಂತಾ ಹೇಳಿದ್ರು, ಈಗ ಆ ಎಣ್ಣೆ ಬೆಲೆನು ಜಾಸ್ತಿಯಾಗಿದೆ. ಇದರ ವಿರುದ್ಧ ಹೋರಾಟ ಮಾಡುತ್ತಿದ್ದೀವಿ. ಈ ಹೋರಾಟ ಕಾಂಗ್ರೆಸ್ ಪಾರ್ಟಿಯದಲ್ಲ. ಇದು ಸಾಮಾನ್ಯ ಜನರ ಹೋರಾಟ. 130 ಕೋಟಿ ಜನರ ಕಾರ್ಯಕ್ರಮ. ಅವರ ಧ್ವನಿಯಾಗಿ ಜನರ ಹಿತಕ್ಕಾಗಿ ಕಾರ್ಯಕ್ರಮ ಮಾಡ್ತಿದ್ದೀವಿ‌ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

DK Shivakumar

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಇದನ್ನೂ ಓದಿ: ಯಾವುದೇ ಕಾರಣಕ್ಕೂ ಶಾಲಾ ಶುಲ್ಕವನ್ನು ಕಡಿಮೆ ಮಾಡಲ್ಲ; ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್