ಇ.ಡಿ ಬುಲಾವ್, ಇಡೀ ಕುಟುಂಬ ದೆಹಲಿಗೆ ದೌಡು

ಬೆಂಗಳೂರು: ಡಿ.ಕೆ.ಶಿವಕುಮಾರ್ ಪತ್ನಿ, ತಾಯಿಗೆ ಇ.ಡಿ ಅಧಿಕಾರಿಗಳು ನೀಡಿರುವ ಸಮನ್ಸ್ ಸಂಬಂಧ ನಾಳೆ ದೆಹಲಿ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ಇದೆ. ಹಾಗಾಗಿ ಇಂದು ಸಂಜೆ ಡಿಕೆಶಿ ಕುಟುಂಬ ದೆಹಲಿಗೆ ತೆರಳಲಿದ್ದಾರೆ. ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಡಿಕೆಶಿ ಪತ್ನಿ ಉಷಾ ಮತ್ತು ತಾಯಿ ಗೌರಮ್ಮಗೆ ಇ.ಡಿ ಅಧಿಕಾರಿಗಳು ಬುಲಾವ್ ನೀಡಿದ್ದರು. ಆದ್ರೆ, ಅನಾರೋಗ್ಯದ ಕಾರಣ ಬೆಂಗಳೂರಿನಲ್ಲೇ ವಿಚಾರಣೆ ನಡೆಸಬೇಕೆಂದು ಡಿಕೆಶಿ ತಾಯಿ ದೆಹಲಿ ಹೈಕೋರ್ಟ್​ಗೆ ಅರ್ಜಿ […]

ಇ.ಡಿ ಬುಲಾವ್, ಇಡೀ ಕುಟುಂಬ ದೆಹಲಿಗೆ ದೌಡು
ಸಾಧು ಶ್ರೀನಾಥ್​

Updated on: Oct 29, 2019 | 1:29 PM

ಬೆಂಗಳೂರು: ಡಿ.ಕೆ.ಶಿವಕುಮಾರ್ ಪತ್ನಿ, ತಾಯಿಗೆ ಇ.ಡಿ ಅಧಿಕಾರಿಗಳು ನೀಡಿರುವ ಸಮನ್ಸ್ ಸಂಬಂಧ ನಾಳೆ ದೆಹಲಿ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ಇದೆ. ಹಾಗಾಗಿ ಇಂದು ಸಂಜೆ ಡಿಕೆಶಿ ಕುಟುಂಬ ದೆಹಲಿಗೆ ತೆರಳಲಿದ್ದಾರೆ.

ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಡಿಕೆಶಿ ಪತ್ನಿ ಉಷಾ ಮತ್ತು ತಾಯಿ ಗೌರಮ್ಮಗೆ ಇ.ಡಿ ಅಧಿಕಾರಿಗಳು ಬುಲಾವ್ ನೀಡಿದ್ದರು. ಆದ್ರೆ, ಅನಾರೋಗ್ಯದ ಕಾರಣ ಬೆಂಗಳೂರಿನಲ್ಲೇ ವಿಚಾರಣೆ ನಡೆಸಬೇಕೆಂದು ಡಿಕೆಶಿ ತಾಯಿ ದೆಹಲಿ ಹೈಕೋರ್ಟ್​ಗೆ ಅರ್ಜಿ ಹಾಕಿದ್ರು. ಹೀಗಾಗಿ ನಾಳೆ ದೆಹಲಿಯಲ್ಲಿ ಅರ್ಜಿ ವಿಚಾರಣೆ ಇರುವ ಕಾರಣ ಇಂದು ಸಂಜೆ ಡಿಕೆಶಿ ಕುಟುಂಬ ದೆಹಲಿಗೆ ತೆರಳಲಿದೆ.

ತಿಹಾರ್ ಜೈಲಿನಲ್ಲಿದ್ದ ಡಿ.ಕೆ.ಶಿವಕುಮಾರ್ 3 ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಬೆಂಗಳೂರಿಗೆ ವಾಪಸಾಗಿದ್ದಾರೆ. ಡಿಕೆಶಿ ಸೋದರ ಡಿ.ಕೆ.ಸುರೇಶ್ ಮತ್ತು ಪುತ್ರಿ ಐಶ್ವರ್ಯಾ ಅವರನ್ನು ಈಗಾಗಲೇ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಈಗ ಡಿಕೆಶಿ ಪತ್ನಿ ಮತ್ತು ತಾಯಿಯ ಸರದಿಯಾಗಿದೆ.

Published On - 1:10 pm, Tue, 29 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us