ಕುಟುಂಬ ಸಮೇತ ಶೃಂಗೇರಿಗೆ ಭೇಟಿ, ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತೋ ಸುಸ್ತು!

ಚಿಕ್ಕಮಗಳೂರು: ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರಬಂದ ಬಳಿಕ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಮುಂದುವರಿಸಿದ್ದಾರೆ. ಈಗಾಗಲೇ ಹಲವು ದೇವಾಲಯಗಳಿಗೆ ಭೇಟಿ ನೀಡಿರುವ ಡಿಕೆಶಿ ಇಂದು ಕುಟುಂಬ ಸಮೇತರಾಗಿ ಶೃಂಗೇರಿಗೆ ಭೇಟಿ ನೀಡಿದ್ದಾರೆ. ಶೃಂಗೇರಿ ಶಾರದಾಂಬೆ ದೇಗುಲಕ್ಕೆ ಪತ್ನಿ ಉಷಾ ಮತ್ತು ಪುತ್ರಿ ಐಶ್ವರ್ಯಾ ಜೊತೆ ತೆರಳಿ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಕುಟುಂಬಸ್ಥರು ಶಾರದಾಂಬೆ ದೇವಾಲಯದ ಪ್ರದಕ್ಷಿಣೆ ವೇಳೆ ಅಲ್ಲಿದ್ದ ಜನರು ಸೆಲ್ಫಿಗೆ ಮುಗಿಬಿದ್ದಿದ್ದಾರೆ. ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತು! ಸರ್ […]

ಕುಟುಂಬ ಸಮೇತ ಶೃಂಗೇರಿಗೆ ಭೇಟಿ, ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತೋ ಸುಸ್ತು!
ಸಾಧು ಶ್ರೀನಾಥ್​

Updated on: Nov 19, 2019 | 5:33 PM

ಚಿಕ್ಕಮಗಳೂರು: ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರಬಂದ ಬಳಿಕ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಮುಂದುವರಿಸಿದ್ದಾರೆ. ಈಗಾಗಲೇ ಹಲವು ದೇವಾಲಯಗಳಿಗೆ ಭೇಟಿ ನೀಡಿರುವ ಡಿಕೆಶಿ ಇಂದು ಕುಟುಂಬ ಸಮೇತರಾಗಿ ಶೃಂಗೇರಿಗೆ ಭೇಟಿ ನೀಡಿದ್ದಾರೆ.

ಶೃಂಗೇರಿ ಶಾರದಾಂಬೆ ದೇಗುಲಕ್ಕೆ ಪತ್ನಿ ಉಷಾ ಮತ್ತು ಪುತ್ರಿ ಐಶ್ವರ್ಯಾ ಜೊತೆ ತೆರಳಿ ಡಿ.ಕೆ.ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಕುಟುಂಬಸ್ಥರು ಶಾರದಾಂಬೆ ದೇವಾಲಯದ ಪ್ರದಕ್ಷಿಣೆ ವೇಳೆ ಅಲ್ಲಿದ್ದ ಜನರು ಸೆಲ್ಫಿಗೆ ಮುಗಿಬಿದ್ದಿದ್ದಾರೆ.

ಭಕ್ತರ ಸೆಲ್ಫಿಗೆ ಡಿಕೆಶಿ ಸುಸ್ತು!
ಸರ್ ನಂಗೊಂದು ಸೆಲ್ಫಿ, ನಂಗೊಂದು ಸೆಲ್ಫಿ ಅಂತ ಡಿ.ಕೆ.ಶಿವಕುಮಾರ್ ಹಿಂದೆ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಕೊನೆಗೆ ಎಲ್ಲರಿಗೂ ಸೆಲ್ಫಿ ತೆಗೆದುಕೊಳ್ಳಲು ಡಿಕೆಶಿ ಅವಕಾಶ ಮಾಡಿಕೊಟ್ಟಿದ್ದಾರೆ. ಇದೇ ವೇಳೆ ಡಿಕೆಶಿ ಕುಟುಂಬಕ್ಕೆ ಸ್ಥಳೀಯ ಶಾಸಕ ರಾಜೇಗೌಡ ಸಾಥ್ ನೀಡಿದ್ದಾರೆ.

Published On - 4:48 pm, Tue, 19 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us