AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಥಳಿಸಿದ ಡಿ.ಕೆ.ಶಿವಕುಮಾರ್

ಡಿ.ಕೆ.ಶಿವಕುಮಾರ್ ಈ ವರ್ತನೆಗೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಧಾನ ತಂದಿದೆ. ಈ ಹಿಂದೆ ಸೆಲ್ಫಿಗೆ ಬರುವ ಕಾರ್ಯಕರ್ತರಿಗೂ ಡಿ.ಕೆ.ಶಿವಕುಮಾರ್ ಬಾರಿಸಿದ್ದರು. ಮೊಬೈಲ್​ನಲ್ಲಿ ವಿಡಿಯೋ ಮಾಡ್ತಿರುವುದನ್ನು ನೋಡಿ ಹೆಗಲ ಮೇಲೆ ಕೈ ಹಾಕ್ತಿಯಾ, ಕಾಮನ್ಸೆನ್ಸ್ ಇಲ್ವಾ ಅಂತ ಡಿಕೆಶಿ ಗದರಿದರು.

ಪಕ್ಕದಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಥಳಿಸಿದ ಡಿ.ಕೆ.ಶಿವಕುಮಾರ್
ಕಾರ್ಯಕರ್ತನ ತಲೆಗೆ ಹೊಡೆದ ಡಿ.ಕೆ.ಶಿವಕುಮಾರ್
TV9 Web
| Edited By: |

Updated on:Jul 10, 2021 | 9:30 AM

Share

ಮಂಡ್ಯ: ಪಕ್ಕದಲ್ಲಿ ಬಂದು ನಿಂತ ಕಾಂಗ್ರೆಸ್ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಥಳಿಸಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ನಡೆದಿದೆ. ಜಿ.ಮಾದೇಗೌಡರ ಆರೋಗ್ಯ ವಿಚಾರಿಸಲು ಡಿ.ಕೆ.ಶಿವಕುಮಾರ್ ಕೆ.ಎಂ.ದೊಡ್ಡಿಗೆ ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತ ಹಿಂಭಾಗ ಬರುತ್ತಿದ್ದ. ಅಲ್ಲದೇ ಹಿಂಭಾಗದಿಂದ ಬಂದು ಶಿವಕುಮಾರ್ ಹೆಗಲ ಮೇಲೆ ಕೈ ಹಾಕಿದ ಆರೋಪ ಕೇಳಿಬಂದಿದ್ದು, ಕಾರ್ಯಕರ್ತನ ತಲೆ ಮೇಲೆ ಪಟಾರ್ ಅಂತ ಡಿಕೆಶಿ ಬಾರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಕೊಟ್ಟ ಏಟಿಗೆ ಕಾರ್ಯಕರ್ತರು ತಬ್ಬಿಬ್ಬಾಗಿದ್ದಾರೆ.

ಡಿ.ಕೆ.ಶಿವಕುಮಾರ್ ಈ ವರ್ತನೆಗೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಧಾನ ತಂದಿದೆ. ಈ ಹಿಂದೆ ಸೆಲ್ಫಿಗೆ ಬರುವ ಕಾರ್ಯಕರ್ತರಿಗೂ ಡಿ.ಕೆ.ಶಿವಕುಮಾರ್ ಬಾರಿಸಿದ್ದರು. ಮೊಬೈಲ್​ನಲ್ಲಿ ವಿಡಿಯೋ ಮಾಡ್ತಿರುವುದನ್ನು ನೋಡಿ ಹೆಗಲ ಮೇಲೆ ಕೈ ಹಾಕ್ತಿಯಾ, ಕಾಮನ್ಸೆನ್ಸ್ ಇಲ್ವಾ ಅಂತ ಡಿಕೆಶಿ ಗದರಿದರು.

ಒದ್ದು ಹೊರಗೆ ಹಾಕುವೆ ಎಂದಿದ್ದ ಡಿಕೆಶಿ ಜೂನ್ 12 ರಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಡಿ.ಕೆ.ಶಿವಕುಮಾರ್ ಗರಂ ಆಗಿದ್ದರು. ನಾನು ಮಾತಾಡುವಾಗ ಮಧ್ಯ ಮಾತಾಡಿದರೆ ಒದ್ದು ಹೊರಗೆ ಹಾಕುವೆ. ನಾನು ಕತ್ತೆ ಕಾಯೋಕೆ ಇಲ್ಲಿಗೆ ಬಂದಿಲ್ಲವೆಂದು ಡಿಕೆಶಿ ಆಕ್ರೋಶ ಹೊರಹಾಕಿ, ಕಾರ್ಯಕರ್ತರಿಗೆ ಶಿಸ್ತು ಕಲಿಸಿ ಎಂದು ಜಿಲ್ಲಾಧ್ಯಕ್ಷ ತಾಜ್ ಪೀರ್ಗೆ ಸೂಚನೆ ನೀಡಿದ್ದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಮಾತನಾಡುವಾಗ ಕಾಂಗ್ರೆಸ್ ಕಾರ್ಯಕರ್ತರು ಮಧ್ಯದಲ್ಲಿ ಮಾತನಾಡಿದ್ದರು. ಇದಕ್ಕೆ ಸಿಟ್ಟಾದ ಡಿಕೆಶಿ ಕಾರ್ಯಕರ್ತರ ವಿರುದ್ಧ ಗರಂ ಆಗಿದ್ದರು.

ಇದನ್ನೂ ಓದಿ

ನಾನು ಮಾತಾಡುವಾಗ ಮಧ್ಯ ಮಾತಾಡಿದ್ರೆ ಒದ್ದು ಹೊರಹಾಕುವೆ; ಡಿ.ಕೆ.ಶಿವಕುಮಾರ್ ಗರಂ

ಪಾಕಿಸ್ತಾನದ ಶಾದಾಬ್ ಖಾನ್ ಭಾರತದ ಹಾರ್ದಿಕ್ ಪಾಂಡ್ಯರಂಥ ಪ್ರೊಫೈಲ್ ಹೊಂದಿರಬೇಕು: ರಮೀಜ್ ರಾಜಾ

(DK Shivakumar hits a Congress worker head in mandya)

Published On - 8:46 am, Sat, 10 July 21

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್