AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಥಳಿಸಿದ ಡಿ.ಕೆ.ಶಿವಕುಮಾರ್

ಡಿ.ಕೆ.ಶಿವಕುಮಾರ್ ಈ ವರ್ತನೆಗೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಧಾನ ತಂದಿದೆ. ಈ ಹಿಂದೆ ಸೆಲ್ಫಿಗೆ ಬರುವ ಕಾರ್ಯಕರ್ತರಿಗೂ ಡಿ.ಕೆ.ಶಿವಕುಮಾರ್ ಬಾರಿಸಿದ್ದರು. ಮೊಬೈಲ್​ನಲ್ಲಿ ವಿಡಿಯೋ ಮಾಡ್ತಿರುವುದನ್ನು ನೋಡಿ ಹೆಗಲ ಮೇಲೆ ಕೈ ಹಾಕ್ತಿಯಾ, ಕಾಮನ್ಸೆನ್ಸ್ ಇಲ್ವಾ ಅಂತ ಡಿಕೆಶಿ ಗದರಿದರು.

ಪಕ್ಕದಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಥಳಿಸಿದ ಡಿ.ಕೆ.ಶಿವಕುಮಾರ್
ಕಾರ್ಯಕರ್ತನ ತಲೆಗೆ ಹೊಡೆದ ಡಿ.ಕೆ.ಶಿವಕುಮಾರ್
TV9 Web
| Edited By: |

Updated on:Jul 10, 2021 | 9:30 AM

Share

ಮಂಡ್ಯ: ಪಕ್ಕದಲ್ಲಿ ಬಂದು ನಿಂತ ಕಾಂಗ್ರೆಸ್ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಥಳಿಸಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ನಡೆದಿದೆ. ಜಿ.ಮಾದೇಗೌಡರ ಆರೋಗ್ಯ ವಿಚಾರಿಸಲು ಡಿ.ಕೆ.ಶಿವಕುಮಾರ್ ಕೆ.ಎಂ.ದೊಡ್ಡಿಗೆ ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತ ಹಿಂಭಾಗ ಬರುತ್ತಿದ್ದ. ಅಲ್ಲದೇ ಹಿಂಭಾಗದಿಂದ ಬಂದು ಶಿವಕುಮಾರ್ ಹೆಗಲ ಮೇಲೆ ಕೈ ಹಾಕಿದ ಆರೋಪ ಕೇಳಿಬಂದಿದ್ದು, ಕಾರ್ಯಕರ್ತನ ತಲೆ ಮೇಲೆ ಪಟಾರ್ ಅಂತ ಡಿಕೆಶಿ ಬಾರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಕೊಟ್ಟ ಏಟಿಗೆ ಕಾರ್ಯಕರ್ತರು ತಬ್ಬಿಬ್ಬಾಗಿದ್ದಾರೆ.

ಡಿ.ಕೆ.ಶಿವಕುಮಾರ್ ಈ ವರ್ತನೆಗೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಧಾನ ತಂದಿದೆ. ಈ ಹಿಂದೆ ಸೆಲ್ಫಿಗೆ ಬರುವ ಕಾರ್ಯಕರ್ತರಿಗೂ ಡಿ.ಕೆ.ಶಿವಕುಮಾರ್ ಬಾರಿಸಿದ್ದರು. ಮೊಬೈಲ್​ನಲ್ಲಿ ವಿಡಿಯೋ ಮಾಡ್ತಿರುವುದನ್ನು ನೋಡಿ ಹೆಗಲ ಮೇಲೆ ಕೈ ಹಾಕ್ತಿಯಾ, ಕಾಮನ್ಸೆನ್ಸ್ ಇಲ್ವಾ ಅಂತ ಡಿಕೆಶಿ ಗದರಿದರು.

ಒದ್ದು ಹೊರಗೆ ಹಾಕುವೆ ಎಂದಿದ್ದ ಡಿಕೆಶಿ ಜೂನ್ 12 ರಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಡಿ.ಕೆ.ಶಿವಕುಮಾರ್ ಗರಂ ಆಗಿದ್ದರು. ನಾನು ಮಾತಾಡುವಾಗ ಮಧ್ಯ ಮಾತಾಡಿದರೆ ಒದ್ದು ಹೊರಗೆ ಹಾಕುವೆ. ನಾನು ಕತ್ತೆ ಕಾಯೋಕೆ ಇಲ್ಲಿಗೆ ಬಂದಿಲ್ಲವೆಂದು ಡಿಕೆಶಿ ಆಕ್ರೋಶ ಹೊರಹಾಕಿ, ಕಾರ್ಯಕರ್ತರಿಗೆ ಶಿಸ್ತು ಕಲಿಸಿ ಎಂದು ಜಿಲ್ಲಾಧ್ಯಕ್ಷ ತಾಜ್ ಪೀರ್ಗೆ ಸೂಚನೆ ನೀಡಿದ್ದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ಮಾತನಾಡುವಾಗ ಕಾಂಗ್ರೆಸ್ ಕಾರ್ಯಕರ್ತರು ಮಧ್ಯದಲ್ಲಿ ಮಾತನಾಡಿದ್ದರು. ಇದಕ್ಕೆ ಸಿಟ್ಟಾದ ಡಿಕೆಶಿ ಕಾರ್ಯಕರ್ತರ ವಿರುದ್ಧ ಗರಂ ಆಗಿದ್ದರು.

ಇದನ್ನೂ ಓದಿ

ನಾನು ಮಾತಾಡುವಾಗ ಮಧ್ಯ ಮಾತಾಡಿದ್ರೆ ಒದ್ದು ಹೊರಹಾಕುವೆ; ಡಿ.ಕೆ.ಶಿವಕುಮಾರ್ ಗರಂ

ಪಾಕಿಸ್ತಾನದ ಶಾದಾಬ್ ಖಾನ್ ಭಾರತದ ಹಾರ್ದಿಕ್ ಪಾಂಡ್ಯರಂಥ ಪ್ರೊಫೈಲ್ ಹೊಂದಿರಬೇಕು: ರಮೀಜ್ ರಾಜಾ

(DK Shivakumar hits a Congress worker head in mandya)

Published On - 8:46 am, Sat, 10 July 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ