ಡಿಕೆ ಶಿವಕುಮಾರ್​ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್:​ ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್​

| Updated By: ವಿವೇಕ ಬಿರಾದಾರ

Updated on: Sep 17, 2024 | 1:29 PM

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪ್ರತಿವಾದಿಗಳಿಗೆ ನೋಟಿಸ್​ ನೀಡಿ ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ.

ಡಿಕೆ ಶಿವಕುಮಾರ್​ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್:​ ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್​
ಡಿಕೆ ಶಿವಕುಮಾರ್​
Follow us on

ನವದೆಹಲಿ/ಬೆಂಗಳೂರು, ಸೆಪ್ಟೆಂಬರ್​ 17: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda Patil Yatnal)​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪ್ರತಿವಾದಿಗಳಿಗೆ ನೋಟಿಸ್​ ನೀಡಿದೆ. ಡಿಸಿಎಂ ಡಿಕೆ ಶಿವಕುಮಾರ್​‌, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಗೆ ನೋಟಿಸ್​ ನೀಡಿ ಸುಪ್ರೀಂಕೋರ್ಟ್ (Supreme Court)​​ ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಆಗಸ್ಟ್ 29 ರಂದು ಹೈಕೋರ್ಟ್ ತಿರಸ್ಕರಿಸಿತ್ತು.

ಇದನ್ನೂ ಓದಿ: ಸಿಎಂ ಆಗುವ ಉದ್ದೇಶದಿಂದಲೇ ರಾಹುಲ್ ಗಾಂಧಿಯನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ: ಪ್ರಲ್ಹಾದ್​ ಜೋಶಿ

ವಿಚಾರಣೆಯ ಬಳಿಕ ಅರ್ಜಿಯನ್ನು ವಜಾ ಮಾಡಿದ್ದ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂಕೋರ್ಟ್‌ ತೀರ್ಮಾನಿಸಲಿ ಎಂದು ಅಭಿಪ್ರಾಯಪಟ್ಟಿತ್ತು. ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್‌ ಪೀಠ ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ಹಿನ್ನಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅವರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಸುಪ್ರೀಂಕೋರ್ಟ್ ​ಇಂದು ಅರ್ಜಿ ವಿಚಾರಣೆ ನಡೆಸಿತು. ಪ್ರಕರಣಕ್ಕೆ ಪ್ರತಿವಾದ ಮಂಡಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​, ಕರ್ನಾಟಕ ಸರ್ಕಾರ ಮತ್ತು ಲೋಕಾಯುಕ್ತಕ್ಕೆ ನೋಟಿಸ್​ ಜಾರಿ ಮಾಡಿ, ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:19 pm, Tue, 17 September 24