AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಮುಖ್ಯಮಂತ್ರಿ ಯಡಿಯೂರಪ್ಪಗೆ ಮಗಳ ಮದುವೆಯ ಆಹ್ವಾನ ನೀಡಿದ ಡಿ.ಕೆ. ಶಿವಕುಮಾರ್

KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖ್ಯ ಮಂತ್ರಿ ಬಿ.ಎಸ್‌. ಯಡಿಯೂರಪ್ಪರನ್ನು ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಭೇಟಿಯಾಗಿ ಪುತ್ರಿ ಐಶ್ವರ್ಯಾ ವಿವಾಹಕ್ಕೆ ಆಮಂತ್ರಣ ನೀಡಿದ್ದಾರೆ.

DK Shivakumar: ಮುಖ್ಯಮಂತ್ರಿ ಯಡಿಯೂರಪ್ಪಗೆ ಮಗಳ ಮದುವೆಯ ಆಹ್ವಾನ ನೀಡಿದ ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಮದುವೆ ಆಮಂತ್ರಣ
ಆಯೇಷಾ ಬಾನು
|

Updated on:Feb 04, 2021 | 2:41 PM

Share

ಬೆಂಗಳೂರು:  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಮದುವೆಯ ದಿನಾಂಕ ಫಿಕ್ಸ್ ಆಗಿದೆ. ಈ ಹಿನ್ನೆಲೆಯಲ್ಲಿ ಅಸೆಂಬ್ಲಿ ಕಲಾಪದ ನಡುವೆಯೂ ಡಿಕೆಶಿ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪರನ್ನು ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಭೇಟಿಯಾಗಿ ಪುತ್ರಿಯ ವಿವಾಹಕ್ಕೆ ಆಮಂತ್ರಣ ನೀಡಿದ್ದಾರೆ. ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾಗೂ ಮತ್ತು ಕಾಫಿ ಡೇ ಸ್ಥಾಪಕ ದಿ. ವಿ.ಜಿ. ಸಿದ್ದಾರ್ಥ್​ರ ಪುತ್ರ ಅಮರ್ಥ್ಯಗೂ ಕಂಕಣ ಭಾಗ್ಯ ಕೂಡಿ ಬಂದಿದ್ದು ಇದೇ ತಿಂಗಳ ಬುಧವಾರ 17ರಂದು ಬೆಂಗಳೂರಿನ ಪ್ರೆಸ್ಟೀಜ್ ಗಾಲ್ಫ್​ ಶೈರ್​ನಲ್ಲಿ ಮದುವೆ ಆರತಕ್ಷತೆ ನಿಶ್ಚಯವಾಗಿದೆ.

ಒಂದು ಕಡೆ ಕಲಾಪ ನಡೆಯುತ್ತಿದ್ದು ಮತ್ತೊಂದು ಕಡೆ ಡಿ.ಕೆ. ಶಿವಕುಮಾರ್ ಮಗಳ ಮದುವೆ ಓಡಾಟದಲ್ಲಿ ಬಿಜಿಯಾಗಿದ್ದಾರೆ. ಸ್ನೇಹಿತರಿಗೆ, ಗಣ್ಯರಿಗೆ ಆಮಂತ್ರಣ ನೀಡಿ ಮಗಳ ಮದುವೆಗೆ ಕರೆಯುತ್ತಿದ್ದಾರೆ. ಈ ವೇಳೆ ಇಂದು ಸಿಎಂ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಬಿ.ಎಸ್‌. ಯಡಿಯೂರಪ್ಪರನ್ನು ಮಗಳ ಮದುವೆಗೆ ಆಮಂತ್ರಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫೀ ಡೇ ಮಾಲೀಕ ದಿ.ಸಿದ್ದಾರ್ಥ್ ಹೆಗ್ಡೆ ಪುತ್ರ ಅಮರ್ತ್ಯ ಹೆಗ್ಡೆ ಅವರ ನಿಶ್ಚಿತಾರ್ಥ ಕಳೆದ ವರ್ಷ ನವೆಂಬರ್ 19 ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ತಾಜ್​ ಹೋಟೆಲ್​ನಲ್ಲಿ ನೆರವೇರಿತ್ತು.

Photo Album ಡಿಕೆಶಿ ಪುತ್ರಿ ಐಶ್ವರ್ಯಾ, ಅಮರ್ತ್ಯ ನಿಶ್ಚಿತಾರ್ಥದ ಒಂದು ಝಲಕ್!

Published On - 12:25 pm, Thu, 4 February 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ