AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಮುಖ್ಯಮಂತ್ರಿ ಯಡಿಯೂರಪ್ಪಗೆ ಮಗಳ ಮದುವೆಯ ಆಹ್ವಾನ ನೀಡಿದ ಡಿ.ಕೆ. ಶಿವಕುಮಾರ್

KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖ್ಯ ಮಂತ್ರಿ ಬಿ.ಎಸ್‌. ಯಡಿಯೂರಪ್ಪರನ್ನು ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಭೇಟಿಯಾಗಿ ಪುತ್ರಿ ಐಶ್ವರ್ಯಾ ವಿವಾಹಕ್ಕೆ ಆಮಂತ್ರಣ ನೀಡಿದ್ದಾರೆ.

DK Shivakumar: ಮುಖ್ಯಮಂತ್ರಿ ಯಡಿಯೂರಪ್ಪಗೆ ಮಗಳ ಮದುವೆಯ ಆಹ್ವಾನ ನೀಡಿದ ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಮದುವೆ ಆಮಂತ್ರಣ
ಆಯೇಷಾ ಬಾನು
ಆಯೇಷಾ ಬಾನು|

Updated on:Feb 04, 2021 | 2:41 PM

Share

ಬೆಂಗಳೂರು:  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಮದುವೆಯ ದಿನಾಂಕ ಫಿಕ್ಸ್ ಆಗಿದೆ. ಈ ಹಿನ್ನೆಲೆಯಲ್ಲಿ ಅಸೆಂಬ್ಲಿ ಕಲಾಪದ ನಡುವೆಯೂ ಡಿಕೆಶಿ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪರನ್ನು ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಭೇಟಿಯಾಗಿ ಪುತ್ರಿಯ ವಿವಾಹಕ್ಕೆ ಆಮಂತ್ರಣ ನೀಡಿದ್ದಾರೆ. ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾಗೂ ಮತ್ತು ಕಾಫಿ ಡೇ ಸ್ಥಾಪಕ ದಿ. ವಿ.ಜಿ. ಸಿದ್ದಾರ್ಥ್​ರ ಪುತ್ರ ಅಮರ್ಥ್ಯಗೂ ಕಂಕಣ ಭಾಗ್ಯ ಕೂಡಿ ಬಂದಿದ್ದು ಇದೇ ತಿಂಗಳ ಬುಧವಾರ 17ರಂದು ಬೆಂಗಳೂರಿನ ಪ್ರೆಸ್ಟೀಜ್ ಗಾಲ್ಫ್​ ಶೈರ್​ನಲ್ಲಿ ಮದುವೆ ಆರತಕ್ಷತೆ ನಿಶ್ಚಯವಾಗಿದೆ.

ಒಂದು ಕಡೆ ಕಲಾಪ ನಡೆಯುತ್ತಿದ್ದು ಮತ್ತೊಂದು ಕಡೆ ಡಿ.ಕೆ. ಶಿವಕುಮಾರ್ ಮಗಳ ಮದುವೆ ಓಡಾಟದಲ್ಲಿ ಬಿಜಿಯಾಗಿದ್ದಾರೆ. ಸ್ನೇಹಿತರಿಗೆ, ಗಣ್ಯರಿಗೆ ಆಮಂತ್ರಣ ನೀಡಿ ಮಗಳ ಮದುವೆಗೆ ಕರೆಯುತ್ತಿದ್ದಾರೆ. ಈ ವೇಳೆ ಇಂದು ಸಿಎಂ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಬಿ.ಎಸ್‌. ಯಡಿಯೂರಪ್ಪರನ್ನು ಮಗಳ ಮದುವೆಗೆ ಆಮಂತ್ರಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫೀ ಡೇ ಮಾಲೀಕ ದಿ.ಸಿದ್ದಾರ್ಥ್ ಹೆಗ್ಡೆ ಪುತ್ರ ಅಮರ್ತ್ಯ ಹೆಗ್ಡೆ ಅವರ ನಿಶ್ಚಿತಾರ್ಥ ಕಳೆದ ವರ್ಷ ನವೆಂಬರ್ 19 ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ತಾಜ್​ ಹೋಟೆಲ್​ನಲ್ಲಿ ನೆರವೇರಿತ್ತು.

Photo Album ಡಿಕೆಶಿ ಪುತ್ರಿ ಐಶ್ವರ್ಯಾ, ಅಮರ್ತ್ಯ ನಿಶ್ಚಿತಾರ್ಥದ ಒಂದು ಝಲಕ್!

Published On - 12:25 pm, Thu, 4 February 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?