‘ತೇಜಸ್ವಿ ಪಂಕ್ಚರ್ ಹೇಳಿಕೆ’ಗೆ ಡಿಕೆ ಶಿವಕುಮಾರ್ ಏನಂದ್ರು ಗೊತ್ತಾ?

ರಾಮನಗರ: ಎದೆ ಸೀಳಿದರೆ ಎರಡಕ್ಷರ ಬಾರದವರು, ಪಂಕ್ಚರ್ ಹಾಕೋರು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧವಾಗಿ ಪ್ರತಿಭಟನೆ ಮಾಡುತ್ತಿದ್ದಾರೆಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನೀವು ಬಡವರಿಗೆ ವಿದ್ಯಾಭ್ಯಾಸ ಕೊಡಿ, ಉದ್ಯೋಗ ಕೊಡಿ ಸ್ವಾಮಿ. ಅವರು ಯಾಕೆ ಪಂಕ್ಚರ್ ಹಾಕ್ತಾರೆ, ಕಸ ಗುಡಿಸ್ತಾರೆ ಎಂದು ತೇಜಸ್ವಿ ವಿರುದ್ಧ ಡಿಕೆಶಿ ಚಾಟಿ ಬೀಸಿದ್ದಾರೆ. ಅವರು ಕಸ ಗುಡಿಸದಿದ್ದರೆ ನೀವು ಇರಲು ಸಾಧ್ಯನಾ? ಅವರೇ ಇಂದು ಸ್ವಚ್ಛ ಭಾರತ ಮಾಡ್ತಿರೋದು ಎಂದು […]

‘ತೇಜಸ್ವಿ ಪಂಕ್ಚರ್ ಹೇಳಿಕೆ’ಗೆ ಡಿಕೆ ಶಿವಕುಮಾರ್ ಏನಂದ್ರು ಗೊತ್ತಾ?
ಸಾಧು ಶ್ರೀನಾಥ್​

Updated on: Dec 23, 2019 | 4:59 PM

ರಾಮನಗರ: ಎದೆ ಸೀಳಿದರೆ ಎರಡಕ್ಷರ ಬಾರದವರು, ಪಂಕ್ಚರ್ ಹಾಕೋರು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧವಾಗಿ ಪ್ರತಿಭಟನೆ ಮಾಡುತ್ತಿದ್ದಾರೆಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಕಾಂಗ್ರೆಸ್​ನ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನೀವು ಬಡವರಿಗೆ ವಿದ್ಯಾಭ್ಯಾಸ ಕೊಡಿ, ಉದ್ಯೋಗ ಕೊಡಿ ಸ್ವಾಮಿ. ಅವರು ಯಾಕೆ ಪಂಕ್ಚರ್ ಹಾಕ್ತಾರೆ, ಕಸ ಗುಡಿಸ್ತಾರೆ ಎಂದು ತೇಜಸ್ವಿ ವಿರುದ್ಧ ಡಿಕೆಶಿ ಚಾಟಿ ಬೀಸಿದ್ದಾರೆ.

ಅವರು ಕಸ ಗುಡಿಸದಿದ್ದರೆ ನೀವು ಇರಲು ಸಾಧ್ಯನಾ? ಅವರೇ ಇಂದು ಸ್ವಚ್ಛ ಭಾರತ ಮಾಡ್ತಿರೋದು ಎಂದು ಕನಕಪುರದ ಮಿನಿ ವಿಧಾನಸೌಧದ ಆವರಣದಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಡಿಕೆಶಿ ತಿರುಗೇಟು ನೀಡಿದ್ದಾರೆ.

Published On - 2:11 pm, Mon, 23 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us