AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕಿ ಸಿಗದಿದ್ದರೆ ಹಣ ನೀಡಿ ಎಂದು ಬಿಜೆಪಿಯವರೇ ಹೇಳಿದ್ದರು; ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

5 ಕೆಜಿ ಸೇರಿ 10 ಕೆಜಿ ಅಕ್ಕಿ ಕೊಡುವುದಾಗಿ ಮಾತು ಕೊಟ್ಟಿದ್ದೆವು. ಕೊಟ್ಟ ಮಾತು ಉಳಿಸಿಕೊಳ್ಳಲು ಜನರ ಖಾತೆಗೆ ಹಣ ವರ್ಗಾವಣೆ ಮಾಡಲು ಮುಂದಾಗಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಅಕ್ಕಿ ಸಿಗದಿದ್ದರೆ ಹಣ ನೀಡಿ ಎಂದು ಬಿಜೆಪಿಯವರೇ ಹೇಳಿದ್ದರು; ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು
ಡಿಕೆ ಶಿವಕುಮಾರ್
ಹರೀಶ್ ಜಿ.ಆರ್​. ನವದೆಹಲಿ
| Updated By: Ganapathi Sharma|

Updated on:Jun 29, 2023 | 9:23 PM

Share

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ನೀಡುವ ನಿರ್ಧಾರ ಕೈಗೊಂಡಿರುವುದನ್ನು ಬಿಜೆಪಿ ನಾಯಕರು ಟೀಕಿಸುತ್ತಿರುವುದಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಗುರುವಾರ ತಿರುಗೇಟು ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಅಕ್ಕಿ ಸಿಗದಿದ್ರೆ ಹಣ ನೀಡುವಂತೆ ಬಿಜೆಪಿಯವರೇ ಸಲಹೆ ನೀಡಿದ್ದರು. ತಾತ್ಕಾಲಿಕವಾಗಿ ಅಕ್ಕಿ ಬದಲು ನಾವು ಜನರಿಗೆ ಹಣ ನೀಡುತ್ತಿದ್ದೇವೆ. ನಮ್ಮ ರಾಜ್ಯದಲ್ಲೇ ಅಕ್ಕಿ ಸಂಗ್ರಹ ಮಾಡಲು ಚಿಂತನೆ ಇದೆ ಎಂದು ಹೇಳಿದರು.

5 ಕೆಜಿ ಸೇರಿ 10 ಕೆಜಿ ಅಕ್ಕಿ ಕೊಡುವುದಾಗಿ ಮಾತು ಕೊಟ್ಟಿದ್ದೆವು. ಕೊಟ್ಟ ಮಾತು ಉಳಿಸಿಕೊಳ್ಳಲು ಜನರ ಖಾತೆಗೆ ಹಣ ವರ್ಗಾವಣೆ ಮಾಡಲು ಮುಂದಾಗಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಲು ದೆಹಲಿಗೆ ಬಂದಿದ್ದೇನೆ. ರಾಜ್ಯದ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಬಂದಿದ್ದೇನೆ. ಈಗ ಅವರನ್ನು​​ ಭೇಟಿ ಮಾಡುತ್ತೇನೆ. ಸಚಿವರ ಜತೆ ಏನೆಲ್ಲಾ ಚರ್ಚೆ ಮಾಡಿದ್ದೇನೆಂದು ನಾಳೆ (ಶುಕ್ರವಾರ) ಬೆಳಗ್ಗೆ ತಿಳಿಸುತ್ತೇನೆ ಎಂದು ಅವರು ಹೇಳಿದರು. ಬಳಿಕ ಗಜೇಂದ್ರ ಸಿಂಗ್ ಭೇಟಿಗೆ ತೆರಳಿದರು.

ಇದನ್ನೂ ಓದಿ: ಶ್ರಮ ಒಬ್ಬರದ್ದು, ಅನುಭವಿಸುವವರು ಮತ್ತೊಬ್ಬರು; ಚರ್ಚೆಗೆ ಗ್ರಾಸವಾಯ್ತು ಡಿಕೆ ಶಿವಕುಮಾರ್ ‘ಮಾರ್ಮಿಕ’ ಹೇಳಿಕೆ

ಮೇಕೆದಾಟು ಮಾತ್ರವಲ್ಲ, ರಾಜ್ಯದ ಸಮಗ್ರ ಹಲವು ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು. ನೀರಾವರಿ ಇಲಾಖೆ ಬಗ್ಗೆ ಸಮಾಲೋಚನೆ ಮಾಡಲಾಗುತ್ತದೆ. ಮೊದಲ ಬಾರಿಗೆ ಸೌಹಾರ್ದಯುತವಾಗಿ ಮಾತುಕತೆ ನಡೆಸಲಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಬೊಮ್ಮಾಯಿ ಭೇಟಿ ಸಮರ್ಥಿಸಿದ ಡಿಕೆ ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿರುವುದನ್ನು ಕೆಲವು ಮಂದಿ ಬಿಜೆಪಿ ನಾಯಕರು ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನಾನು ಎಲ್ಲಾ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದೇನೆ. ಎಸ್​ಎಂ ಕೃಷ್ಣ, ಜಗದೀಶ ಶೆಟ್ಟರ್​, ಹೆಚ್​ಡಿ ದೇವೇಗೌಡರನ್ನು ಭೇಟಿಯಾಗಿದ್ದೇನೆ. ಸದಾನಂದಗೌಡ ಭೇಟಿಗೂ ಸಮಯ ಕೇಳಿದ್ದೇನೆ, ಅದರಲ್ಲಿ ತಪ್ಪಿಲ್ಲ. ಚುನಾವಣಾ ರಾಜಕೀಯವೇ ಬೇರೆ, ಅಭಿವೃದ್ಧಿ ರಾಜಕೀಯವೇ ಬೇರೆ. ಯಾರೋ ಕೆಲವು ಮಂದಿ ಬಿಜೆಪಿ ನಾಯಕರ ಟೀಕೆಗೆ ನಾನು ತಲೆಕೆಡಿಸಿಕೊಳ್ಳಲ್ಲ. ಹಿರಿಯರು, ಅನುಭವಿಗಳ ಸಲಹೆ ಪಡೆಯುವುದರಲ್ಲಿ ಯಾವ ತಪ್ಪಿಲ್ಲ ಎಂದು ಹೇಳಿದರು.

ಸ್ವಪಕ್ಷ ನಾಯಕರ ವಿರುದ್ಧವೇ ಬಿಜೆಪಿಗರ ಅಸಮಾಧಾನ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಬಿಜೆಪಿ ವಿಚಾರವನ್ನು ಅವರ ಪಕ್ಷದವರು ನೋಡಿಕೊಳ್ಳುತ್ತಾರೆ. ನಾನ್ಯಾಕೆ ಬಿಜೆಪಿಯ ತಟ್ಟೆಗೆ ಕೈ ಹಾಕಲು ಹೋಗಲಿ? ಅವರ ಪಕ್ಷದದಲ್ಲಿ ದೊಡ್ಡ ದೊಡ್ಡ ಲೀಡರ್​​ಗಳೇ ಇದ್ದಾರೆ. ಕಾಂಗ್ರೆಸ್ ಪಕ್ಷವನ್ನೂ ಸಹ ಟೀಕೆ ಮಾಡುವವರು ಇದ್ದಾರೆ. ಅವರ ಪಕ್ಷದ ಬಗ್ಗೆ ಟೀಕೆ ಮಾಡುವವರು ಕೂಡ ಇದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:20 pm, Thu, 29 June 23

ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್
ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್
ಸನಾತನ ಧರ್ಮದಲ್ಲಿ 9 ರ ಸಂಖ್ಯೆಯ ಮಹತ್ವ ಏನು ಗೊತ್ತೇ? ಇಲ್ಲಿದೆ ನೋಡಿ
ಸನಾತನ ಧರ್ಮದಲ್ಲಿ 9 ರ ಸಂಖ್ಯೆಯ ಮಹತ್ವ ಏನು ಗೊತ್ತೇ? ಇಲ್ಲಿದೆ ನೋಡಿ