AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾಗಿ ಡಿಕೆ ಶಿವಕುಮಾರ್ ಇಟ್ಟ 9 ಬೇಡಿಕೆಗಳು ಹೀಗಿವೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮೂರು ದಿನದ ನವದೆಹಲಿ ಪ್ರವಾಸ ಮುಗಿಸಿ ಇದೀಗ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ನೀತಿ ಆಯೋಗದ ಸಭೆ ಸಂಬಂಧ ದೆಹಲಿಗೆ ತೆರಳಿದ್ದ ಡಿಕೆಶಿ, ಪ್ರಧಾನಿ ನರೇಂದ್ರ ಮೋದಿಯಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಕರ್ನಾಟಕದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವಿ ಮಾಡಿದ್ದಾರೆ. ಇಂದು(ಜೂನ್ 12) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿ ಮಾಡಿ 9 ಬೇಡಿಕೆಗಳನ್ನಿಟ್ಟಿದ್ದಾರೆ. ಯಾವುವು ಆ ಒಂಭತ್ತು ಬೇಡಿಕೆಗಳು ಎನ್ನುವ ಪಟ್ಟಿ ಈ ಕೆಳಗಿನಂತಿದೆ.

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾಗಿ ಡಿಕೆ ಶಿವಕುಮಾರ್ ಇಟ್ಟ 9 ಬೇಡಿಕೆಗಳು ಹೀಗಿವೆ
Amit Shah And Dk Shivakumar
ರಮೇಶ್ ಬಿ. ಜವಳಗೇರಾ
|

Updated on: Jun 12, 2026 | 9:54 PM

Share

ನವದೆಹಲಿ, (ಜೂನ್ 12): ಡಿಕೆ ಶಿವಕುಮಾರ್ (DK Shivakumar)  ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ದೆಹಲಿಯಲ್ಲಿ (New Delhi) ನಡೆದ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದು, ತಮ್ಮ ಮೊದಲ ಸಭೆಯಲ್ಲಿ ಕೆಲ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಭೇಟಿ ಮಾಡಿ ಕರ್ನಾಟಕದ (Karnataka) ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವಿ ಮಾಡಿದ್ದಾರೆ. ಇನ್ನು ಇಂದು (ಜೂನ್ 12) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನೂ ಸಹ ಭೇಟಿ ಮಾಡಿದ್ದು, ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗಲು ಮನವಿ ಮಾಡಿದ್ದಾರೆ. ಅಲ್ಲದೇ ಈ ವೇಳೆ ಒಂಭತ್ತು ಬೇಡಿಕೆಗಳ ಮನವಿಯನ್ನೂ ಸಲ್ಲಿಕೆ ಮಾಡಿದ್ದಾರೆ.

ಮುಖ್ಯಾಂಶಗಳು

  • ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
  • ದೆಹಲಿಯ ಕರ್ತವ್ಯಭವನದಲ್ಲಿ ಅಮಿತ್ ಶಾ ಭೇಟಿಯಾಗಿ ಮಹತ್ವದ ಚರ್ಚೆ
  • ಇದೇ ವೇಳೆ ಅಮಿತ್ ಶಾ ಮುಂದೆ ಕರ್ನಾಟಕಕ್ಕೆ ಸಂಬಂಧಿಸಿದಂತೆ ಒಂಭತ್ತು ಬೇಡಿಕೆಗಳನ್ನಿಟ್ಟ ಡಿಕೆಶಿ

ಇದನ್ನೂ ಓದಿ: ಒಂದು ಭೇಟಿ, ಹತ್ತಾರು ಬೇಡಿಕೆ: ಪ್ರಧಾನಿ ಮೋದಿ ಮುಂದೆ ಡಿಕೆಶಿ ಇಟ್ಟ ಬೇಡಿಕೆಗಳಾವುವು? ಇಲ್ಲಿದೆ ಪಟ್ಟಿ

ಅಮಿತ್ ಶಾ ಮುಂದೆ ಡಿಕೆಶಿ ಇಟ್ಟ 9 ಬೇಡಿಕೆಗಳು

  1. ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ (ರಾಷ್ಟ್ರಪತಿಗಳ ಅತ್ಯುನ್ನತ ಗೌರವ) ಪ್ರಶಸ್ತಿ: ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿಯನ್ನು ನೀಡುವ ಕುರಿತಾದ ಪ್ರಸ್ತಾವನೆಯನ್ನು 08-05-2024 ರಂದು ಭಾರತ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಪ್ರಸ್ತುತ ಅದು ಪರಿಶೀಲನೆಯಲ್ಲಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇನ್ನು ಸಹ ಈ ಪ್ರತಿಷ್ಠಿತ ಗೌರವವನ್ನು ಸ್ವೀಕರಿಸಬೇಕಾಗಿದೆ. ಈ ವಿಷಯವನ್ನು ಶೀಘ್ರವಾಗಿ ಪರಿಶೀಲಿಸಿ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ ನೀಡಲು ಅನುಮೋದನೆ ನೀಡಬೇಕು.
  2. ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (IRBs) ಸೃಷ್ಟಿ: ವಿಜಯನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಇನ್ನೂ ಎರಡು ಹೆಚ್ಚುವರಿ ಐಆರ್‌ಬಿ (IRB) ಬೆಟಾಲಿಯನ್‌ಗಳನ್ನು ಸ್ಥಾಪಿಸಲು ಅಂದಾಜು 243.87 ಕೋಟಿ ರೂ.ಗಳ ವೆಚ್ಚದ ಹೊಸ ಪ್ರಸ್ತಾವನೆಯನ್ನು ಪತ್ರ ಸಂಖ್ಯೆ HD/133/POP/2024 ದಿನಾಂಕ 04-02-2025 ರ ಮೂಲಕ ಸಚಿವಾಲಯಕ್ಕೆ ಕಳುಹಿಸಲಾಗಿದೆ.ಇದಕ್ಕೆ ಶೀಘ್ರವಾಗಿ ಮಂಜೂರಾತಿ ನೀಡಬೇಕೆಂದು ನಾನು ವಿನಂತಿಸುತ್ತೇನೆ.
  3. ಪೊಲೀಸ್ ವ್ಯವಸ್ಥೆ ಆಧುನೀಕರಣಕ್ಕಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೆರವು (ASUMP) – 2025-26:ನಾಲ್ಕು ಪ್ರಮುಖ ನಗರಗಳಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ಗಳು ಹಾಗೂ ಸಂವಹನ ಉಪಕರಣಗಳ ಸ್ಥಾಪನೆಗಾಗಿ ASUMP ಯೋಜನೆಯಡಿ 280.00 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆದಷ್ಟು ಬೇಗ ಮಂಜೂರಾತಿ ನೀಡಬೇಕು.
  4. ಕಂಪನಿಗಳ ಕಾಯ್ದೆ, 2013 ರ ಶೆಡ್ಯೂಲ್ VII ರ ಅಡಿಯಲ್ಲಿ ಪೊಲೀಸ್ ಸಂಬಂಧಿತ ಚಟುವಟಿಕೆಗಳ ಸೇರ್ಪಡೆ (CSR): ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯನ್ನು ಬಳಸಿಕೊಳ್ಳಲು ಅನುಕೂಲವಾಗುವಂತೆ ಕಂಪನಿಗಳ ಕಾಯ್ದೆ, 2013 ರ ಶೆಡ್ಯೂಲ್ VII ರ ಅಡಿಯಲ್ಲಿ ಪೊಲೀಸ್ ಸಂಬಂಧಿತ ಚಟುವಟಿಕೆಗಳನ್ನು ಸೇರಿಸುವ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು, ಶೀಘ್ರವಾಗಿ ಅನುಮೋದನೆ ನೀಡಬೇಕು.
  5.  ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಮೇಲ್ದರ್ಜೀಕರಣ:BPR&D ಯ ಗ್ಯಾಪ್ ಅನಾಲಿಸಿಸ್ (GAP Analysis) ಮಾರ್ಗಸೂಚಿಗಳ ಪ್ರಕಾರ ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೆ ಏರಿಸಲು 258.53 ಕೋಟಿ ರೂ.ಗಳ ವಿವರವಾದ ಪ್ರಸ್ತಾವನೆ ಸಲ್ಲಿಸಲಾಗಿದೆಇದಕ್ಕೆ ನಿಮ್ಮ ಅನುಮೋದನೆ ಕೋರುತ್ತೇನೆ.
  6. ಕಾರಾಗೃಹಗಳ (ಜೈಲುಗಳ) ಆಧುನೀಕರಣ: ಕಾರಾಗೃಹಗಳ ಆಧುನೀಕರಣ ಯೋಜನೆಯಡಿ 2025-26 ರ ಆರ್ಥಿಕ ವರ್ಷಕ್ಕೆ (ಸಿಸಿಟಿವಿ, ವಾಕಿ-ಟಾಕಿ ಮತ್ತು ಇತರ ಭದ್ರತಾ ಉಪಕರಣಗಳ ಖರೀದಿಗೆ) 20 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಮೊತ್ತವನ್ನು ಶೀಘ್ರ ಮಂಜೂರು ಮಾಡಬೇಕು.
  7.  ಕೇಂದ್ರ ಮೋಟಾರು ವಾಹನಗಳ ನಿಯಮಗಳು, 1989 ರ ನಿಯಮ 52-A ಅನುಷ್ಠಾನದ ಗಡುವು ವಿಸ್ತರಣೆ: ಕರ್ನಾಟಕದಲ್ಲಿ ನಿಯಮ 52-A ಅನ್ನು ಅನುಷ್ಠಾನಗೊಳಿಸಲು ಗಡುವನ್ನು ವಿಸ್ತರಿಸುವಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ. ದಯವಿಟ್ಟು ತಾವು ಈ ವಿಷಯವನ್ನು ಸಂಬಂಧಪಟ್ಟ ಸಚಿವಾಲಯದೊಂದಿಗೆ ಚರ್ಚಿಸಿ, ಆದಷ್ಟು ಬೇಗ ಅನುಮೋದನೆ ಕೊಡಿಸಬೇಕು.
  8.  ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ (CCTV) ಕ್ಯಾಮೆರಾಗಳ ಮೇಲ್ದರ್ಜೀಕರಣ: ಗೌರವಾನ್ವಿತ ಭಾರತದ ಸುಪ್ರೀಂ ಕೋರ್ಟ್ ಮುಂದೆ ನಡೆದ ಚರ್ಚೆಗಳ ಅನುಸಾರ, ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಮೇಲ್ದರ್ಜೆಗೆ ಏರಿಸಲು ASUMP ಅಡಿಯಲ್ಲಿ 278.26 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಸಕಾರಾತ್ಮಕವಾಗಿ ಪರಿಗಣಿಸಬೇಕು.
  9.  ಕರ್ನಾಟಕ ಸೈಬರ್ ಕ್ರೈಮ್ ಕಂಟ್ರೋಲ್ ಅಂಡ್ ಕೋಆರ್ಡಿನೇಷನ್ ಯುನಿಟ್ (K4C) ಸ್ಥಾಪನೆ: ಸೈಬರ್ ಅಪರಾಧಗಳು ಸಮಾಜ, ಆರ್ಥಿಕತೆ ಮತ್ತು ರಾಷ್ಟ್ರೀಯ ಭದ್ರತೆಗೆ ಗಂಭೀರ ಹಾಗೂ ನಿರಂತರ ಸವಾಲನ್ನು ಒಡ್ಡುತ್ತಿವೆ. ಇವುಗಳನ್ನು ನಿಗ್ರಹಿಸಲು ಅತ್ಯಾಧುನಿಕ ಸೈಬರ್ ಭದ್ರತಾ ವ್ಯವಸ್ಥೆ ಅಗತ್ಯವಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ